ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಲ್ಲು ಇಲ್ಲದೆ ಅಡಿಕೆ ಸಾಗಾಟ ವಾಹನ ವಶಕ್ಕೆ: ವಾಣಿಜ್ಯ ತೆರಿಗೆ ಇಲಾಖೆಯಿಂದ ದಂಡ

ಬೆಳ್ತಂಗಡಿ : ಸುಲಿದ ಒಣ ಅಡಕೆಯನ್ನು ವಾಣಿಜ್ಯ ತೆರಿಗೆಇಲಾಖೆಯ ಬಿಲ್ಲು ಇಲ್ಲದೆ ಸಾಗಾಟ ಮಾಡುತ್ತಿದ್ದಾಗ ಧರ್ಮಸ್ಥಳಧಮ೯ಸ್ಥಳ ಪೊಲೀಸರ ತಂಡ ತಪಾಸಣೆ ವೇಳೆ ವಾಹನವನ್ನು ಪತ್ತೆ ಹಚ್ಚಿ ವಾಣಿಜ್ಯ ತೆರಿಗೆ ಇಲಾಖೆಗೆ ಹಸ್ತಾಂತರಿಸಿದೆ.ಅಡಕೆ ಮತ್ತು ವಾಹನವಕ್ಕೆ ಇಲಾಖೆ ದಂಡ ವಿಧಿಸಿದೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ಡಿ ಮತ್ತು ಸಿಬ್ಬಂದಿಗಳು ಕರ್ತವ್ಯದಲ್ಲಿರುವಾಗ ಜು. 12 ರಂದು ಬೆಳಗ್ಗೆ 11 ಗಂಟೆಗೆ ಮುಂಡಾಜೆ ಗ್ರಾಮದ ಪರಶುರಾಮ ರಾಮ ದೇವಸ್ಥಾನದ ಕ್ರಾಸ್ ಬಳಿ ಅಶೋಕ್ ಲೈಲಾಂಡ್ ವಾಹನವನ್ನು ನಿಲ್ಲಿಸಿ ತಪಾಸಣೆ ನಡೆಸಿದಾಗ ಅದರೊಳಗೆ ಸುಲಿದ ಒಣ ಅಡಿಕೆ ಇದ್ದು ಇದರ ಚಾಲಕ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಶಾಬೀರ್ ಎಂಬವರನ್ನು ವಿಚಾರಿಸಿದಾಗ ಸುಳ್ಯದ ಅಡಕೆ ಅಂಗಡಿಯಿಂದ ಪಡೆದುಕೊಂಡು ಕಡೂರಿಗೆ ತೆಗೆದುಕೊಂಡು ಹೋಗುತ್ತಿರುವುದಾಗಿ ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಬಿಲ್ಲು / ದಾಖಲಾತಿ ಕೇಳಿದಾಗ ಬಿರೂರು ಅಜ್ಜಂಪುರ ರಸ್ತೆಯಲ್ಲಿರುವ ನಿದಾ ಟ್ರೇಡರ್ಸ್ ಸಂಬಂಧಿಸಿದ ಚೀಟಿಗಳನ್ನು ಸಲ್ಲಿಸಿದ್ದು. ಬೇರೆ ಯಾವುದೇ ಬಿಲ್ಲುಗಳಿಲ್ಲ ಎಂದು ತಿಳಿಸಿದ್ದಾರೆ. ವಾಹನ ಅಡಿಕೆ ಹಾಗೂ ಚಾಲಕನನ್ನು ಧರ್ಮಸ್ಥಳ ಪೊಲೀಸ್ ಠಾಣಾ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಳ್ಳಲು ವಾಣಿಜ್ಯ ತೆರಿಗೆ ಜಂಟಿ ಆಯುಕ್ತರು ಜಾರಿ, ಪಶ್ಚಿಮ ವಲಯ ಮಂಗಳೂರು ವರದಿ ನೀಡಿದ್ದು ಅದರಂತೆ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ 81,900 ರೂಪಾಯಿ ದಂಡ ವಿಧಿಸಲಾಯಿತು.

Related posts

ಬೈಕ್‌ಗಳ ನಡುವೆ ಭೀಕರ ಅಪಘಾತ: ಓರ್ವ ಸಾವು, ಮತ್ತೋರ್ವ ಗಂಭೀರ ಗಾಯ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಮಾನವಿಕ ಸಂಘ ಹಾಗೂ ಐಕ್ಯುಎಸಿ ಆಶ್ರಯದಲ್ಲಿ ‘ವಿಶ್ರುತಿ 2k24’ ಹಬ್ಬ

Suddi Udaya

ಗೇರುಕಟ್ಟೆ: ವರ್ಗಾವಣೆ ಹೊಂದಿದ ಶಿಕ್ಷಕಿ ಮಮತಾರಿಗೆ ಸನ್ಮಾನ

Suddi Udaya

ಡಿ.14 -20: ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಜೆಸಿ ಸಪ್ತಾಹ- 2024: ಸಾಧಕರಿಗೆ ಸನ್ಮಾನ, ಸಮಾಜಸೇವಾ ಸಂಘಟನೆಗಳಿಗೆ ಸೇವಾಶ್ರೀ ಪುರಸ್ಕಾರ, ಮನೋರಂಜನಾ ಕಾರ್ಯಕ್ರಮ

Suddi Udaya

ಮಹಾತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯಂದು ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಣೆ

Suddi Udaya

ದ ಕ.ಜಿಲ್ಲೆಗೆ ಸುವರ್ಣ ಕರ್ನಾಟಕ ರಥಯಾತ್ರೆ: ಉಜಿರೆಯಲ್ಲಿ ಸಂಭ್ರಮದ ಸ್ವಾಗತ

Suddi Udaya
error: Content is protected !!