25.8 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಕರಾಯ ಕಲ್ಲೇರಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟ : ಉಪ್ಪಿನಂಗಡಿ ಪೊಲೀಸರ ದಾಳಿ‌ ನಗದು ಸಹಿತ ಐವರು ವಶಕ್ಕೆ

ಬೆಳ್ತಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟವಾಡುತ್ತಿದ್ದ ಐವರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ನಗದು ರೂ. 6680 ವಶಪಡೆಸಿಕೊಂಡಿದ್ದಾರೆ. ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಎಲೆಗಳನ್ನು ಉಪಯೋಗಿಸಿ ಹಣವನ್ನು ಪಣವಾಗಿಟ್ಟು ಜುಗಾರಿ ಆಟ ಆಡುತ್ತಿದ್ದಾರೆ ಎಂದು ಉಪ್ಪಿನಂಗಡಿ ಪೊಲೀಸರಿಗೆ ದೊರೆತ ಮಾಹಿತಿಯಂತೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದಾಗ‌ ಐದು ಮಂದಿ ಹಣವನ್ನು ಪಣವಾಗಿಟ್ಟು ಉಲಾಯಿ-ಪಿದಾಯಿ ಎಂಬ ಆಟವನ್ನು ಆಡುವುದು ಕಂಡು ಬಂತು. ಕೂಡಲೇ ಸುತ್ತುವರಿದು ಆಟವಾಡುತ್ತಿದ್ದ ಕೆ. ಶೇಖರ, .ಎಸ್. ಮುಸ್ತಾಫ, ಶ್ರೀನಾಥ, . ಕೆ. ರಮೇಶ, . ಎಂ.ಎ. ಅಬ್ದುಲ್ ಲತೀಫ್ , ಎಂಬವರನ್ನು ಹಿಡಿದು ಒಟ್ಟು ರೂ.6680 ವಶಪಡೆಸಿಕೊಂಡಿದ್ದಾರೆ. ‌ಅವರು ಆಟ ಆಡುತ್ತಿದ್ದ ಸ್ಥಳವನ್ನು ಪರಿಶೀಲಿಸಲಾಗಿ ನೆಲದಲ್ಲಿ ಒಂದು ತಿಳಿ ಹಳದಿ ಬಣ್ಣದ ಒಂದು ಪಾಲಿಥಿನ್ ಪ್ಲಾಸ್ಟಿಕನ್ನು ಬಿಡಿಸಿ ಹಾಕಿದ್ದು ಅದರ ಮೇಲೆ ವಿವಿಧ ಮಾದರಿಯ ಒಟ್ಟು 52 ಇಸ್ಪೀಟ್ ಎಲೆಗಳು ಇದ್ದು ನೆಲದಲ್ಲಿ ಹಾಸಿದ ಪಾಲಿಥಿನ್ ಪ್ಲಾಸ್ಟಿಕ್ ನ ಮೇಲೆ ಒಟ್ಟು ರೂ.2920 ಇದ್ದವು. ಅವುಗಳನ್ನು ವಶಕ್ಕೆ ಪಡೆದುಕೊಂಡು ಉಪ್ಪಿನಂಗಡಿ ಪೊಲೀಸ್‌ ಠಾಣಾ ಅ.ಕ್ರ 93/2023 ಕಲಂ:87 ಕೆ.ಪಿ ಆ್ಯಕ್ಟ್ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಉಜಿರೆ: ಪ.ಪೂ ಕಾಲೇಜುಗಳ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟ: ಎಸ್.ಡಿ.ಎಂ ಪ.ಪೂ ಕಾಲೇಜಿಗೆ ಚಾಂಪಿಯನ್ ಪ್ರಶಸ್ತಿ:

Suddi Udaya

ಕಾಲ್ತುಳಿತ ದುರಂತ: ಪೂರ್ವ ತಯಾರಿ ಇಲ್ಲದೆ ರಾಜ್ಯ ಸರ್ಕಾದಿಂದ ಬೇಜವಾಬ್ದಾರಿ ಸಂಭ್ರಮಾಚರಣೆ: ಹರೀಶ್ ಪೂಂಜ

Suddi Udaya

ಉಜಿರೆಯಲ್ಲಿ ಡಾ| ಸೂರಜ್ ರವರ ಡೆಂಟಲ್ ಕ್ಲಿನಿಕ್ ಶುಭಾರಂಭ

Suddi Udaya

ನಿಟ್ಟಡೆ : ಕುಂಜೊಟ್ಟು ನಿವಾಸಿ ಬೇಬಿ ನಿಧನ

Suddi Udaya

ಇಳಂತಿಲ: ಡೇನಿತ್ ಸಾಲ್ಯಾನ್ ತೋಟದಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya

ಲಾಯಿಲ ಶ್ರೀ ಸರಸ್ವತಿ ಭಜನಾ ಮಂಡಳಿ ವಿವೇಕಾನಂದ ನಗರ ಹಾಗೂ ವಿವಿಧ ಸಮಿತಿಯಿಂದ ನಿವೃತ್ತ ಯೋಧ ಅಶೋಕ್ ಕುಮಾರ್ ರವರಿಗೆ ಸನ್ಮಾನ

Suddi Udaya
error: Content is protected !!