25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಪುದುವೆಟ್ಟು ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವನಮಹೋತ್ಸವ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಜು.13 ರಂದು ಆಚರಿಸಲಾಯಿತು.

ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಸ್ಥಳೀಯ ಪ್ರಗತಿಪರ ಕೃಷಿಕರು, ಬೊಳ್ಮ ನಾರ್ ಹಾಲು ಉತ್ಪಾದಕ ಸಹಕಾರಿ ಸಂಘದ ಅಧ್ಯಕ್ಷ ರಂಗನಾಥ್ ಏನ್ ಪಿ ಉಪಸ್ಥಿತರಿದ್ದು ಶಾಲೆಯಲ್ಲಿ ಸಾಂಕೇತಿಕವಾಗಿ ತೆಂಗಿನ ಸಸಿಯನ್ನು ನೀಡುವುದರ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಮಾತನಾಡಿದ ಅವರು ಪ್ರತಿಯೊಂದು ಮಗು ಮನೆಯಲ್ಲಿ ವರ್ಷದಲ್ಲಿ ಕನಿಷ್ಠ ಒಂದು ಗಿಡವನ್ನಾದರೂ ನೆಟ್ಟು ಪೋಷಣೆಯನ್ನು ಮಾಡಿದರೆ ಈ ವನಮಹೋತ್ಸವ ಕಾರ್ಯಕ್ರಮಕ್ಕೆ ಗೌರವವನ್ನು ಸೂಚಿಸಿದಂತೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಶೀನಪ್ಪಗೌಡರವರು ವನಮಹೋತ್ಸವದಲ್ಲಿ ಶಾಲೆಯಲ್ಲಿ ಇರುವಂತಹ ಗಿಡಮರಗಳನ್ನು, ಮನೆಯಲ್ಲಿ ನೆಟ್ಟು ಬೆಳೆಸಿದಂತ ಗಿಡ ಮರಗಳನ್ನು ಒಳ್ಳೆಯ ರೀತಿಯಲ್ಲಿ ಪಾಲನೆ ಪೋಷಣೆ ಮಾಡುವುದರ ಮೂಲಕ ವಿದ್ಯಾರ್ಥಿಗಳೆಲ್ಲರೂ ಕೂಡ ವನಮಹೋತ್ಸವವನ್ನು ಮನೆಯಲ್ಲಿ ಕೂಡ ಆಚರಿಸಬೇಕೆಂದು ತಿಳಿಸಿದರು.

ಶಾಲೆಯ ಶಿಕ್ಷಕಿಯಾದ ಶ್ರೀಮತಿ ಶೀಲಾ ಎನ್. ಮಾತನಾಡಿ ವನಮಹೋತ್ಸವ ದಿನಾಚರಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳಿಂದ ವನಮಹೋತ್ಸವದ ಕುರಿತಂತೆ ಭಾಷಣ ಹಾಗೂ ಗೀತೆಗಳನ್ನು ಹಾಡಿಸಲಾಯಿತು. ವಿದ್ಯಾರ್ಥಿಗಳ ಪ್ರಾರ್ಥನ ಗೀತೆಯೊಂದಿಗೆ ಆರಂಭಗೊಂಡ ಈ ಕಾರ್ಯಕ್ರಮದಲ್ಲಿ ನಿಶಾಂತ್ ಕುಮಾರ್ ಸ್ವಾಗತಿಸಿ, ಶ್ರೀಮತಿ ಪುಷ್ಪಲತಾ ಧನ್ಯವಾದ ಗೈದ ಕಾರ್ಯಕ್ರಮವನ್ನು ಶ್ರೀಮತಿ ಸುಜಾತ ಬಿ ರವರು ನಿರೂಪಿಸಿದರು. ಶಾಲೆಯ ಎಲ್ಲ ಶಿಕ್ಷಕರು ಉಪಸ್ಥಿತರಿದ್ದು ಸಹಕರಿಸಿದರು.

Related posts

ತೆಕ್ಕಾರಿನ ಬಟ್ರಬೈಲು ಎಂಬಲ್ಲಿ ದೇವಸ್ಥಾನದ ಬಾವಿಯಲ್ಲಿ ಅತೀ ಪುರಾತನ ಶ್ರೀ ಕೃಷ್ಣ ದೇವರ ವಿಗ್ರಹ ಪತ್ತೆ

Suddi Udaya

ಉಜಿರೆ: ಶಿಕ್ಷಕರ ದಿನಾಚರಣೆಯ ಅಂಗವಾಗಿ ನಡೆದ ಹಲವು ಸ್ಪರ್ಧೆಗಳಲ್ಲಿ ಎಸ್.ಡಿ.ಎಮ್ ಅನುದಾನಿತ ಸೆಕೆಂಡರಿ ಶಾಲೆಗೆ ಪ್ರಶಸ್ತಿ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅನ್ನದಾನ ಸೇವೆಯ ಕರಪತ್ರ ಬಿಡುಗಡೆ

Suddi Udaya

ಸೋಣಂದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಆಶ್ರಯದಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಕೊಕ್ಕಡ: ಜೇಸಿ ಸಂಸ್ಥೆ ವಲಯ 15ರ ವಲಯಾಡಳಿತ ಸಭೆ

Suddi Udaya
error: Content is protected !!