25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತೋಟತ್ತಾಡಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಬೆಳ್ತಂಗಡಿ ಮಾದರಿ ಶಾಲೆಗೆ ವಗಾ೯ವಣೆ

ಬೆಳ್ತಂಗಡಿ: ಸರಕಾರಿ ಉನ್ನತ ಪ್ರಾಥಮಿಕ ಶಾಲೆ ತೋಟತ್ತಾಡಿ ಶಾಲೆಯಲ್ಲಿ 26 ವಷ೯ಗಳ ಸುಧೀರ್ಘ ಅವಧಿಯಲ್ಲಿ ಸೇವೆ ಸಲ್ಲಿಸಿದ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಇದೀಗ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಇಲ್ಲಿಗೆ ವರ್ಗಾವಣೆಗೊಂಡಿದ್ದಾರೆ.
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹಂದಾಡಿ ಗ್ರಾಮದ ನಿವಾಸಿಯಾಗಿರುವ ಇವರು ಪ್ರಾಥಮಿಕ ಶಾಲೆ. ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬ್ರಹ್ಮಾವರ. ಪ್ರೌಢಶಾಲೆ ಶಿಕ್ಷಣ ಸೇಂಟ್ ಮೇರಿ ಸೀರಿಯಲ್ ಜೂನಿಯರ್ ಕಾಲೇಜು ಬ್ರಹ್ಮಾವರ, ಟಿ.ಸಿ.ಹೆಚ್.ಶಿಕ್ಷಣ ಕುಮುದಾ ಉಮಾ ಶಂಕರ ಶಿಕ್ಷಕರ ತರಬೇತಿ ಕೇಂದ್ರ ಕೊಕ್ಕರ್ಣಿ ಬ್ರಹ್ಮಾವರದಲ್ಲಿ ಪೂರೈಸಿ, 1986 ರಲ್ಲಿ ಅನಿತಾ ವಿದ್ಯಾ ಸಂಸ್ಥೆ ಕೊಕ್ಕರ್ಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎರಡು ವರ್ಷಗಳ ಶಿಕ್ಷಕ ಸೇವೆ ಆರಂಭಿಸಿದರು.
ನಂತರ 1989 ರಿಂದ ಅನಂತ ಪದ್ಮನಾಭ ಖಾಸಗಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹಂದಾಡಿ ಯಲ್ಲಿ ನಾಲ್ಕು ವರುಷಗಳ ಶಿಕ್ಷಕ ವೃತ್ತಿ ಸೇವೆ, 1994 ರಿಂದ 1997 ಜನವರಿ ವರೆಗೆ ಅನಿತಾ ವಿದ್ಯಾಸಂಸ್ಥೆ ಕೊಕ್ಕರ್ಣಿ ಬ್ರಹ್ಮಾವರ ತಾಲೂಕು ಆಡಳಿತ ಸಂಸ್ಥೆಯಲ್ಲಿ ನಾಲ್ಕು ವರ್ಷಗಳ ಶಿಕ್ಷಕ ಸೇವೆ, ನಂತರ 1997 ಫೆಬ್ರವರಿ ತಿಂಗಳಲ್ಲಿ ಸರಕಾರಿ ಶಾಲಾ ಶಿಕ್ಷಕನಾಗಿ ನೇಮಕಾತಿಗೊಂಡು ಬೆಳ್ತಂಗಡಿ ತಾಲೂಕಿನ ಸರಕಾರಿ ಉನ್ನತ ಪ್ರಾಥಮಿಕ ಶಾಲೆ ತೋಟತ್ತಾಡಿ ಶಾಲೆಯಲ್ಲಿ ಶಿಕ್ಷಕ ವೃತ್ತಿ ಪ್ರಾರಂಭಿಸಿದರು.

ಸುಧೀರ್ಘ 2023 ಜುಲೈ ತಿಂಗಳ ವರೆಗೆ ಸೇವೆ ಸಲ್ಲಿಸಿ ಇದೀಗ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಗೆ ವರ್ಗಾವಣೆಯಾಗಿದ್ದಾರೆ.

Related posts

72 ನೇ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ನಾರಾವಿ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಸ್ಥೆಯ ಬೆಳವಣಿಗೆಯಲ್ಲಿ ತೊಡಗಿಸಿಕೊಂಡಿರುವ ಎನ್.ಶಶಿಕಾಂತ್ ಜೈನ್ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ

Suddi Udaya

ಕೊಯ್ಯೂರು ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಕೊಕ್ಕಡ: ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 1.25 ಲಕ್ಷ ಲಾಭ

Suddi Udaya

ಮುಗೇರಡ್ಕ ಮೂವರು ದೈವಗಳ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya

ಬೆಳ್ತಂಗಡಿ ಪಾರಸ್‌ ಪೃಥ್ವಿ ಜುವೆಲ್ಸ್ ನಲ್ಲಿ “ಭರ್ಜರಿ ಆಷಾಢ ಸೇಲ್ಸ್”

Suddi Udaya

ಭೂಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸುವರ್ಣ ವಿ. ವರಕಬೆ ಅವರಿಗೆ ಓಡೀಲುವಿನಲ್ಲಿ ಪೌರ ಸನ್ಮಾನ ಹಾಗೂ ವೀರ ಸಿಂಧೂರ ಪ್ರಶಸ್ತಿ ಪ್ರದಾನ

Suddi Udaya
error: Content is protected !!