22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಲ್ಲು ಇಲ್ಲದೆ ಅಡಿಕೆ ಸಾಗಾಟ ವಾಹನ ವಶಕ್ಕೆ: ವಾಣಿಜ್ಯ ತೆರಿಗೆ ಇಲಾಖೆಯಿಂದ ದಂಡ

ಬೆಳ್ತಂಗಡಿ : ಸುಲಿದ ಒಣ ಅಡಕೆಯನ್ನು ವಾಣಿಜ್ಯ ತೆರಿಗೆಇಲಾಖೆಯ ಬಿಲ್ಲು ಇಲ್ಲದೆ ಸಾಗಾಟ ಮಾಡುತ್ತಿದ್ದಾಗ ಧರ್ಮಸ್ಥಳಧಮ೯ಸ್ಥಳ ಪೊಲೀಸರ ತಂಡ ತಪಾಸಣೆ ವೇಳೆ ವಾಹನವನ್ನು ಪತ್ತೆ ಹಚ್ಚಿ ವಾಣಿಜ್ಯ ತೆರಿಗೆ ಇಲಾಖೆಗೆ ಹಸ್ತಾಂತರಿಸಿದೆ.ಅಡಕೆ ಮತ್ತು ವಾಹನವಕ್ಕೆ ಇಲಾಖೆ ದಂಡ ವಿಧಿಸಿದೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ಡಿ ಮತ್ತು ಸಿಬ್ಬಂದಿಗಳು ಕರ್ತವ್ಯದಲ್ಲಿರುವಾಗ ಜು. 12 ರಂದು ಬೆಳಗ್ಗೆ 11 ಗಂಟೆಗೆ ಮುಂಡಾಜೆ ಗ್ರಾಮದ ಪರಶುರಾಮ ರಾಮ ದೇವಸ್ಥಾನದ ಕ್ರಾಸ್ ಬಳಿ ಅಶೋಕ್ ಲೈಲಾಂಡ್ ವಾಹನವನ್ನು ನಿಲ್ಲಿಸಿ ತಪಾಸಣೆ ನಡೆಸಿದಾಗ ಅದರೊಳಗೆ ಸುಲಿದ ಒಣ ಅಡಿಕೆ ಇದ್ದು ಇದರ ಚಾಲಕ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಶಾಬೀರ್ ಎಂಬವರನ್ನು ವಿಚಾರಿಸಿದಾಗ ಸುಳ್ಯದ ಅಡಕೆ ಅಂಗಡಿಯಿಂದ ಪಡೆದುಕೊಂಡು ಕಡೂರಿಗೆ ತೆಗೆದುಕೊಂಡು ಹೋಗುತ್ತಿರುವುದಾಗಿ ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಬಿಲ್ಲು / ದಾಖಲಾತಿ ಕೇಳಿದಾಗ ಬಿರೂರು ಅಜ್ಜಂಪುರ ರಸ್ತೆಯಲ್ಲಿರುವ ನಿದಾ ಟ್ರೇಡರ್ಸ್ ಸಂಬಂಧಿಸಿದ ಚೀಟಿಗಳನ್ನು ಸಲ್ಲಿಸಿದ್ದು. ಬೇರೆ ಯಾವುದೇ ಬಿಲ್ಲುಗಳಿಲ್ಲ ಎಂದು ತಿಳಿಸಿದ್ದಾರೆ. ವಾಹನ ಅಡಿಕೆ ಹಾಗೂ ಚಾಲಕನನ್ನು ಧರ್ಮಸ್ಥಳ ಪೊಲೀಸ್ ಠಾಣಾ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಳ್ಳಲು ವಾಣಿಜ್ಯ ತೆರಿಗೆ ಜಂಟಿ ಆಯುಕ್ತರು ಜಾರಿ, ಪಶ್ಚಿಮ ವಲಯ ಮಂಗಳೂರು ವರದಿ ನೀಡಿದ್ದು ಅದರಂತೆ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ 81,900 ರೂಪಾಯಿ ದಂಡ ವಿಧಿಸಲಾಯಿತು.

Related posts

ಬೆಳ್ತಂಗಡಿ: ನಾಲ್ಕು ಮಂದಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಎಸ್.ಐ.ಟಿ ವಿಚಾರಣೆಗೆ ಹಾಜರು

Suddi Udaya

ಪಟ್ರಮೆ: ಪಟ್ಟೂರು ಪಿತ್ತಿಲ್ತಾರು ನಿವಾಸಿ ಮೋನಪ್ಪ ಎಂ. ಕೆ ನಿಧನ

Suddi Udaya

ಶಿಶಿಲ: ಗಿರಿಜನ ಬಂಧುಗಳಿಗೆ ಕಿರಣ್ ಚಂದ್ರ ಪುಷ್ಪಗಿರಿಯಿಂದ ಬೆಡ್ ಶೀಟ್ ವಿತರಣೆ

Suddi Udaya

ಪಾರೆಂಕಿ: ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ರಸ್ತೆ ಸಂಚಾರ ಅಸ್ತವ್ಯಸ್ತ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯಿಂದ ಪುದುವೆಟ್ಟು ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

ವಾಣಿ ಕಾಲೇಜು: ಸಮಾನ ನಾಗರಿಕ ಸಂಹಿತೆ ಮಾಹಿತಿ ಉಪನ್ಯಾಸ

Suddi Udaya
error: Content is protected !!