25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಳೆಪೇಟೆ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

ಉಜಿರೆ: ಸರಕಾರಿ ಪ್ರೌಢಶಾಲೆ ಹಳೆಪೇಟೆ ಉಜಿರೆಯಲ್ಲಿ ಮಕ್ಕಳ ಹಕ್ಕುಗಳ ಸಂಘವನ್ನು ಜು.13ರಂದು ಉದ್ಘಾಟಿಸಲಾಯಿತು.

ಸಂಘದ ಉದ್ಘಾಟನೆಯನ್ನು ನೆರವೇರಿಸಿದ ಮುಖ್ಯೋಪಾಧ್ಯಾಯರಾದ ತ್ರಿವೇಣಿ ಬಾಯಿ ಮಕ್ಕಳಿಗೆ ಪುಸ್ತಕ ವಿತರಿಸಿ ಶುಭ ಹಾರೈಸಿದರು.

ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಮಕ್ಕಳ ಹಕ್ಕುಗಳ ಸಂಘದ ಸಂಯೋಜಕರಾದ ಚೈಲ್ಡ್ ರೈಟ್ಸ್ ಟ್ರಸ್ಟ್ ನ ವಿನೋದ್ ಪ್ರಸಾದ್ ಕಲ್ಲಾಜೆ , ಮಕ್ಕಳ ಹಕ್ಕುಗಳ ಸಂಘದ ವಾರ್ಷಿಕ ಚಟುವಟಿಕೆಗಳನ್ನು ವಿವರಿಸಿ ಸದಸ್ಯರಿಗೆ ಸಂಘದ ಸ್ಥೂಲ ಪರಿಚಯ ಮಾಡಿಕೊಟ್ಟು ಅವಕಾಶಗಳ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಸದಸ್ಯರಿಗೆ ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಂಗಳೂರು ವತಿಯಿಂದ “ಮಕ್ಕಳ ಹಕ್ಕುಗಳ ಜಾರಿಯಲ್ಲಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತ್” ಪುಸ್ತಕವನ್ನು ವಿತರಿಸಲಾಯಿತು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಲೆಯ ಹಿರಿಯ ಶಿಕ್ಷಕರಾದ ಶಂಭುಶಂಕರ್ , ಸುಮ.ಪಿ, ಶಾರದಾ ಮರಾಠೆ ಹಾಗೂ ನಾರಾಯಣ ಗೌಡ ಉಪಸ್ಥಿತರಿದ್ದರು.

Related posts

ಚಂದ್ರನ ಮೇಲೆ ಸ್ಪರ್ಶ, ಎಕ್ಸೆಲ್ ನಲ್ಲಿ ಹರ್ಷ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಕನ್ಯಾಡಿ ಶ್ರೀ ಗುರುದೇವ ಮಠಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಮಡಂತ್ಯಾರು: ಕೆಎಸ್ಸಾರ್ಟಿಸಿ ಬಸ್ – ಬೈಕ್ ಅಪಘಾತ ಸವಾರ ಮೃತ್ಯು

Suddi Udaya

ಶ್ರೀ ರಾಮ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ

Suddi Udaya
error: Content is protected !!