September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಪುದುವೆಟ್ಟು ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವನಮಹೋತ್ಸವ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಜು.13 ರಂದು ಆಚರಿಸಲಾಯಿತು.

ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಸ್ಥಳೀಯ ಪ್ರಗತಿಪರ ಕೃಷಿಕರು, ಬೊಳ್ಮ ನಾರ್ ಹಾಲು ಉತ್ಪಾದಕ ಸಹಕಾರಿ ಸಂಘದ ಅಧ್ಯಕ್ಷ ರಂಗನಾಥ್ ಏನ್ ಪಿ ಉಪಸ್ಥಿತರಿದ್ದು ಶಾಲೆಯಲ್ಲಿ ಸಾಂಕೇತಿಕವಾಗಿ ತೆಂಗಿನ ಸಸಿಯನ್ನು ನೀಡುವುದರ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಮಾತನಾಡಿದ ಅವರು ಪ್ರತಿಯೊಂದು ಮಗು ಮನೆಯಲ್ಲಿ ವರ್ಷದಲ್ಲಿ ಕನಿಷ್ಠ ಒಂದು ಗಿಡವನ್ನಾದರೂ ನೆಟ್ಟು ಪೋಷಣೆಯನ್ನು ಮಾಡಿದರೆ ಈ ವನಮಹೋತ್ಸವ ಕಾರ್ಯಕ್ರಮಕ್ಕೆ ಗೌರವವನ್ನು ಸೂಚಿಸಿದಂತೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಶೀನಪ್ಪಗೌಡರವರು ವನಮಹೋತ್ಸವದಲ್ಲಿ ಶಾಲೆಯಲ್ಲಿ ಇರುವಂತಹ ಗಿಡಮರಗಳನ್ನು, ಮನೆಯಲ್ಲಿ ನೆಟ್ಟು ಬೆಳೆಸಿದಂತ ಗಿಡ ಮರಗಳನ್ನು ಒಳ್ಳೆಯ ರೀತಿಯಲ್ಲಿ ಪಾಲನೆ ಪೋಷಣೆ ಮಾಡುವುದರ ಮೂಲಕ ವಿದ್ಯಾರ್ಥಿಗಳೆಲ್ಲರೂ ಕೂಡ ವನಮಹೋತ್ಸವವನ್ನು ಮನೆಯಲ್ಲಿ ಕೂಡ ಆಚರಿಸಬೇಕೆಂದು ತಿಳಿಸಿದರು.

ಶಾಲೆಯ ಶಿಕ್ಷಕಿಯಾದ ಶ್ರೀಮತಿ ಶೀಲಾ ಎನ್. ಮಾತನಾಡಿ ವನಮಹೋತ್ಸವ ದಿನಾಚರಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳಿಂದ ವನಮಹೋತ್ಸವದ ಕುರಿತಂತೆ ಭಾಷಣ ಹಾಗೂ ಗೀತೆಗಳನ್ನು ಹಾಡಿಸಲಾಯಿತು. ವಿದ್ಯಾರ್ಥಿಗಳ ಪ್ರಾರ್ಥನ ಗೀತೆಯೊಂದಿಗೆ ಆರಂಭಗೊಂಡ ಈ ಕಾರ್ಯಕ್ರಮದಲ್ಲಿ ನಿಶಾಂತ್ ಕುಮಾರ್ ಸ್ವಾಗತಿಸಿ, ಶ್ರೀಮತಿ ಪುಷ್ಪಲತಾ ಧನ್ಯವಾದ ಗೈದ ಕಾರ್ಯಕ್ರಮವನ್ನು ಶ್ರೀಮತಿ ಸುಜಾತ ಬಿ ರವರು ನಿರೂಪಿಸಿದರು. ಶಾಲೆಯ ಎಲ್ಲ ಶಿಕ್ಷಕರು ಉಪಸ್ಥಿತರಿದ್ದು ಸಹಕರಿಸಿದರು.

Related posts

ಲೇಖಕಿ ಪದ್ಮಲತಾ ಮೋಹನ್ ನಿಡ್ಲೆರವರ ಎಲ್ ಬಿಡಬ್ಲೂ ಮತ್ತು ವಿದ್ಯಾಸಾರಥಿ ಮತ್ತು ಮನೋಸಾರಥಿ ಪುಸ್ತಕ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಸೆ.7-11: ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 63ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಅನಾರೋಗ್ಯದಲ್ಲಿರುವ ಗ್ರಾಮ ಪಂಚಾಯತ್ ನೌಕರರಿಗೆ ರೂ.35 ಸಾವಿರ ಆರ್ಥಿಕ ನೆರವು ಹಾಗೂ ಪಡಿತರ ವಿತರಣೆ

Suddi Udaya

ನವದೆಹಲಿಯ ಗಣರಾಜ್ಯೋತ್ಸವ ಪೆರೇಡ್ ಗೆ ಮೂಡುಕೋಡಿಯ ನಿಷ್ಮಾ ಪೂಜಾರಿ ಆಯ್ಕೆ

Suddi Udaya

ಉಜಿರೆ:ಎಸ್.ಡಿ.ಎಂ ಮಹಿಳಾ ಐ.ಟಿ.ಐ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!