23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ದಿ ಹೇರ್‌ಲೇರ್ ಮೆನ್ಸ್ ಸೆಲೂನ್ ಉದ್ಘಾಟನೆ: ನೂತನ ಸೆಲೂನನ್ನು ಉದ್ಘಾಟಿಸಿ ಶುಭ ಹಾರೈಸಿದ ಖ್ಯಾತ ವೈದ್ಯ ಡಾ| ಶಾಂತಿಪ್ರಸಾದ್

ವೇಣೂರು: ಇಲ್ಲಿಯ ನೂತನ ಬಸ್ ತಂಗುದಾಣದ ನೆಲಮಹಡಿಯಲ್ಲಿ ನೂತನವಾಗಿ ಅರಂಭಗೊಂಡ ದಿ ಹೇರ್‌ಲೇರ್ ಮೆನ್ಸ್ ಸೆಲೂನ್‌ನ ಉದ್ಘಾಟನೆಯು ಇತ್ತೀಚೆಗೆ ಜರಗಿತು.


ವೇಣೂರಿನ ಪ್ರಖ್ಯಾತ ವೈದ್ಯರಾದ ಡಾ| ಶಾಂತಿಪ್ರಸಾದ್ ಅವರು ನೂತನ ಸೆಲೂನನ್ನು ಉದ್ಘಾಟಿಸಿ, ಶುಭ ಹಾರೈಸಿದರು. ವೇಣೂರು ಗ್ರಾ.ಪಂ. ಅಧ್ಯಕ್ಷರಾದ ನೇಮಯ್ಯ ಕುಲಾಲ್, ಪಂಚಾಯತ್‌ನ ಅಭಿವೃದ್ಧಿ ಅಧಿಕಾರಿ ನಾಗೇಶ್ ಎಂ., ವೆಂಕಟೇಶ್ ಭಂಡಾರಿ ಚಿಕ್ಕಮಗಳೂರು, ದಿವಾಕರ ಭಂಡಾರಿ ನಾರಾವಿ, ಪೂವಪ್ಪ ಭಂಡಾರಿ ಬೆಳ್ತಂಗಡಿ, ಉಮೇಶ್ ಭಂಡಾರಿ ಪಡ್ಡಂದಡ್ಕ, ಅಣ್ಣಿ ಭಂಡಾರಿ ಬೆಳ್ತಂಗಡಿ, ಗುಂಡ್ಯಲ್ಕೆ ಅಶೋಕ್ ಭಂಡಾರಿ, ಗಣೇಶ್ ನರ್ಮದಾ ಸ್ಟುಡಿಯೋ, ನಾಗಪ್ಪ, ಲಿಂಗಪ್ಪ ಮೂಲ್ಯ, ರವೀಂದ್ರ ಭಂಡಾರಿ ಮಂಗಳೂರು ವೇಣೂರಿನ ಉದ್ಯಮಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.


ಸಂಸ್ಥೆಯ ಮಾಲಕರಲ್ಲಿ ಓರ್ವರಾದ ಪ್ರಜ್ವಲ್ ಭಂಡಾರಿ ಮಾತನಾಡಿ, ಮಂಗಳೂರಿನ ಮುಡಿಪು ಮತ್ತು ಕಾಯರ್‌ಗೋಳಿಯಲ್ಲಿ ನಮ್ಮ ಸಂಸ್ಥೆ ಕಾರ್ಯಾಚರಿಸುತ್ತಿದ್ದು, ಗ್ರಾಹಕರಿಗೆ ತೃಪ್ತಿದಾಯಕ ಸೇವೆ ನೀಡುತ್ತಿದೆ. ವೇಣೂರಿನ ನೂತನ ಸೆಲೂನಲ್ಲೂ ಗ್ರಾಹಕರಿಗೆ ಆಶಾದಾಯಕ ಸೇವೆ ನೀಡಲು ಸನ್ನದ್ಧರಾಗಿದ್ದು, ತ್ವರಿತ ಸೇವೆಗಾಗಿ ಮೂವರು ಸಿಬ್ಬಂದಿ ಕಾರ್ಯಾಚರಿಸುತ್ತಿದ್ದಾರೆ ಎಂದರು. ಸಂಸ್ಥೆಯ ಸಹವರ್ತಿಗಳಾದ ವೇಣೂರು ಮೋಹನ್ ಭಂಡಾರಿ, ಪ್ರಮೋದ್ ಭಂಡಾರಿ ಅತಿಥಿಗಳನ್ನ ಸತ್ಕರಿಸಿದರು.

Related posts

ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ

Suddi Udaya

ಕಾಯರ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ನೂತನ ಎರಡು ತರಗತಿ ಕೊಠಡಿಗಳ ಶಿಲಾನ್ಯಾಸ ಹಾಗೂ ಸ್ಮಾರ್ಟ್ ಟಿವಿ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಅಭಿವೃದ್ಧಿಗೆ ದೇಣಿಗೆ ಹಸ್ತಾಂತರ

Suddi Udaya

ಜ.10: ವಿದ್ಯುತ್ ನಿಲುಗಡೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya

ಭಾರಿ ಮಳೆ ನಾಳೆ (ಜೂ.27) ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

Suddi Udaya
error: Content is protected !!