23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ದಿ ಹೇರ್‌ಲೇರ್ ಮೆನ್ಸ್ ಸೆಲೂನ್ ಉದ್ಘಾಟನೆ: ನೂತನ ಸೆಲೂನನ್ನು ಉದ್ಘಾಟಿಸಿ ಶುಭ ಹಾರೈಸಿದ ಖ್ಯಾತ ವೈದ್ಯ ಡಾ| ಶಾಂತಿಪ್ರಸಾದ್

ವೇಣೂರು: ಇಲ್ಲಿಯ ನೂತನ ಬಸ್ ತಂಗುದಾಣದ ನೆಲಮಹಡಿಯಲ್ಲಿ ನೂತನವಾಗಿ ಅರಂಭಗೊಂಡ ದಿ ಹೇರ್‌ಲೇರ್ ಮೆನ್ಸ್ ಸೆಲೂನ್‌ನ ಉದ್ಘಾಟನೆಯು ಇತ್ತೀಚೆಗೆ ಜರಗಿತು.


ವೇಣೂರಿನ ಪ್ರಖ್ಯಾತ ವೈದ್ಯರಾದ ಡಾ| ಶಾಂತಿಪ್ರಸಾದ್ ಅವರು ನೂತನ ಸೆಲೂನನ್ನು ಉದ್ಘಾಟಿಸಿ, ಶುಭ ಹಾರೈಸಿದರು. ವೇಣೂರು ಗ್ರಾ.ಪಂ. ಅಧ್ಯಕ್ಷರಾದ ನೇಮಯ್ಯ ಕುಲಾಲ್, ಪಂಚಾಯತ್‌ನ ಅಭಿವೃದ್ಧಿ ಅಧಿಕಾರಿ ನಾಗೇಶ್ ಎಂ., ವೆಂಕಟೇಶ್ ಭಂಡಾರಿ ಚಿಕ್ಕಮಗಳೂರು, ದಿವಾಕರ ಭಂಡಾರಿ ನಾರಾವಿ, ಪೂವಪ್ಪ ಭಂಡಾರಿ ಬೆಳ್ತಂಗಡಿ, ಉಮೇಶ್ ಭಂಡಾರಿ ಪಡ್ಡಂದಡ್ಕ, ಅಣ್ಣಿ ಭಂಡಾರಿ ಬೆಳ್ತಂಗಡಿ, ಗುಂಡ್ಯಲ್ಕೆ ಅಶೋಕ್ ಭಂಡಾರಿ, ಗಣೇಶ್ ನರ್ಮದಾ ಸ್ಟುಡಿಯೋ, ನಾಗಪ್ಪ, ಲಿಂಗಪ್ಪ ಮೂಲ್ಯ, ರವೀಂದ್ರ ಭಂಡಾರಿ ಮಂಗಳೂರು ವೇಣೂರಿನ ಉದ್ಯಮಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.


ಸಂಸ್ಥೆಯ ಮಾಲಕರಲ್ಲಿ ಓರ್ವರಾದ ಪ್ರಜ್ವಲ್ ಭಂಡಾರಿ ಮಾತನಾಡಿ, ಮಂಗಳೂರಿನ ಮುಡಿಪು ಮತ್ತು ಕಾಯರ್‌ಗೋಳಿಯಲ್ಲಿ ನಮ್ಮ ಸಂಸ್ಥೆ ಕಾರ್ಯಾಚರಿಸುತ್ತಿದ್ದು, ಗ್ರಾಹಕರಿಗೆ ತೃಪ್ತಿದಾಯಕ ಸೇವೆ ನೀಡುತ್ತಿದೆ. ವೇಣೂರಿನ ನೂತನ ಸೆಲೂನಲ್ಲೂ ಗ್ರಾಹಕರಿಗೆ ಆಶಾದಾಯಕ ಸೇವೆ ನೀಡಲು ಸನ್ನದ್ಧರಾಗಿದ್ದು, ತ್ವರಿತ ಸೇವೆಗಾಗಿ ಮೂವರು ಸಿಬ್ಬಂದಿ ಕಾರ್ಯಾಚರಿಸುತ್ತಿದ್ದಾರೆ ಎಂದರು. ಸಂಸ್ಥೆಯ ಸಹವರ್ತಿಗಳಾದ ವೇಣೂರು ಮೋಹನ್ ಭಂಡಾರಿ, ಪ್ರಮೋದ್ ಭಂಡಾರಿ ಅತಿಥಿಗಳನ್ನ ಸತ್ಕರಿಸಿದರು.

Related posts

ಕಿಲ್ಲೂರಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಹೋರಿ ಸಾವು

Suddi Udaya

ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿದ್ದ ಶ್ರೀ ಕೃಷ್ಣನ ಮೂರ್ತಿ ತೆರವು,: ಲಯನ್ಸ್ ಕ್ಲಬ್ ಅದ್ಯಕ್ಷ ದೇವದಾಸ್ ಶೆಟ್ಟಿ ನೇತೃತ್ವದಲ್ಲಿ ಪವಿತ್ರ ಪಲ್ಗುಣಿ ನದಿಯಲ್ಲಿ ಮೂರ್ತಿ ವಿಸರ್ಜನೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸಾಧನ ಪ್ರಶಸ್ತಿ

Suddi Udaya

ನಡ: ಸ್ಟಾರ್ ಲೈನ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ” ಫಿಟ್ ಫೆಸ್ಟ್ 2024 “

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಂದೂವರೆ ತಿಂಗಳ ಮಗು ಸಾವು: ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ವಸಂತ ಬಂಗೇರ ಸೂಕ್ತ ತನಿಖೆಗೆ ಒತ್ತಾಯ

Suddi Udaya

ಉಜಿರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕೊಲ್ಪಾಡಿ ಶಾಲೆಯ ವಿದ್ಯಾರ್ಥಿನಿ ತನಿಷ್ಕ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!