July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಕರಾಯ ಕಲ್ಲೇರಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟ : ಉಪ್ಪಿನಂಗಡಿ ಪೊಲೀಸರ ದಾಳಿ‌ ನಗದು ಸಹಿತ ಐವರು ವಶಕ್ಕೆ

ಬೆಳ್ತಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟವಾಡುತ್ತಿದ್ದ ಐವರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ನಗದು ರೂ. 6680 ವಶಪಡೆಸಿಕೊಂಡಿದ್ದಾರೆ. ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಎಲೆಗಳನ್ನು ಉಪಯೋಗಿಸಿ ಹಣವನ್ನು ಪಣವಾಗಿಟ್ಟು ಜುಗಾರಿ ಆಟ ಆಡುತ್ತಿದ್ದಾರೆ ಎಂದು ಉಪ್ಪಿನಂಗಡಿ ಪೊಲೀಸರಿಗೆ ದೊರೆತ ಮಾಹಿತಿಯಂತೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದಾಗ‌ ಐದು ಮಂದಿ ಹಣವನ್ನು ಪಣವಾಗಿಟ್ಟು ಉಲಾಯಿ-ಪಿದಾಯಿ ಎಂಬ ಆಟವನ್ನು ಆಡುವುದು ಕಂಡು ಬಂತು. ಕೂಡಲೇ ಸುತ್ತುವರಿದು ಆಟವಾಡುತ್ತಿದ್ದ ಕೆ. ಶೇಖರ, .ಎಸ್. ಮುಸ್ತಾಫ, ಶ್ರೀನಾಥ, . ಕೆ. ರಮೇಶ, . ಎಂ.ಎ. ಅಬ್ದುಲ್ ಲತೀಫ್ , ಎಂಬವರನ್ನು ಹಿಡಿದು ಒಟ್ಟು ರೂ.6680 ವಶಪಡೆಸಿಕೊಂಡಿದ್ದಾರೆ. ‌ಅವರು ಆಟ ಆಡುತ್ತಿದ್ದ ಸ್ಥಳವನ್ನು ಪರಿಶೀಲಿಸಲಾಗಿ ನೆಲದಲ್ಲಿ ಒಂದು ತಿಳಿ ಹಳದಿ ಬಣ್ಣದ ಒಂದು ಪಾಲಿಥಿನ್ ಪ್ಲಾಸ್ಟಿಕನ್ನು ಬಿಡಿಸಿ ಹಾಕಿದ್ದು ಅದರ ಮೇಲೆ ವಿವಿಧ ಮಾದರಿಯ ಒಟ್ಟು 52 ಇಸ್ಪೀಟ್ ಎಲೆಗಳು ಇದ್ದು ನೆಲದಲ್ಲಿ ಹಾಸಿದ ಪಾಲಿಥಿನ್ ಪ್ಲಾಸ್ಟಿಕ್ ನ ಮೇಲೆ ಒಟ್ಟು ರೂ.2920 ಇದ್ದವು. ಅವುಗಳನ್ನು ವಶಕ್ಕೆ ಪಡೆದುಕೊಂಡು ಉಪ್ಪಿನಂಗಡಿ ಪೊಲೀಸ್‌ ಠಾಣಾ ಅ.ಕ್ರ 93/2023 ಕಲಂ:87 ಕೆ.ಪಿ ಆ್ಯಕ್ಟ್ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಡಿ 19:ಬೆಳ್ತಂಗಡಿ ವಕೀಲರ ಸಂಘದ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿನಿ ಕೆ.ಅಮೃತಾ ತಾಲೂಕಿಗೆ ದ್ವಿತೀಯ, ರಾಜ್ಯದಲ್ಲಿ 5ನೇ ರ್‍ಯಾಂಕ್

Suddi Udaya

ಉರುವಾಲುಪದವು: ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವಕ್ಕೆ ಚಾಲನೆ

Suddi Udaya

ಸುಲ್ಕೇರಿ: ಎಸ್.ಡಿ.ಎಂ ಸ್ನಾತಕೋತ್ತರ ಪದವಿ ಕೇಂದ್ರ ಮತ್ತು ಗ್ರಾ.ಪಂ ವತಿಯಿಂದ ಗ್ರಾಮ‌ ಸಮೀಕ್ಷೆ ಕಾರ್ಯಕ್ರಮ

Suddi Udaya

ಮಲವಂತಿಗೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಪ್ರಕಾಶ್ ಕುಮಾರ್ ಜೈನ್, ಉಪಾಧ್ಯಕ್ಷರಾಗಿ ರೋಹಿಣಿ ಜಯವರ್ಮ ಗೌಡ ಅವಿರೋಧವಾಗಿ ಆಯ್ಕೆ

Suddi Udaya

ಕಳಿಯ ಗೋವಿಂದೂರು ಶಾಲಾ ಪಕ್ಕದ ಗುಡ್ಡೆಗೆ ಬೆಂಕಿ

Suddi Udaya
error: Content is protected !!