July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತೋಟತ್ತಾಡಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಬೆಳ್ತಂಗಡಿ ಮಾದರಿ ಶಾಲೆಗೆ ವಗಾ೯ವಣೆ

ಬೆಳ್ತಂಗಡಿ: ಸರಕಾರಿ ಉನ್ನತ ಪ್ರಾಥಮಿಕ ಶಾಲೆ ತೋಟತ್ತಾಡಿ ಶಾಲೆಯಲ್ಲಿ 26 ವಷ೯ಗಳ ಸುಧೀರ್ಘ ಅವಧಿಯಲ್ಲಿ ಸೇವೆ ಸಲ್ಲಿಸಿದ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಇದೀಗ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಇಲ್ಲಿಗೆ ವರ್ಗಾವಣೆಗೊಂಡಿದ್ದಾರೆ.
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹಂದಾಡಿ ಗ್ರಾಮದ ನಿವಾಸಿಯಾಗಿರುವ ಇವರು ಪ್ರಾಥಮಿಕ ಶಾಲೆ. ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬ್ರಹ್ಮಾವರ. ಪ್ರೌಢಶಾಲೆ ಶಿಕ್ಷಣ ಸೇಂಟ್ ಮೇರಿ ಸೀರಿಯಲ್ ಜೂನಿಯರ್ ಕಾಲೇಜು ಬ್ರಹ್ಮಾವರ, ಟಿ.ಸಿ.ಹೆಚ್.ಶಿಕ್ಷಣ ಕುಮುದಾ ಉಮಾ ಶಂಕರ ಶಿಕ್ಷಕರ ತರಬೇತಿ ಕೇಂದ್ರ ಕೊಕ್ಕರ್ಣಿ ಬ್ರಹ್ಮಾವರದಲ್ಲಿ ಪೂರೈಸಿ, 1986 ರಲ್ಲಿ ಅನಿತಾ ವಿದ್ಯಾ ಸಂಸ್ಥೆ ಕೊಕ್ಕರ್ಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎರಡು ವರ್ಷಗಳ ಶಿಕ್ಷಕ ಸೇವೆ ಆರಂಭಿಸಿದರು.
ನಂತರ 1989 ರಿಂದ ಅನಂತ ಪದ್ಮನಾಭ ಖಾಸಗಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹಂದಾಡಿ ಯಲ್ಲಿ ನಾಲ್ಕು ವರುಷಗಳ ಶಿಕ್ಷಕ ವೃತ್ತಿ ಸೇವೆ, 1994 ರಿಂದ 1997 ಜನವರಿ ವರೆಗೆ ಅನಿತಾ ವಿದ್ಯಾಸಂಸ್ಥೆ ಕೊಕ್ಕರ್ಣಿ ಬ್ರಹ್ಮಾವರ ತಾಲೂಕು ಆಡಳಿತ ಸಂಸ್ಥೆಯಲ್ಲಿ ನಾಲ್ಕು ವರ್ಷಗಳ ಶಿಕ್ಷಕ ಸೇವೆ, ನಂತರ 1997 ಫೆಬ್ರವರಿ ತಿಂಗಳಲ್ಲಿ ಸರಕಾರಿ ಶಾಲಾ ಶಿಕ್ಷಕನಾಗಿ ನೇಮಕಾತಿಗೊಂಡು ಬೆಳ್ತಂಗಡಿ ತಾಲೂಕಿನ ಸರಕಾರಿ ಉನ್ನತ ಪ್ರಾಥಮಿಕ ಶಾಲೆ ತೋಟತ್ತಾಡಿ ಶಾಲೆಯಲ್ಲಿ ಶಿಕ್ಷಕ ವೃತ್ತಿ ಪ್ರಾರಂಭಿಸಿದರು.

ಸುಧೀರ್ಘ 2023 ಜುಲೈ ತಿಂಗಳ ವರೆಗೆ ಸೇವೆ ಸಲ್ಲಿಸಿ ಇದೀಗ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಗೆ ವರ್ಗಾವಣೆಯಾಗಿದ್ದಾರೆ.

Related posts

ಸಿಯೋನ್ ಆಶ್ರಮ ಟ್ರಸ್ಟ್ ಗೆ “ಅತ್ಯುತ್ತಮ ಎನ್‌.ಜಿ.ಒ” ಪ್ರಶಸ್ತಿ

Suddi Udaya

ಕನ್ಯಾಡಿ ಸೇವಾಧಾಮ ಸಂಸ್ಥಾಪಕ ಕೆ. ವಿನಾಯಕ ರಾವ್ ರವರಿಗೆ IOA ಸುವರ್ಣ ಸಾಧಕ ಪ್ರಶಸ್ತಿ

Suddi Udaya

ಕೊಯ್ಯೂರು: ಮಲೆಬೆಟ್ಟುನಲ್ಲಿ ಬೈಕ್ ಗೆ ಆಟೋ ರಿಕ್ಷಾ ಡಿಕ್ಕಿ: ಬೈಕ್ ಸವಾರನಿಗೆ ಗಾಯ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಕೊಕ್ಕಡ ಎಂಡೊಸಲ್ಪಾನ್ ಕೇಂದ್ರದಲ್ಲಿ ಇಂದಿರಾ ಗಾಂಧಿ ಜನ್ಮದಿನ ಆಚರಣೆ

Suddi Udaya

ಬೆನ್ನುಹುರಿಯ ದ್ರವ ತುಂಬಿದ ಚೀಲಗಳ ಎಂಡೋಸ್ಕೋಪಿಕ್ ಸರ್ಜರಿ: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮತ್ತೊಂದು ಅಪರೂಪದ ಶಸ್ತ್ರಚಿಕಿತ್ಸೆ

Suddi Udaya
error: Content is protected !!