April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ದಿ ಹೇರ್‌ಲೇರ್ ಮೆನ್ಸ್ ಸೆಲೂನ್ ಉದ್ಘಾಟನೆ: ನೂತನ ಸೆಲೂನನ್ನು ಉದ್ಘಾಟಿಸಿ ಶುಭ ಹಾರೈಸಿದ ಖ್ಯಾತ ವೈದ್ಯ ಡಾ| ಶಾಂತಿಪ್ರಸಾದ್

ವೇಣೂರು: ಇಲ್ಲಿಯ ನೂತನ ಬಸ್ ತಂಗುದಾಣದ ನೆಲಮಹಡಿಯಲ್ಲಿ ನೂತನವಾಗಿ ಅರಂಭಗೊಂಡ ದಿ ಹೇರ್‌ಲೇರ್ ಮೆನ್ಸ್ ಸೆಲೂನ್‌ನ ಉದ್ಘಾಟನೆಯು ಇತ್ತೀಚೆಗೆ ಜರಗಿತು.


ವೇಣೂರಿನ ಪ್ರಖ್ಯಾತ ವೈದ್ಯರಾದ ಡಾ| ಶಾಂತಿಪ್ರಸಾದ್ ಅವರು ನೂತನ ಸೆಲೂನನ್ನು ಉದ್ಘಾಟಿಸಿ, ಶುಭ ಹಾರೈಸಿದರು. ವೇಣೂರು ಗ್ರಾ.ಪಂ. ಅಧ್ಯಕ್ಷರಾದ ನೇಮಯ್ಯ ಕುಲಾಲ್, ಪಂಚಾಯತ್‌ನ ಅಭಿವೃದ್ಧಿ ಅಧಿಕಾರಿ ನಾಗೇಶ್ ಎಂ., ವೆಂಕಟೇಶ್ ಭಂಡಾರಿ ಚಿಕ್ಕಮಗಳೂರು, ದಿವಾಕರ ಭಂಡಾರಿ ನಾರಾವಿ, ಪೂವಪ್ಪ ಭಂಡಾರಿ ಬೆಳ್ತಂಗಡಿ, ಉಮೇಶ್ ಭಂಡಾರಿ ಪಡ್ಡಂದಡ್ಕ, ಅಣ್ಣಿ ಭಂಡಾರಿ ಬೆಳ್ತಂಗಡಿ, ಗುಂಡ್ಯಲ್ಕೆ ಅಶೋಕ್ ಭಂಡಾರಿ, ಗಣೇಶ್ ನರ್ಮದಾ ಸ್ಟುಡಿಯೋ, ನಾಗಪ್ಪ, ಲಿಂಗಪ್ಪ ಮೂಲ್ಯ, ರವೀಂದ್ರ ಭಂಡಾರಿ ಮಂಗಳೂರು ವೇಣೂರಿನ ಉದ್ಯಮಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.


ಸಂಸ್ಥೆಯ ಮಾಲಕರಲ್ಲಿ ಓರ್ವರಾದ ಪ್ರಜ್ವಲ್ ಭಂಡಾರಿ ಮಾತನಾಡಿ, ಮಂಗಳೂರಿನ ಮುಡಿಪು ಮತ್ತು ಕಾಯರ್‌ಗೋಳಿಯಲ್ಲಿ ನಮ್ಮ ಸಂಸ್ಥೆ ಕಾರ್ಯಾಚರಿಸುತ್ತಿದ್ದು, ಗ್ರಾಹಕರಿಗೆ ತೃಪ್ತಿದಾಯಕ ಸೇವೆ ನೀಡುತ್ತಿದೆ. ವೇಣೂರಿನ ನೂತನ ಸೆಲೂನಲ್ಲೂ ಗ್ರಾಹಕರಿಗೆ ಆಶಾದಾಯಕ ಸೇವೆ ನೀಡಲು ಸನ್ನದ್ಧರಾಗಿದ್ದು, ತ್ವರಿತ ಸೇವೆಗಾಗಿ ಮೂವರು ಸಿಬ್ಬಂದಿ ಕಾರ್ಯಾಚರಿಸುತ್ತಿದ್ದಾರೆ ಎಂದರು. ಸಂಸ್ಥೆಯ ಸಹವರ್ತಿಗಳಾದ ವೇಣೂರು ಮೋಹನ್ ಭಂಡಾರಿ, ಪ್ರಮೋದ್ ಭಂಡಾರಿ ಅತಿಥಿಗಳನ್ನ ಸತ್ಕರಿಸಿದರು.

Related posts

ಎಸ್ ಎಸ್ ಎಲ್ ಸಿ ಫಲಿತಾಂಶ: ಮೂಡಿಗೆರೆ ತಾಲೂಕಿಗೆ ಎಳನೀರಿನ ಅಧಿತಿ ಪಿ ಜೈನ್ ಪ್ರಥಮ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬದ ಸಲುವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ತಂಡದ ಸಹಕಾರದಲ್ಲಿ ಸುಲ್ಕೇರಿ ಶ್ರೀರಾಮ ಶಾಲೆಗೆ ಧನಸಹಾಯ ಹಸ್ತಾoತರ

Suddi Udaya

ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ: ದೈವದ ಪಾತ್ರಿ ಸೇವೆಯಿಂದ ನಿವೃತ್ತಿ ಹೊಂದಿದ್ದ ಪೂವಾಜೆ ರುಕ್ಮಯ್ಯ ಗೌಡರಿಗೆ ಸನ್ಮಾನ

Suddi Udaya

ಕಲ್ಮಂಜ: ನಿಡಿಗಲ್ ಸಮೀಪ ಪಾದಾಚಾರಿಗೆ ಬಸ್ ಡಿಕ್ಕಿ : ಪಾದಾಚಾರಿ ಗಂಭೀರ ಗಾಯ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ಮತದಾರರ ಚೇತನ ಅಭಿಯಾನದ ಪ್ರಯುಕ್ತ ಬಿ.ಎಲ್. ಎ. – 2 ಗಳ ಕಾರ್ಯಾಗಾರ

Suddi Udaya
error: Content is protected !!