23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

‘ಮಕ್ಕಳಿಗೆ ಓದುವುದು ಎಷ್ಟು ಮಹತ್ವ’ ವಿಷಯದ ಕುರಿತು ಪದ್ಮಲತಾ ಮೋಹನ್ ನಿಡ್ಲೆಯವರಿಂದ ಉಪನ್ಯಾಸ

ಶ್ರೀ ಅಯ್ಯಪ್ಪ ಎಜುಕೇಷನ್ ಸೆಂಟರ್ ಸಿಬಿಎಸ್ ಇ ಸ್ಕೂಲ್ ಬೆಂಗಳೂರು ಹತ್ತು ಹನ್ನೊಂದು ಮತ್ತು ಹನ್ನೆರಡನೇ ತರಗತಿಯ ಮಕ್ಕಳಿಗಾಗಿ ಆಯೋಜಿಸಿದ್ದ. ಮಕ್ಕಳಿಗೆ ಓದುವುದು ಎಷ್ಟು ಮಹತ್ವ ಎಂಬ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿದ್ದ ಪದ್ಮಲತಾ ಮೋಹನ್ ನಿಡ್ಲೆ ಸಾಹಿತಿ ಉಪನ್ಯಾಸಕಿ ಇವರು ವಿದ್ಯಾರ್ಥಿಗಳಿಗೆ ಪುಸ್ತಕ ಓದುವುದರ ಮಹತ್ವ ಹಾಗು ಓದುವುದರ ಅಭ್ಯಾಸ ವನ್ನು ಹೇಗೆ ಬೆಳೆಸಬಹುದೆಂದು ವಿವರವಾಗಿ ತಿಳಿಸುತ್ತಾ, ಮಕ್ಕಳಿಗೆ ಅಂಕಗಳ ಜೊತೆ ತಿಳುವಳಿಕೆ ಕೂಡ ಮುಖ್ಯ ಅದಕ್ಕಾಗಿ ವಿವಿಧ ರೀತಿಯ ಪುಸ್ತಕಗಳನ್ನು ಓದಬೇಕು ಎಂಬ ಕಿವಿ ಮಾತು ಹೇಳಿದರು.

ಓದುವ ಹವ್ಯಾಸವನ್ನು ಬೆಳೆಸುವಲ್ಲಿ ಪೋಷಕರ ಮತ್ತು ಹೆತ್ತವರ ಪಾತ್ರವನ್ನು ಒತ್ತಿ ಹೇಳಿದ ಇವರು ಶಾಲೆಗಳಲ್ಲಿ ಓದುವುದನ್ನು ಪ್ರೋತ್ಸಾಹಿಸಲು ಅನುಕೂಲವಾಗುವಂತಹ ಚಟುವಟಿಕೆಯನ್ನು ಮಾಡಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಸ್ಕೂಲ್ ಪ್ರಾಂಶುಪಾಲರಾದ ಶ್ರೀಮತಿ ಕಮಲಾ ಸೆಲ್ವರಾಜನ್ , ಮುಖ್ಯಶಿಕ್ಷಕಿ ಶ್ರೀಮತಿ ಅಮಿತಾ ಡಿ ರಾವ್ ಉದಯೋನ್ಮುಖ ಬರಹಗಾರ್ತಿ ಕುಮಾರಿ ಶ್ರೇಯಾ ಮತ್ತು ಉಳಿದ ಶಿಕ್ಷಕರು ಉಪಸ್ಥಿತರಿದ್ದರು.

Related posts

ಮಡಂತ್ಯಾರು ರಚನಾ ಸಿಲ್ಕ್ ನಲ್ಲಿ ಶೇ. 10-50 ಆಷಾಢ ಡಿಸ್ಕೌಂಟ್ ಸೇಲ್

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗ ದೇವಸ್ಥಾನದ ಬ್ರಹ್ಮಕಲಶ: ಚಪ್ಪರ ಮುಹೂರ್ತ

Suddi Udaya

ಎ.12: ಅಳದಂಗಡಿ ಹನುಮೋತ್ಸವ ಕಾರ್ಯಕ್ರಮದಲ್ಲಿ ಶ್ರೀರಾಮ ಕ್ಷೇತ್ರದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಶ್ರೀಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜರವರಿಗೆ “ಮಹಾಭಿವಂದ್ಯ” ಗೌರವಾಭಿನಂದನೆ

Suddi Udaya

ಬಸದಿಗಳಿಗೆ ಅನುದಾನ : ಸವಣಾಲು ಕ್ಷೇತ್ರದ ಬಸದಿಯ ಅಭಿವೃದ್ಧಿಗೆ ರೂ.9 ಲಕ್ಷ, ಪುದುವೆಟ್ಟು ಬಸದಿಗೆ ರೂ.50 ಲಕ್ಷ ಬಿಡುಗಡೆ

Suddi Udaya

ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ದೆಹಲಿಯಲ್ಲಿ ಭೇಟಿಯಾದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

Suddi Udaya

ಉರುವಾಲು: ಗ್ರಾಮ ದೈವಗಳಿಗೆ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya
error: Content is protected !!