25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಲಾಯಿಲ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

ಲಾಯಿಲ : ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಲಾಯಿಲ ಕರ್ನೋಡಿಯಲ್ಲಿ ಮಕ್ಕಳ ಹಕ್ಕುಗಳ ಸಂಘವನ್ನು ಜು.12ರಂದು ಉದ್ಘಾಟಿಸಲಾಯಿತು..

ಸಂಘದ ಉದ್ಘಾಟನೆಯನ್ನು ನೆರವೇರಿಸಿದ ಮುಖ್ಯೋಪಾಧ್ಯಾಯರಾದ ಜಗನ್ನಾಥ ಎಮ್ ಮಾತಾಡಿ ವಿದ್ಯಾರ್ಥಿಗಳು ಮಕ್ಕಳ ಹಕ್ಕುಗಳ ಸಂಘದ ಸದುಪಯೋಗವನ್ನು ಪಡೆದುಕೊಳ್ಳಬೇಕು, ಸಂಘದ ಚಟುವಟಿಕೆಗಳ ಮೂಲಕ ದೊರಕುವ ಅವಕಾಶವನ್ನು ಬಳಸಿಕೊಂಡು ತಮ್ಮ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದರು.

ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಮಕ್ಕಳ ಹಕ್ಕುಗಳ ಸಂಘದ ಸಂಯೋಜಕರಾದ ಚೈಲ್ಡ್ ರೈಟ್ಸ್ ಟ್ರಸ್ಟ್ ನ ವಿನೋದ್ ಪ್ರಸಾದ್ ಕಲ್ಲಾಜೆ , ಮಕ್ಕಳ ಹಕ್ಕುಗಳ ಸಂಘದ ವಾರ್ಷಿಕ ಚಟುವಟಿಕೆಗಳ ಕುರಿತು ಹಾಗೂ ವಿದ್ಯಾರ್ಥಿಗಳಿಗೆ ದೊರಕುವ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಸದಸ್ಯರಿಗೆ ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಂಗಳೂರು ವತಿಯಿಂದ “ಮಕ್ಕಳ ಹಕ್ಕುಗಳ ಜಾರಿಯಲ್ಲಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತ್” ಪುಸ್ತಕವನ್ನು ವಿತರಿಸಲಾಯಿತು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಮಕ್ಕಳ ಹಕ್ಕುಗಳ ಸಂಘದ ಮಾರ್ಗದರ್ಶಿ ಅಧ್ಯಾಪಕರಾದ ಕೃಷ್ಣಕುಮಾರ್ ಹಾಗೂ ಅಧ್ಯಾಪಕಿಯರಾದ ಉಷಾ.ಕೆ , ಗಂಗಾರಾಣಿ ನಾ.ಜೋಶಿ ಉಪಸ್ಥಿತರಿದ್ದರು.

Related posts

ಕಿರಣ್‌ಚಂದ್ರ ಪುಷ್ಪಗಿರಿ ರವರಿಂದ ಡಯಾಲಿಸಿಸ್ ಬಂಧುಗಳಿಗೆ ಅಕ್ಕಿ ಹಾಗೂ ದಿನಸಿ ಸಾಮಾಗ್ರಿ ವಿತರಣೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಮಾಲಾಡಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

Suddi Udaya

ಮಡಂತ್ಯಾರಿನಲ್ಲಿ ಕ್ಲಾಸಿಕ್ ಮೆನ್ಸ್ ವೇರ್ ಶುಭಾರಂಭ

Suddi Udaya

ತಾಲೂಕು ಮಟ್ಟದ ಚೆಸ್ ಪಂದ್ಯಾಟ: ಬೆಳ್ತಂಗಡಿ ಎಸ್.ಡಿ .ಎಮ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಪಟ್ರಮೆ: ಕುಶಾಲಪ್ಪ ನಾಯ್ಕ್ ರ ಮನೆಗೆ ತೆಂಗಿನ ಮರ ಬಿದ್ದು, ಹಾನಿ

Suddi Udaya
error: Content is protected !!