September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತೋಟತ್ತಾಡಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಬೆಳ್ತಂಗಡಿ ಮಾದರಿ ಶಾಲೆಗೆ ವಗಾ೯ವಣೆ

ಬೆಳ್ತಂಗಡಿ: ಸರಕಾರಿ ಉನ್ನತ ಪ್ರಾಥಮಿಕ ಶಾಲೆ ತೋಟತ್ತಾಡಿ ಶಾಲೆಯಲ್ಲಿ 26 ವಷ೯ಗಳ ಸುಧೀರ್ಘ ಅವಧಿಯಲ್ಲಿ ಸೇವೆ ಸಲ್ಲಿಸಿದ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಇದೀಗ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಇಲ್ಲಿಗೆ ವರ್ಗಾವಣೆಗೊಂಡಿದ್ದಾರೆ.
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹಂದಾಡಿ ಗ್ರಾಮದ ನಿವಾಸಿಯಾಗಿರುವ ಇವರು ಪ್ರಾಥಮಿಕ ಶಾಲೆ. ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬ್ರಹ್ಮಾವರ. ಪ್ರೌಢಶಾಲೆ ಶಿಕ್ಷಣ ಸೇಂಟ್ ಮೇರಿ ಸೀರಿಯಲ್ ಜೂನಿಯರ್ ಕಾಲೇಜು ಬ್ರಹ್ಮಾವರ, ಟಿ.ಸಿ.ಹೆಚ್.ಶಿಕ್ಷಣ ಕುಮುದಾ ಉಮಾ ಶಂಕರ ಶಿಕ್ಷಕರ ತರಬೇತಿ ಕೇಂದ್ರ ಕೊಕ್ಕರ್ಣಿ ಬ್ರಹ್ಮಾವರದಲ್ಲಿ ಪೂರೈಸಿ, 1986 ರಲ್ಲಿ ಅನಿತಾ ವಿದ್ಯಾ ಸಂಸ್ಥೆ ಕೊಕ್ಕರ್ಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎರಡು ವರ್ಷಗಳ ಶಿಕ್ಷಕ ಸೇವೆ ಆರಂಭಿಸಿದರು.
ನಂತರ 1989 ರಿಂದ ಅನಂತ ಪದ್ಮನಾಭ ಖಾಸಗಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹಂದಾಡಿ ಯಲ್ಲಿ ನಾಲ್ಕು ವರುಷಗಳ ಶಿಕ್ಷಕ ವೃತ್ತಿ ಸೇವೆ, 1994 ರಿಂದ 1997 ಜನವರಿ ವರೆಗೆ ಅನಿತಾ ವಿದ್ಯಾಸಂಸ್ಥೆ ಕೊಕ್ಕರ್ಣಿ ಬ್ರಹ್ಮಾವರ ತಾಲೂಕು ಆಡಳಿತ ಸಂಸ್ಥೆಯಲ್ಲಿ ನಾಲ್ಕು ವರ್ಷಗಳ ಶಿಕ್ಷಕ ಸೇವೆ, ನಂತರ 1997 ಫೆಬ್ರವರಿ ತಿಂಗಳಲ್ಲಿ ಸರಕಾರಿ ಶಾಲಾ ಶಿಕ್ಷಕನಾಗಿ ನೇಮಕಾತಿಗೊಂಡು ಬೆಳ್ತಂಗಡಿ ತಾಲೂಕಿನ ಸರಕಾರಿ ಉನ್ನತ ಪ್ರಾಥಮಿಕ ಶಾಲೆ ತೋಟತ್ತಾಡಿ ಶಾಲೆಯಲ್ಲಿ ಶಿಕ್ಷಕ ವೃತ್ತಿ ಪ್ರಾರಂಭಿಸಿದರು.

ಸುಧೀರ್ಘ 2023 ಜುಲೈ ತಿಂಗಳ ವರೆಗೆ ಸೇವೆ ಸಲ್ಲಿಸಿ ಇದೀಗ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಗೆ ವರ್ಗಾವಣೆಯಾಗಿದ್ದಾರೆ.

Related posts

ಕಡಿರುದ್ಯಾವರ :ಡೆಂಗ್ಯೂ ಜ್ವರದ ಬಗ್ಗೆ ಜನ ಜಾಗೃತಿ ಅಭಿಯಾನ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ್ದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹಾಗೂ ಮಾಜಿ ಶಾಸಕ ಜೆ.ಆರ್ ಲೋಬೋ

Suddi Udaya

ಉಜಿರೆ ಶ್ರೀ ಧ.ಮಂ.ಅ. ಸೆಕೆಂಡರಿ ಶಾಲಾ 2006ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಂದ “ಮೆಲುಕು” ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿ ಭಾಧ್ಯಸ್ಥರೊಂದಿಗೆ ಸಮಾಲೋಚನೆ ನಡೆಸಲು ಬೆಳ್ತಂಗಡಿ ಧರ್ಮಪ್ರಾಂತ್ಯದ ಕೆ ಎಸ್ ಎಂ ಸಿ ಎ ವತಿಯಿಂದ ಅಗ್ರಹ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿ ಸಮಾರೋಪ

Suddi Udaya

ಲಾಯಿಲ ಗ್ರಾ.ಪಂ.ನಲ್ಲಿ ಸ್ವಚ್ಛತಾ ಸಿಬ್ಬಂದಿಗಳಿಗೆ ರೈನ್ ಕೋಟ್ ಹಾಗೂ ಕೊಡೆ ವಿತರಣೆ

Suddi Udaya
error: Content is protected !!