23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

‘ಮಕ್ಕಳಿಗೆ ಓದುವುದು ಎಷ್ಟು ಮಹತ್ವ’ ವಿಷಯದ ಕುರಿತು ಪದ್ಮಲತಾ ಮೋಹನ್ ನಿಡ್ಲೆಯವರಿಂದ ಉಪನ್ಯಾಸ

ಶ್ರೀ ಅಯ್ಯಪ್ಪ ಎಜುಕೇಷನ್ ಸೆಂಟರ್ ಸಿಬಿಎಸ್ ಇ ಸ್ಕೂಲ್ ಬೆಂಗಳೂರು ಹತ್ತು ಹನ್ನೊಂದು ಮತ್ತು ಹನ್ನೆರಡನೇ ತರಗತಿಯ ಮಕ್ಕಳಿಗಾಗಿ ಆಯೋಜಿಸಿದ್ದ. ಮಕ್ಕಳಿಗೆ ಓದುವುದು ಎಷ್ಟು ಮಹತ್ವ ಎಂಬ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿದ್ದ ಪದ್ಮಲತಾ ಮೋಹನ್ ನಿಡ್ಲೆ ಸಾಹಿತಿ ಉಪನ್ಯಾಸಕಿ ಇವರು ವಿದ್ಯಾರ್ಥಿಗಳಿಗೆ ಪುಸ್ತಕ ಓದುವುದರ ಮಹತ್ವ ಹಾಗು ಓದುವುದರ ಅಭ್ಯಾಸ ವನ್ನು ಹೇಗೆ ಬೆಳೆಸಬಹುದೆಂದು ವಿವರವಾಗಿ ತಿಳಿಸುತ್ತಾ, ಮಕ್ಕಳಿಗೆ ಅಂಕಗಳ ಜೊತೆ ತಿಳುವಳಿಕೆ ಕೂಡ ಮುಖ್ಯ ಅದಕ್ಕಾಗಿ ವಿವಿಧ ರೀತಿಯ ಪುಸ್ತಕಗಳನ್ನು ಓದಬೇಕು ಎಂಬ ಕಿವಿ ಮಾತು ಹೇಳಿದರು.

ಓದುವ ಹವ್ಯಾಸವನ್ನು ಬೆಳೆಸುವಲ್ಲಿ ಪೋಷಕರ ಮತ್ತು ಹೆತ್ತವರ ಪಾತ್ರವನ್ನು ಒತ್ತಿ ಹೇಳಿದ ಇವರು ಶಾಲೆಗಳಲ್ಲಿ ಓದುವುದನ್ನು ಪ್ರೋತ್ಸಾಹಿಸಲು ಅನುಕೂಲವಾಗುವಂತಹ ಚಟುವಟಿಕೆಯನ್ನು ಮಾಡಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಸ್ಕೂಲ್ ಪ್ರಾಂಶುಪಾಲರಾದ ಶ್ರೀಮತಿ ಕಮಲಾ ಸೆಲ್ವರಾಜನ್ , ಮುಖ್ಯಶಿಕ್ಷಕಿ ಶ್ರೀಮತಿ ಅಮಿತಾ ಡಿ ರಾವ್ ಉದಯೋನ್ಮುಖ ಬರಹಗಾರ್ತಿ ಕುಮಾರಿ ಶ್ರೇಯಾ ಮತ್ತು ಉಳಿದ ಶಿಕ್ಷಕರು ಉಪಸ್ಥಿತರಿದ್ದರು.

Related posts

ಉಜಿರೆ: ಬೈಕ್ ಗೆ ಅನಿಲ ಸಾಗಿಸುತ್ತಿದ್ದ ಟ್ಯಾಂಕ‌ರ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

Suddi Udaya

ಪ್ರೌಢ ಶಾಲಾ ವಿಭಾಗದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮನಕಲಕುವ ಹೃದಯ ವಿದ್ರಾವಕ ಘಟನೆ: ನಲ್ಲೂರು ಬಳಿ ಬೈಕ್- ಮಿನಿ ಲಾರಿ ನಡುವೆ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಕ್ಕಳು ಸೇರಿ ನಾಲ್ವರು ದುರ್ಮರಣ

Suddi Udaya

ಮುಂಡಾಜೆಯಲ್ಲಿ ನಗರ ಸ್ವಚ್ಛತೆ

Suddi Udaya

ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕಲೋತ್ಸವದಲ್ಲಿ ಎಲ್ . ಸಿ. ಆರ್ ವಿದ್ಯಾ ಸಂಸ್ಥೆಗೆ ಸಮಗ್ರ ಪ್ರಶಸ್ತಿ

Suddi Udaya

ಧರ್ಮಸ್ಥಳ : ಸರ್ಕಾರಿ ಆಸ್ಪತ್ರೆಗೆ ಔಷಧಿ ಕೊಡುಗೆ

Suddi Udaya
error: Content is protected !!