25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯ

ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಭಿನ್ನಮತ ಸ್ಫೋಟ: ಎರಡು ಬಣಗಳ ನಡುವೆ ಮಾತಿನ ಚಕಮಕಿ: ಬೆಳ್ತಂಗಡಿ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಬುಗಿಲೆದ್ದ ಭಿನ್ನಮತ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲಿನ ಕುರಿತು ಪರಾಮರ್ಶೆ ಸಭೆ ಜು.14 ರಂದು ಬೆಳ್ತಂಗಡಿ ಮೂರು ಮಾರ್ಗದ ಬಳಿ ಇರುವ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಡೆದಿದ್ದು ಸಭೆಯಲ್ಲಿ ಸತ್ಯಶೋಧನಾ ಸಮಿತಿಯವರ ಎದುರೇ ಕಾಂಗ್ರೆಸ್ ಪಕ್ಷದ ಎರಡು ಬಣಗಳ ನಡುವೆ ಮಾತಿನ ಚಕಮಕಿ, ಪರಸ್ಪರ ಆರೋಪ-ಪ್ರತ್ಯಾರೋಪಗಳು ನಡೆದ ಬಗ್ಗೆ ವರದಿಯಾಗಿದೆ.

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಪಕ್ಷದ ಸೋಲಿನ ಪರಾಮರ್ಶೆ ನಡೆಸಲು ಸತ್ಯಶೋಧನಾ ಸಮಿತಿಯ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಸದಸ್ಯರಾದ ಶಕುಂತಳಾ ಶೆಟ್ಟಿ, ಮಮತಾ ಗಟ್ಟಿ, ಅಶ್ವಿನ್ ಕುಮಾರ್ ಆಗಮಿಸಿದ್ದರು.

ಸಭೆಯಲ್ಲಿ ಪಕ್ಷದ ಸೋಲಿಗೆ ಕಾರಣಗಳ ಬಗ್ಗೆ ಸಮಿತಿಯವರು ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಂದ ವಿವರಗಳನ್ನು ಪಡೆದು ಅಂತಿಮ ವರದಿ ಪಕ್ಷದ ವರಿಷ್ಠರಿಗೆ ಸಲ್ಲಿಸಬೇಕಾಗಿತ್ತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ರಂಜನ್ ಜಿ ಗೌಡ, ಶೈಲೇಶ್ ಕುಮಾರ್, ಕೆಪಿಸಿಸಿ ಸದಸ್ಯರಾದ ಕೇಶವ್ ಪಿ ಬೆಳಾಲ್ ಯುವ ಮುಖಂಡ ಹರೀಶ್ ಕುಮಾರ್, ಎ ಸಿ ಮ್ಯಾಥ್ಯ, ರಾಜಶೇಖರ ಅಜ್ರಿ ಮುಂತಾದವರು ಸಭೆಯಲ್ಲಿದ್ದರು,ಸಮಿತಿಯವರು ಅಪ್ರಾಭಿಯಗಳನ್ನು ಪಡೆಯುತ್ತಿರುವ ಸಮಯ ಕಾಂಗ್ರೆಸ್‌ನ ಅಭ್ಯರ್ಥಿಯ ಸೋಲಿನ ಬಗ್ಗೆ ಪ್ರಸ್ತಾಪವಾಗಿ ಎರಡು ಬಣಗಳ ನಡುವೆ ಮುಖಂಡರೇ ಎದುರೇ ಮಾತಿನ ಚಕಮಕಿ ನಡೆಯಿತು.

ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ರಂಜನ್ ಜಿ.ಗೌಡ, ಅಭಿನಂದನ್ ಹಾಗೂ ರಕ್ಷಿತ್ ಶಿವರಾಂ ಬಣದ ಪ್ರವೀಣ್ ಫೆರ್ನಾಂಡೀಸ್, ಸಚಿನ್ ನೂಜೋಡಿ, ನವೀನ್, ರಾಜೇಶ್ ಭಟ್ ಸವಣಾಲು ಮೊದಲಾದವರ ನಡುವೆ ಮಾತಿನ ಚಕಮಕಿ ನಡೆದು ಹೊಕೈ ಹಂತದವರೆಗೆಗೂ ತಲುಪಿತ್ತು. ಪಕ್ಷದ ಮುಖಡಂರು ಎರಡು ಕಡೆಯವರನ್ನು ಸಮಾಧಾನ ಪಡಿಸಿದ ಬಳಿಕ ಸಮತಿಯವರು ಅಭಿಪ್ರಾಯಗಳನ್ನು ಪಡೆದುಕೊಂಡರು.

Related posts

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಭಡ್ತಿಗೊಂಡ ಕೊರಗಪ್ಪ ಟಿ.ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸದಸ್ಯರು ಎಸ್.ಎಸ್.ಎಲ್.ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ, ಸಾಧಕರಿಗೆ ಸನ್ಮಾನ

Suddi Udaya

ಪುಂಜಾಲಕಟ್ಟೆ ಬಸವನಗುಡಿ ನಿವಾಸಿ ಚಿನ್ನಸ್ವಾಮಿ ಮೇಸ್ತ್ರಿ ನಿಧನ

Suddi Udaya

ವೇಣೂರು ಸ. ಪ.ಪೂ. ಕಾಲೇಜಿಗೆ ಹಳೆವಿದ್ಯಾರ್ಥಿಗಳಿಂದ ಹೊಸ ಪ್ರೊಜೆಕ್ಟರ್ ಕೊಡುಗೆ

Suddi Udaya

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya

ಮದ್ಯದ ಅಂಗಡಿ ಹೆಚ್ಚಿಸಲು ಮುಂದಾದ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya
error: Content is protected !!