25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಳೆಪೇಟೆ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

ಉಜಿರೆ: ಸರಕಾರಿ ಪ್ರೌಢಶಾಲೆ ಹಳೆಪೇಟೆ ಉಜಿರೆಯಲ್ಲಿ ಮಕ್ಕಳ ಹಕ್ಕುಗಳ ಸಂಘವನ್ನು ಜು.13ರಂದು ಉದ್ಘಾಟಿಸಲಾಯಿತು.

ಸಂಘದ ಉದ್ಘಾಟನೆಯನ್ನು ನೆರವೇರಿಸಿದ ಮುಖ್ಯೋಪಾಧ್ಯಾಯರಾದ ತ್ರಿವೇಣಿ ಬಾಯಿ ಮಕ್ಕಳಿಗೆ ಪುಸ್ತಕ ವಿತರಿಸಿ ಶುಭ ಹಾರೈಸಿದರು.

ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಮಕ್ಕಳ ಹಕ್ಕುಗಳ ಸಂಘದ ಸಂಯೋಜಕರಾದ ಚೈಲ್ಡ್ ರೈಟ್ಸ್ ಟ್ರಸ್ಟ್ ನ ವಿನೋದ್ ಪ್ರಸಾದ್ ಕಲ್ಲಾಜೆ , ಮಕ್ಕಳ ಹಕ್ಕುಗಳ ಸಂಘದ ವಾರ್ಷಿಕ ಚಟುವಟಿಕೆಗಳನ್ನು ವಿವರಿಸಿ ಸದಸ್ಯರಿಗೆ ಸಂಘದ ಸ್ಥೂಲ ಪರಿಚಯ ಮಾಡಿಕೊಟ್ಟು ಅವಕಾಶಗಳ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಸದಸ್ಯರಿಗೆ ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಂಗಳೂರು ವತಿಯಿಂದ “ಮಕ್ಕಳ ಹಕ್ಕುಗಳ ಜಾರಿಯಲ್ಲಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತ್” ಪುಸ್ತಕವನ್ನು ವಿತರಿಸಲಾಯಿತು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಲೆಯ ಹಿರಿಯ ಶಿಕ್ಷಕರಾದ ಶಂಭುಶಂಕರ್ , ಸುಮ.ಪಿ, ಶಾರದಾ ಮರಾಠೆ ಹಾಗೂ ನಾರಾಯಣ ಗೌಡ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಪೂರ್ವ ಅಧ್ಯಕ್ಷರಿಗೆ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಅ.20 ರಂದು ಧರ್ಮಸ್ಥಳದಲ್ಲಿ ಸ್ನೇಹ ಕೂಟ

Suddi Udaya

ಅಕ್ರಮವಾಗಿ ಕಡಿದು ಸಂಗ್ರಹಿಸಿದ್ದ ಮರಮಟ್ಟು ವಶಕ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಮುಸ್ಕಾನ್ ಕೌಸರ್ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಯುವವಾಹಿನಿ ಮಹಿಳಾ ಸಂಚಲನಾ ಸಮಿತಿಯಿಂದ “ಮನಸು “ಅಂತರಾಳದ ಅವಲೋಕನ

Suddi Udaya

ಪ್ರಸನ್ನ ಪದವಿ ಪೂರ್ವ ಕಾಲೇಜಿನಲ್ಲಿ ಮಹಿಳಾ ಸಬಲೀಕರಣ ಉಪನ್ಯಾಸ

Suddi Udaya
error: Content is protected !!