22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಲಾಯಿಲ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

ಲಾಯಿಲ : ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಲಾಯಿಲ ಕರ್ನೋಡಿಯಲ್ಲಿ ಮಕ್ಕಳ ಹಕ್ಕುಗಳ ಸಂಘವನ್ನು ಜು.12ರಂದು ಉದ್ಘಾಟಿಸಲಾಯಿತು..

ಸಂಘದ ಉದ್ಘಾಟನೆಯನ್ನು ನೆರವೇರಿಸಿದ ಮುಖ್ಯೋಪಾಧ್ಯಾಯರಾದ ಜಗನ್ನಾಥ ಎಮ್ ಮಾತಾಡಿ ವಿದ್ಯಾರ್ಥಿಗಳು ಮಕ್ಕಳ ಹಕ್ಕುಗಳ ಸಂಘದ ಸದುಪಯೋಗವನ್ನು ಪಡೆದುಕೊಳ್ಳಬೇಕು, ಸಂಘದ ಚಟುವಟಿಕೆಗಳ ಮೂಲಕ ದೊರಕುವ ಅವಕಾಶವನ್ನು ಬಳಸಿಕೊಂಡು ತಮ್ಮ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದರು.

ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಮಕ್ಕಳ ಹಕ್ಕುಗಳ ಸಂಘದ ಸಂಯೋಜಕರಾದ ಚೈಲ್ಡ್ ರೈಟ್ಸ್ ಟ್ರಸ್ಟ್ ನ ವಿನೋದ್ ಪ್ರಸಾದ್ ಕಲ್ಲಾಜೆ , ಮಕ್ಕಳ ಹಕ್ಕುಗಳ ಸಂಘದ ವಾರ್ಷಿಕ ಚಟುವಟಿಕೆಗಳ ಕುರಿತು ಹಾಗೂ ವಿದ್ಯಾರ್ಥಿಗಳಿಗೆ ದೊರಕುವ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಸದಸ್ಯರಿಗೆ ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಂಗಳೂರು ವತಿಯಿಂದ “ಮಕ್ಕಳ ಹಕ್ಕುಗಳ ಜಾರಿಯಲ್ಲಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತ್” ಪುಸ್ತಕವನ್ನು ವಿತರಿಸಲಾಯಿತು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಮಕ್ಕಳ ಹಕ್ಕುಗಳ ಸಂಘದ ಮಾರ್ಗದರ್ಶಿ ಅಧ್ಯಾಪಕರಾದ ಕೃಷ್ಣಕುಮಾರ್ ಹಾಗೂ ಅಧ್ಯಾಪಕಿಯರಾದ ಉಷಾ.ಕೆ , ಗಂಗಾರಾಣಿ ನಾ.ಜೋಶಿ ಉಪಸ್ಥಿತರಿದ್ದರು.

Related posts

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಸಂಯೋಜಿತ ಸಂಘವಾಗಿ ಕನ್ಯಾಡಿ ರಿಕ್ಷಾ ಪಾರ್ಕ್ ಸೇರ್ಪಡೆ

Suddi Udaya

ಗೋವಿಂದೂರು ಮಿತ್ರ ಬಳಗದ ಸದಸ್ಯರಿಂದ ಪಾರೆಂಕಿ ಅಭಿಲಾಷ್ ರವರಿಗೆ ಆರ್ಥಿಕ ನೆರವು

Suddi Udaya

ಉಡುಪಿ-ಉಜಿರೆ ರಸ್ತೆಯುದ್ದಕ್ಕೂ ಮಹೇಶ್ ಶೆಟ್ಟಿ ತಿಮರೋಡಿಗೆ ಅಭಿಮಾನಿಗಳಿಂದ ಭವ್ಯ ಸ್ವಾಗತ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಪದಗ್ರಹಣ

Suddi Udaya

ಮಡಿಕೇರಿಯಲ್ಲಿ ನೂತನ ಮುಳಿಯ ಸಿಲ್ವರಿಯ ಉದ್ಘಾಟನೆ

Suddi Udaya
error: Content is protected !!