July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಲ್ಲು ಇಲ್ಲದೆ ಅಡಿಕೆ ಸಾಗಾಟ ವಾಹನ ವಶಕ್ಕೆ: ವಾಣಿಜ್ಯ ತೆರಿಗೆ ಇಲಾಖೆಯಿಂದ ದಂಡ

ಬೆಳ್ತಂಗಡಿ : ಸುಲಿದ ಒಣ ಅಡಕೆಯನ್ನು ವಾಣಿಜ್ಯ ತೆರಿಗೆಇಲಾಖೆಯ ಬಿಲ್ಲು ಇಲ್ಲದೆ ಸಾಗಾಟ ಮಾಡುತ್ತಿದ್ದಾಗ ಧರ್ಮಸ್ಥಳಧಮ೯ಸ್ಥಳ ಪೊಲೀಸರ ತಂಡ ತಪಾಸಣೆ ವೇಳೆ ವಾಹನವನ್ನು ಪತ್ತೆ ಹಚ್ಚಿ ವಾಣಿಜ್ಯ ತೆರಿಗೆ ಇಲಾಖೆಗೆ ಹಸ್ತಾಂತರಿಸಿದೆ.ಅಡಕೆ ಮತ್ತು ವಾಹನವಕ್ಕೆ ಇಲಾಖೆ ದಂಡ ವಿಧಿಸಿದೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ಡಿ ಮತ್ತು ಸಿಬ್ಬಂದಿಗಳು ಕರ್ತವ್ಯದಲ್ಲಿರುವಾಗ ಜು. 12 ರಂದು ಬೆಳಗ್ಗೆ 11 ಗಂಟೆಗೆ ಮುಂಡಾಜೆ ಗ್ರಾಮದ ಪರಶುರಾಮ ರಾಮ ದೇವಸ್ಥಾನದ ಕ್ರಾಸ್ ಬಳಿ ಅಶೋಕ್ ಲೈಲಾಂಡ್ ವಾಹನವನ್ನು ನಿಲ್ಲಿಸಿ ತಪಾಸಣೆ ನಡೆಸಿದಾಗ ಅದರೊಳಗೆ ಸುಲಿದ ಒಣ ಅಡಿಕೆ ಇದ್ದು ಇದರ ಚಾಲಕ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಶಾಬೀರ್ ಎಂಬವರನ್ನು ವಿಚಾರಿಸಿದಾಗ ಸುಳ್ಯದ ಅಡಕೆ ಅಂಗಡಿಯಿಂದ ಪಡೆದುಕೊಂಡು ಕಡೂರಿಗೆ ತೆಗೆದುಕೊಂಡು ಹೋಗುತ್ತಿರುವುದಾಗಿ ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಬಿಲ್ಲು / ದಾಖಲಾತಿ ಕೇಳಿದಾಗ ಬಿರೂರು ಅಜ್ಜಂಪುರ ರಸ್ತೆಯಲ್ಲಿರುವ ನಿದಾ ಟ್ರೇಡರ್ಸ್ ಸಂಬಂಧಿಸಿದ ಚೀಟಿಗಳನ್ನು ಸಲ್ಲಿಸಿದ್ದು. ಬೇರೆ ಯಾವುದೇ ಬಿಲ್ಲುಗಳಿಲ್ಲ ಎಂದು ತಿಳಿಸಿದ್ದಾರೆ. ವಾಹನ ಅಡಿಕೆ ಹಾಗೂ ಚಾಲಕನನ್ನು ಧರ್ಮಸ್ಥಳ ಪೊಲೀಸ್ ಠಾಣಾ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಳ್ಳಲು ವಾಣಿಜ್ಯ ತೆರಿಗೆ ಜಂಟಿ ಆಯುಕ್ತರು ಜಾರಿ, ಪಶ್ಚಿಮ ವಲಯ ಮಂಗಳೂರು ವರದಿ ನೀಡಿದ್ದು ಅದರಂತೆ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ 81,900 ರೂಪಾಯಿ ದಂಡ ವಿಧಿಸಲಾಯಿತು.

Related posts

ಮುಂಡಾಜೆ: ಕೃಷಿಕ ಶಾಜಿ ವಾಟೆಪ್ಪಿಳ್ಳಿಲ್ ಹೃದಯಾಘಾತದಿಂದ ನಿಧನ

Suddi Udaya

ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು (ಮಾಸ್ ಲಿಮಿಟೆಡ್) ಇವರಿಂದ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಸಹಯೋಗದಲ್ಲಿ ಗುರುವಾಯನಕೆರೆಯಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ

Suddi Udaya

ಮುಳಿಯ ಜ್ಯುವೆಲ್ಸ್‌ ನಲ್ಲಿ ಸಂಸ್ಥಾಪಕರ ದಿನಾಚರಣೆ: ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ 78 ವರ್ಷ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಾರ್ಯ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿತೆ ಕಾರ್ಯಕ್ರಮ

Suddi Udaya

ನೆರಿಯ: ನರ್ಸಿಂಗ್ ವಿದ್ಯಾರ್ಥಿನಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!