25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಲ್ಲು ಇಲ್ಲದೆ ಅಡಿಕೆ ಸಾಗಾಟ ವಾಹನ ವಶಕ್ಕೆ: ವಾಣಿಜ್ಯ ತೆರಿಗೆ ಇಲಾಖೆಯಿಂದ ದಂಡ

ಬೆಳ್ತಂಗಡಿ : ಸುಲಿದ ಒಣ ಅಡಕೆಯನ್ನು ವಾಣಿಜ್ಯ ತೆರಿಗೆಇಲಾಖೆಯ ಬಿಲ್ಲು ಇಲ್ಲದೆ ಸಾಗಾಟ ಮಾಡುತ್ತಿದ್ದಾಗ ಧರ್ಮಸ್ಥಳಧಮ೯ಸ್ಥಳ ಪೊಲೀಸರ ತಂಡ ತಪಾಸಣೆ ವೇಳೆ ವಾಹನವನ್ನು ಪತ್ತೆ ಹಚ್ಚಿ ವಾಣಿಜ್ಯ ತೆರಿಗೆ ಇಲಾಖೆಗೆ ಹಸ್ತಾಂತರಿಸಿದೆ.ಅಡಕೆ ಮತ್ತು ವಾಹನವಕ್ಕೆ ಇಲಾಖೆ ದಂಡ ವಿಧಿಸಿದೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ಡಿ ಮತ್ತು ಸಿಬ್ಬಂದಿಗಳು ಕರ್ತವ್ಯದಲ್ಲಿರುವಾಗ ಜು. 12 ರಂದು ಬೆಳಗ್ಗೆ 11 ಗಂಟೆಗೆ ಮುಂಡಾಜೆ ಗ್ರಾಮದ ಪರಶುರಾಮ ರಾಮ ದೇವಸ್ಥಾನದ ಕ್ರಾಸ್ ಬಳಿ ಅಶೋಕ್ ಲೈಲಾಂಡ್ ವಾಹನವನ್ನು ನಿಲ್ಲಿಸಿ ತಪಾಸಣೆ ನಡೆಸಿದಾಗ ಅದರೊಳಗೆ ಸುಲಿದ ಒಣ ಅಡಿಕೆ ಇದ್ದು ಇದರ ಚಾಲಕ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಶಾಬೀರ್ ಎಂಬವರನ್ನು ವಿಚಾರಿಸಿದಾಗ ಸುಳ್ಯದ ಅಡಕೆ ಅಂಗಡಿಯಿಂದ ಪಡೆದುಕೊಂಡು ಕಡೂರಿಗೆ ತೆಗೆದುಕೊಂಡು ಹೋಗುತ್ತಿರುವುದಾಗಿ ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಬಿಲ್ಲು / ದಾಖಲಾತಿ ಕೇಳಿದಾಗ ಬಿರೂರು ಅಜ್ಜಂಪುರ ರಸ್ತೆಯಲ್ಲಿರುವ ನಿದಾ ಟ್ರೇಡರ್ಸ್ ಸಂಬಂಧಿಸಿದ ಚೀಟಿಗಳನ್ನು ಸಲ್ಲಿಸಿದ್ದು. ಬೇರೆ ಯಾವುದೇ ಬಿಲ್ಲುಗಳಿಲ್ಲ ಎಂದು ತಿಳಿಸಿದ್ದಾರೆ. ವಾಹನ ಅಡಿಕೆ ಹಾಗೂ ಚಾಲಕನನ್ನು ಧರ್ಮಸ್ಥಳ ಪೊಲೀಸ್ ಠಾಣಾ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಳ್ಳಲು ವಾಣಿಜ್ಯ ತೆರಿಗೆ ಜಂಟಿ ಆಯುಕ್ತರು ಜಾರಿ, ಪಶ್ಚಿಮ ವಲಯ ಮಂಗಳೂರು ವರದಿ ನೀಡಿದ್ದು ಅದರಂತೆ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ 81,900 ರೂಪಾಯಿ ದಂಡ ವಿಧಿಸಲಾಯಿತು.

Related posts

ಮೇಲಂತಬೆಟ್ಟು : ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಶಾಸಕ ಹರೀಶ್ ಪೂಂಜರ ವಿರುದ್ಧ ಪ್ರಕರಣ: ಎರಡೂ ಕೇಸುಗಳ ಬಗ್ಗೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

Suddi Udaya

ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ: ದೈವದ ಪಾತ್ರಿ ಸೇವೆಯಿಂದ ನಿವೃತ್ತಿ ಹೊಂದಿದ್ದ ಪೂವಾಜೆ ರುಕ್ಮಯ್ಯ ಗೌಡರಿಗೆ ಸನ್ಮಾನ

Suddi Udaya

ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಒಕ್ಕೂಟಗಳ ಪದಗ್ರಹಣ ಮತ್ತು ಸತ್ಯನಾರಾಯಣ ಪೂಜೆ

Suddi Udaya

ಬೆಳ್ತಂಗಡಿ ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಸಂದೇಶ್ ಮದ್ದಡ್ಕ ಇವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya
error: Content is protected !!