July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ದಿ ಹೇರ್‌ಲೇರ್ ಮೆನ್ಸ್ ಸೆಲೂನ್ ಉದ್ಘಾಟನೆ: ನೂತನ ಸೆಲೂನನ್ನು ಉದ್ಘಾಟಿಸಿ ಶುಭ ಹಾರೈಸಿದ ಖ್ಯಾತ ವೈದ್ಯ ಡಾ| ಶಾಂತಿಪ್ರಸಾದ್

ವೇಣೂರು: ಇಲ್ಲಿಯ ನೂತನ ಬಸ್ ತಂಗುದಾಣದ ನೆಲಮಹಡಿಯಲ್ಲಿ ನೂತನವಾಗಿ ಅರಂಭಗೊಂಡ ದಿ ಹೇರ್‌ಲೇರ್ ಮೆನ್ಸ್ ಸೆಲೂನ್‌ನ ಉದ್ಘಾಟನೆಯು ಇತ್ತೀಚೆಗೆ ಜರಗಿತು.


ವೇಣೂರಿನ ಪ್ರಖ್ಯಾತ ವೈದ್ಯರಾದ ಡಾ| ಶಾಂತಿಪ್ರಸಾದ್ ಅವರು ನೂತನ ಸೆಲೂನನ್ನು ಉದ್ಘಾಟಿಸಿ, ಶುಭ ಹಾರೈಸಿದರು. ವೇಣೂರು ಗ್ರಾ.ಪಂ. ಅಧ್ಯಕ್ಷರಾದ ನೇಮಯ್ಯ ಕುಲಾಲ್, ಪಂಚಾಯತ್‌ನ ಅಭಿವೃದ್ಧಿ ಅಧಿಕಾರಿ ನಾಗೇಶ್ ಎಂ., ವೆಂಕಟೇಶ್ ಭಂಡಾರಿ ಚಿಕ್ಕಮಗಳೂರು, ದಿವಾಕರ ಭಂಡಾರಿ ನಾರಾವಿ, ಪೂವಪ್ಪ ಭಂಡಾರಿ ಬೆಳ್ತಂಗಡಿ, ಉಮೇಶ್ ಭಂಡಾರಿ ಪಡ್ಡಂದಡ್ಕ, ಅಣ್ಣಿ ಭಂಡಾರಿ ಬೆಳ್ತಂಗಡಿ, ಗುಂಡ್ಯಲ್ಕೆ ಅಶೋಕ್ ಭಂಡಾರಿ, ಗಣೇಶ್ ನರ್ಮದಾ ಸ್ಟುಡಿಯೋ, ನಾಗಪ್ಪ, ಲಿಂಗಪ್ಪ ಮೂಲ್ಯ, ರವೀಂದ್ರ ಭಂಡಾರಿ ಮಂಗಳೂರು ವೇಣೂರಿನ ಉದ್ಯಮಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.


ಸಂಸ್ಥೆಯ ಮಾಲಕರಲ್ಲಿ ಓರ್ವರಾದ ಪ್ರಜ್ವಲ್ ಭಂಡಾರಿ ಮಾತನಾಡಿ, ಮಂಗಳೂರಿನ ಮುಡಿಪು ಮತ್ತು ಕಾಯರ್‌ಗೋಳಿಯಲ್ಲಿ ನಮ್ಮ ಸಂಸ್ಥೆ ಕಾರ್ಯಾಚರಿಸುತ್ತಿದ್ದು, ಗ್ರಾಹಕರಿಗೆ ತೃಪ್ತಿದಾಯಕ ಸೇವೆ ನೀಡುತ್ತಿದೆ. ವೇಣೂರಿನ ನೂತನ ಸೆಲೂನಲ್ಲೂ ಗ್ರಾಹಕರಿಗೆ ಆಶಾದಾಯಕ ಸೇವೆ ನೀಡಲು ಸನ್ನದ್ಧರಾಗಿದ್ದು, ತ್ವರಿತ ಸೇವೆಗಾಗಿ ಮೂವರು ಸಿಬ್ಬಂದಿ ಕಾರ್ಯಾಚರಿಸುತ್ತಿದ್ದಾರೆ ಎಂದರು. ಸಂಸ್ಥೆಯ ಸಹವರ್ತಿಗಳಾದ ವೇಣೂರು ಮೋಹನ್ ಭಂಡಾರಿ, ಪ್ರಮೋದ್ ಭಂಡಾರಿ ಅತಿಥಿಗಳನ್ನ ಸತ್ಕರಿಸಿದರು.

Related posts

ಶ್ರೀ ಧ .ಮಂ. ಪ್ರೌಢ ಶಾಲೆಯಲ್ಲಿ ಭೌತಶಾಸ್ತ್ರ ಶಿಕ್ಷಕರ ಕಾರ್ಯಾಗಾರ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಕಾದಂಬರಿ ” ಶಂಭು” ಬಿಡುಗಡೆ

Suddi Udaya

ಗೇರುಕಟ್ಟೆ: ವರ್ಗಾವಣೆ ಹೊಂದಿದ ಶಿಕ್ಷಕಿ ಮಮತಾರಿಗೆ ಸನ್ಮಾನ

Suddi Udaya

ಕಡಿರುದ್ಯಾವರ: ಕಾನರ್ಪ ಪುರುಷರ ಬಳಗದ ವತಿಯಿಂದ ಪುರುಷರ ರಾಶಿ ಪೂಜೆ

Suddi Udaya

ಮಂಗಳೂರು ಮಾಂಡೋವಿ ಮೋಟಾರ್ಸ್ ಉದ್ಯೋಗಿ, ಬೆಳ್ತಂಗಡಿ ತಾಲೂಕಿನ ಮುಂಡೂರು ನಿವಾಸಿ ಬೈಕ್ ಅಪಘಾತದಲ್ಲಿ ಮೃತ್ಯು

Suddi Udaya

ರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಉಜಿರೆಯ‌ ಎಸ್.ಡಿ.ಎಂ ಶಾಲೆ ವಿದ್ಯಾರ್ಥಿನಿ ಚಾಂಪಿಯನ್

Suddi Udaya
error: Content is protected !!