24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತೋಟತ್ತಾಡಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಬೆಳ್ತಂಗಡಿ ಮಾದರಿ ಶಾಲೆಗೆ ವಗಾ೯ವಣೆ

ಬೆಳ್ತಂಗಡಿ: ಸರಕಾರಿ ಉನ್ನತ ಪ್ರಾಥಮಿಕ ಶಾಲೆ ತೋಟತ್ತಾಡಿ ಶಾಲೆಯಲ್ಲಿ 26 ವಷ೯ಗಳ ಸುಧೀರ್ಘ ಅವಧಿಯಲ್ಲಿ ಸೇವೆ ಸಲ್ಲಿಸಿದ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಇದೀಗ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಇಲ್ಲಿಗೆ ವರ್ಗಾವಣೆಗೊಂಡಿದ್ದಾರೆ.
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹಂದಾಡಿ ಗ್ರಾಮದ ನಿವಾಸಿಯಾಗಿರುವ ಇವರು ಪ್ರಾಥಮಿಕ ಶಾಲೆ. ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬ್ರಹ್ಮಾವರ. ಪ್ರೌಢಶಾಲೆ ಶಿಕ್ಷಣ ಸೇಂಟ್ ಮೇರಿ ಸೀರಿಯಲ್ ಜೂನಿಯರ್ ಕಾಲೇಜು ಬ್ರಹ್ಮಾವರ, ಟಿ.ಸಿ.ಹೆಚ್.ಶಿಕ್ಷಣ ಕುಮುದಾ ಉಮಾ ಶಂಕರ ಶಿಕ್ಷಕರ ತರಬೇತಿ ಕೇಂದ್ರ ಕೊಕ್ಕರ್ಣಿ ಬ್ರಹ್ಮಾವರದಲ್ಲಿ ಪೂರೈಸಿ, 1986 ರಲ್ಲಿ ಅನಿತಾ ವಿದ್ಯಾ ಸಂಸ್ಥೆ ಕೊಕ್ಕರ್ಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎರಡು ವರ್ಷಗಳ ಶಿಕ್ಷಕ ಸೇವೆ ಆರಂಭಿಸಿದರು.
ನಂತರ 1989 ರಿಂದ ಅನಂತ ಪದ್ಮನಾಭ ಖಾಸಗಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹಂದಾಡಿ ಯಲ್ಲಿ ನಾಲ್ಕು ವರುಷಗಳ ಶಿಕ್ಷಕ ವೃತ್ತಿ ಸೇವೆ, 1994 ರಿಂದ 1997 ಜನವರಿ ವರೆಗೆ ಅನಿತಾ ವಿದ್ಯಾಸಂಸ್ಥೆ ಕೊಕ್ಕರ್ಣಿ ಬ್ರಹ್ಮಾವರ ತಾಲೂಕು ಆಡಳಿತ ಸಂಸ್ಥೆಯಲ್ಲಿ ನಾಲ್ಕು ವರ್ಷಗಳ ಶಿಕ್ಷಕ ಸೇವೆ, ನಂತರ 1997 ಫೆಬ್ರವರಿ ತಿಂಗಳಲ್ಲಿ ಸರಕಾರಿ ಶಾಲಾ ಶಿಕ್ಷಕನಾಗಿ ನೇಮಕಾತಿಗೊಂಡು ಬೆಳ್ತಂಗಡಿ ತಾಲೂಕಿನ ಸರಕಾರಿ ಉನ್ನತ ಪ್ರಾಥಮಿಕ ಶಾಲೆ ತೋಟತ್ತಾಡಿ ಶಾಲೆಯಲ್ಲಿ ಶಿಕ್ಷಕ ವೃತ್ತಿ ಪ್ರಾರಂಭಿಸಿದರು.

ಸುಧೀರ್ಘ 2023 ಜುಲೈ ತಿಂಗಳ ವರೆಗೆ ಸೇವೆ ಸಲ್ಲಿಸಿ ಇದೀಗ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಗೆ ವರ್ಗಾವಣೆಯಾಗಿದ್ದಾರೆ.

Related posts

ಬಡಗಕಾರಂದೂರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವ- ಕಾರ್ಯಾಲಯ ಉದ್ಘಾಟನೆ, ವೆಬ್‌ಸೈಟ್ ಅನಾವರಣ

Suddi Udaya

ಮತದಾರರ ಪಟ್ಟಿ ಮ್ಯಾಪಿಂಗ್ ಮಾಡಿಸಿ-ಜಿಲ್ಲಾ ಚುನಾವಣಾಧಿಕಾರಿ

Suddi Udaya

ನಡ -ಕನ್ಯಾಡಿ ಕಾಂಗ್ರೆಸ್ ಗ್ರಾಮ ಸಮಿತಿ ರಚನೆ: ಅಧ್ಯಕ್ಷರಾಗಿ ಜಾಕೀರ್ ಹುಸೇನ್

Suddi Udaya

ವೇಣೂರು: ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್, ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ ಆಯ್ಕೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!