25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನೆರಿಯ ವಲಯದ ಭಜನಾ ಪರಿಷತ್ ಸಭೆ

ತೋಟತ್ತಾಡಿ: ನೆರಿಯ ವಲಯದ ಭಜನಾ ಪರಿಷತ್ ಸಭೆಯನ್ನು, ವಲಯ ಕಛೇರಿ ತೋಟತ್ತಾಡಿಯಲ್ಲಿ ನಡೆಸಲಾಯಿತು.

ಈ ಸಭೆಯಲ್ಲಿ ಪ್ರಾಸ್ತವಿಕವಾಗಿ ಮಾತನಾಡಿದ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಚಂದ್ರಶೇಖರ ಸಾಲಿಯಾನ್ ರವರು ಕಾರ್ಯಕ್ರಮದ ಉದ್ದೇಶ, ಮೂಲಭೂತ ಸೌಕರ್ಯಗಳ ಬಗ್ಗೆ, 3 ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆ ಸೇರುವ ಬಗ್ಗೆ, ನಮ್ಮ ಸಂಪ್ರದಾಯದಲ್ಲಿ ಭಜನೆಗೆ ಇರುವ ಮಹತ್ವದ ಬಗ್ಗೆ ಸವಿವಾರವಾಗಿ ಮಾಹಿತಿಯನ್ನು ನೀಡಿದರು.

ಭಜನಾ ಪರಿಷತ್ ತಾಲೂಕು ಅಧ್ಯಕ್ಷರಾದ ವೆಂಕಟೇಶ್ ಭಟ್ ರವರು ಪೂಜ್ಯಖಾವಂದರಿಗೆ ಭಜನಾ ಮಂಡಳಿಗಳ ಮೇಲೆ ಇರುವ ಅಭಿಮಾನದ ಬಗ್ಗೆ, ವಲಯದಲ್ಲಿ ಮುಂದಿನ ದಿನಗಳಲ್ಲಿ ಭಜನಾ ಮಂಡಳಿಗಳು ಒಗ್ಗಟ್ಟಿನಲ್ಲಿ ಇದ್ದು ಉತ್ತಮವಾಗಿ ಸಂಘಟನೆಯನ್ನು ಮಾಡಿ ನಮ್ಮ ಬೆಳ್ತಂಗಡಿ ತಾಲೂಕಿನಲ್ಲಿ ಭಜನಾಪರಿಷತ್ ಪ್ರಥಮ ಸ್ಥಾನದಲ್ಲಿ ಬರುವ ಹಾಗೆ ಮಾಡುವಲ್ಲಿ ನಾವೆಲ್ಲರೂ ಪ್ರಯತ್ನ ಪಡೋಣ ಎಂದು ಶುಭವನ್ನು ಹಾರೈಸಿದರು.

ಸಭೆಯಲ್ಲಿ ವಲಯ ಭಜನಾ ಪರಿಷತ್ ಸಂಚಾಲಕರಾದ ಪಿ.ಕೆ ರಾಜನ್, ವಲಯಧ್ಯಕ್ಷರಾದ ಸತೀಶ್, ವಲಯ ಮೇಲ್ವಿಚಾರಕರಾದ ರಾಜೇಶ್, ವಲಯದ ಎಲ್ಲಾ ಭಜನಾ ಪರಿಷತ್ ನ ಪದಾಧಿಕಾರಿಗಳು ಮತ್ತು ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು .

Related posts

ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್. ಎಸ್.ಎಲ್.ಸಿ ಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಮೇಘನಾ ರವರಿಗೆ ಸನ್ಮಾನ

Suddi Udaya

ಕಲ್ಮಂಜ ಸರಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆ ಜಿಲ್ಲಾಮಟ್ಟದಲ್ಲೇ ಪ್ರಥಮ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ವಿಶೇಷ ಪೂಜೆ

Suddi Udaya

ವೇಣೂರು ಸರಕಾರಿ ಜಾಗದಲ್ಲಿ ಚಿರತೆಯ ಮೃತದೇಹ ಪತ್ತೆ

Suddi Udaya

ಪುಂಜಾಲಕಟ್ಟೆ: ಪ್ರಸೂತಿ ತಜ್ಞೆ, ನಾಟಿ ವೈದ್ಯೆ ಶ್ರೀಮತಿ ಅಪ್ಪಿ ಪೂಜಾರಿ ಉರ್ಕಲೊಟ್ಟು ನಿಧನ

Suddi Udaya

ಶಿರ್ಲಾಲು ಪೇಟೆಯಲ್ಲಿ ಕಾಣಿಸಿಕೊಂಡ ಚಿರತೆ

Suddi Udaya
error: Content is protected !!