July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ದಿ ಹೇರ್‌ಲೇರ್ ಮೆನ್ಸ್ ಸೆಲೂನ್ ಉದ್ಘಾಟನೆ: ನೂತನ ಸೆಲೂನನ್ನು ಉದ್ಘಾಟಿಸಿ ಶುಭ ಹಾರೈಸಿದ ಖ್ಯಾತ ವೈದ್ಯ ಡಾ| ಶಾಂತಿಪ್ರಸಾದ್

ವೇಣೂರು: ಇಲ್ಲಿಯ ನೂತನ ಬಸ್ ತಂಗುದಾಣದ ನೆಲಮಹಡಿಯಲ್ಲಿ ನೂತನವಾಗಿ ಅರಂಭಗೊಂಡ ದಿ ಹೇರ್‌ಲೇರ್ ಮೆನ್ಸ್ ಸೆಲೂನ್‌ನ ಉದ್ಘಾಟನೆಯು ಇತ್ತೀಚೆಗೆ ಜರಗಿತು.


ವೇಣೂರಿನ ಪ್ರಖ್ಯಾತ ವೈದ್ಯರಾದ ಡಾ| ಶಾಂತಿಪ್ರಸಾದ್ ಅವರು ನೂತನ ಸೆಲೂನನ್ನು ಉದ್ಘಾಟಿಸಿ, ಶುಭ ಹಾರೈಸಿದರು. ವೇಣೂರು ಗ್ರಾ.ಪಂ. ಅಧ್ಯಕ್ಷರಾದ ನೇಮಯ್ಯ ಕುಲಾಲ್, ಪಂಚಾಯತ್‌ನ ಅಭಿವೃದ್ಧಿ ಅಧಿಕಾರಿ ನಾಗೇಶ್ ಎಂ., ವೆಂಕಟೇಶ್ ಭಂಡಾರಿ ಚಿಕ್ಕಮಗಳೂರು, ದಿವಾಕರ ಭಂಡಾರಿ ನಾರಾವಿ, ಪೂವಪ್ಪ ಭಂಡಾರಿ ಬೆಳ್ತಂಗಡಿ, ಉಮೇಶ್ ಭಂಡಾರಿ ಪಡ್ಡಂದಡ್ಕ, ಅಣ್ಣಿ ಭಂಡಾರಿ ಬೆಳ್ತಂಗಡಿ, ಗುಂಡ್ಯಲ್ಕೆ ಅಶೋಕ್ ಭಂಡಾರಿ, ಗಣೇಶ್ ನರ್ಮದಾ ಸ್ಟುಡಿಯೋ, ನಾಗಪ್ಪ, ಲಿಂಗಪ್ಪ ಮೂಲ್ಯ, ರವೀಂದ್ರ ಭಂಡಾರಿ ಮಂಗಳೂರು ವೇಣೂರಿನ ಉದ್ಯಮಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.


ಸಂಸ್ಥೆಯ ಮಾಲಕರಲ್ಲಿ ಓರ್ವರಾದ ಪ್ರಜ್ವಲ್ ಭಂಡಾರಿ ಮಾತನಾಡಿ, ಮಂಗಳೂರಿನ ಮುಡಿಪು ಮತ್ತು ಕಾಯರ್‌ಗೋಳಿಯಲ್ಲಿ ನಮ್ಮ ಸಂಸ್ಥೆ ಕಾರ್ಯಾಚರಿಸುತ್ತಿದ್ದು, ಗ್ರಾಹಕರಿಗೆ ತೃಪ್ತಿದಾಯಕ ಸೇವೆ ನೀಡುತ್ತಿದೆ. ವೇಣೂರಿನ ನೂತನ ಸೆಲೂನಲ್ಲೂ ಗ್ರಾಹಕರಿಗೆ ಆಶಾದಾಯಕ ಸೇವೆ ನೀಡಲು ಸನ್ನದ್ಧರಾಗಿದ್ದು, ತ್ವರಿತ ಸೇವೆಗಾಗಿ ಮೂವರು ಸಿಬ್ಬಂದಿ ಕಾರ್ಯಾಚರಿಸುತ್ತಿದ್ದಾರೆ ಎಂದರು. ಸಂಸ್ಥೆಯ ಸಹವರ್ತಿಗಳಾದ ವೇಣೂರು ಮೋಹನ್ ಭಂಡಾರಿ, ಪ್ರಮೋದ್ ಭಂಡಾರಿ ಅತಿಥಿಗಳನ್ನ ಸತ್ಕರಿಸಿದರು.

Related posts

ಪಡಂಗಡಿ: ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya

ಉಜಿರೆ ಕ್ರೀಡಾ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜು ಎದುರು ಸ್ಕೂಟಿ ಮತ್ತು ಗೂಡ್ಸ್ ಲಾರಿ ಡಿಕ್ಕಿ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಕರಾಯದ ಬಾಲಕೃಷ್ಣ ನಾಯ್ಕ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಮಹೇಶ್ ಶೆಟ್ಟಿಯವರು‌ ಕಾಂಗ್ರೆಸ್ ಗೆ ಬೆಂಬಲ‌ ನೀಡಿದ್ರೆ ಅದು ವ್ಯಕ್ತಿಗತ, ಪಕ್ಷವಾಗಿ ಅಲ್ಲ, ಶಶಿರಾಜ್ ಶೆಟ್ಟಿಯವರ ಆರೋಪ ಸತ್ಯಕ್ಕೆ ದೂರವಾದದ್ದು

Suddi Udaya

ಕು.ಸೌಜನ್ಯಳ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಭೇಟಿ

Suddi Udaya
error: Content is protected !!