25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನೆರಿಯ ವಲಯದ ಭಜನಾ ಪರಿಷತ್ ಸಭೆ

ತೋಟತ್ತಾಡಿ: ನೆರಿಯ ವಲಯದ ಭಜನಾ ಪರಿಷತ್ ಸಭೆಯನ್ನು, ವಲಯ ಕಛೇರಿ ತೋಟತ್ತಾಡಿಯಲ್ಲಿ ನಡೆಸಲಾಯಿತು.

ಈ ಸಭೆಯಲ್ಲಿ ಪ್ರಾಸ್ತವಿಕವಾಗಿ ಮಾತನಾಡಿದ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಚಂದ್ರಶೇಖರ ಸಾಲಿಯಾನ್ ರವರು ಕಾರ್ಯಕ್ರಮದ ಉದ್ದೇಶ, ಮೂಲಭೂತ ಸೌಕರ್ಯಗಳ ಬಗ್ಗೆ, 3 ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆ ಸೇರುವ ಬಗ್ಗೆ, ನಮ್ಮ ಸಂಪ್ರದಾಯದಲ್ಲಿ ಭಜನೆಗೆ ಇರುವ ಮಹತ್ವದ ಬಗ್ಗೆ ಸವಿವಾರವಾಗಿ ಮಾಹಿತಿಯನ್ನು ನೀಡಿದರು.

ಭಜನಾ ಪರಿಷತ್ ತಾಲೂಕು ಅಧ್ಯಕ್ಷರಾದ ವೆಂಕಟೇಶ್ ಭಟ್ ರವರು ಪೂಜ್ಯಖಾವಂದರಿಗೆ ಭಜನಾ ಮಂಡಳಿಗಳ ಮೇಲೆ ಇರುವ ಅಭಿಮಾನದ ಬಗ್ಗೆ, ವಲಯದಲ್ಲಿ ಮುಂದಿನ ದಿನಗಳಲ್ಲಿ ಭಜನಾ ಮಂಡಳಿಗಳು ಒಗ್ಗಟ್ಟಿನಲ್ಲಿ ಇದ್ದು ಉತ್ತಮವಾಗಿ ಸಂಘಟನೆಯನ್ನು ಮಾಡಿ ನಮ್ಮ ಬೆಳ್ತಂಗಡಿ ತಾಲೂಕಿನಲ್ಲಿ ಭಜನಾಪರಿಷತ್ ಪ್ರಥಮ ಸ್ಥಾನದಲ್ಲಿ ಬರುವ ಹಾಗೆ ಮಾಡುವಲ್ಲಿ ನಾವೆಲ್ಲರೂ ಪ್ರಯತ್ನ ಪಡೋಣ ಎಂದು ಶುಭವನ್ನು ಹಾರೈಸಿದರು.

ಸಭೆಯಲ್ಲಿ ವಲಯ ಭಜನಾ ಪರಿಷತ್ ಸಂಚಾಲಕರಾದ ಪಿ.ಕೆ ರಾಜನ್, ವಲಯಧ್ಯಕ್ಷರಾದ ಸತೀಶ್, ವಲಯ ಮೇಲ್ವಿಚಾರಕರಾದ ರಾಜೇಶ್, ವಲಯದ ಎಲ್ಲಾ ಭಜನಾ ಪರಿಷತ್ ನ ಪದಾಧಿಕಾರಿಗಳು ಮತ್ತು ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು .

Related posts

ಬೆಳ್ತಂಗಡಿ ರೋಟರಿ ಭವನದಲ್ಲಿ ಪ್ರಥಮ ಚಿಕಿತ್ಸೆ ಬಗ್ಗೆ ತರಬೇತಿ

Suddi Udaya

ಸವಣಾಲು ನೇತಾಜಿ ಸುಭಾಷ್ ಚಂದ್ರ ಬೋಸ್ ಸ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಅಪೇಕ್ಷಾ ಎನ್.ಎಂ.ಎಂ.ಎಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದು ವಿದ್ಯಾರ್ಥಿವೇತನಕ್ಕೆ ಆಯ್ಕೆ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಪೃಥ್ವಿ ಜ್ಯವೆಲ್ಸ್ ನಿಂದ ಗೌರವಾರ್ಪಣೆ

Suddi Udaya

ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಕ್ರೀಡೋತ್ಸವ: ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಭಾರಿ ಗಾಳಿ ಮಳೆ: ಉಜಿರೆ ಪೆರ್ಲ ನಿವಾಸಿ ಹೇಮಾವತಿರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ: ಗ್ರಾ.ಪಂ. ನಿಂದ ನೆರವು

Suddi Udaya

ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷರಿಗೆ ಕೊಯ್ಯೂರಿನ ಶ್ರೀ ಕೃಷ್ಣ ಭಜನಾ ಮಂಡಳಿಯಲ್ಲಿ ಅಭಿನಂದನೆ

Suddi Udaya
error: Content is protected !!