September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಳೆಪೇಟೆ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

ಉಜಿರೆ: ಸರಕಾರಿ ಪ್ರೌಢಶಾಲೆ ಹಳೆಪೇಟೆ ಉಜಿರೆಯಲ್ಲಿ ಮಕ್ಕಳ ಹಕ್ಕುಗಳ ಸಂಘವನ್ನು ಜು.13ರಂದು ಉದ್ಘಾಟಿಸಲಾಯಿತು.

ಸಂಘದ ಉದ್ಘಾಟನೆಯನ್ನು ನೆರವೇರಿಸಿದ ಮುಖ್ಯೋಪಾಧ್ಯಾಯರಾದ ತ್ರಿವೇಣಿ ಬಾಯಿ ಮಕ್ಕಳಿಗೆ ಪುಸ್ತಕ ವಿತರಿಸಿ ಶುಭ ಹಾರೈಸಿದರು.

ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಮಕ್ಕಳ ಹಕ್ಕುಗಳ ಸಂಘದ ಸಂಯೋಜಕರಾದ ಚೈಲ್ಡ್ ರೈಟ್ಸ್ ಟ್ರಸ್ಟ್ ನ ವಿನೋದ್ ಪ್ರಸಾದ್ ಕಲ್ಲಾಜೆ , ಮಕ್ಕಳ ಹಕ್ಕುಗಳ ಸಂಘದ ವಾರ್ಷಿಕ ಚಟುವಟಿಕೆಗಳನ್ನು ವಿವರಿಸಿ ಸದಸ್ಯರಿಗೆ ಸಂಘದ ಸ್ಥೂಲ ಪರಿಚಯ ಮಾಡಿಕೊಟ್ಟು ಅವಕಾಶಗಳ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಸದಸ್ಯರಿಗೆ ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಂಗಳೂರು ವತಿಯಿಂದ “ಮಕ್ಕಳ ಹಕ್ಕುಗಳ ಜಾರಿಯಲ್ಲಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತ್” ಪುಸ್ತಕವನ್ನು ವಿತರಿಸಲಾಯಿತು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಲೆಯ ಹಿರಿಯ ಶಿಕ್ಷಕರಾದ ಶಂಭುಶಂಕರ್ , ಸುಮ.ಪಿ, ಶಾರದಾ ಮರಾಠೆ ಹಾಗೂ ನಾರಾಯಣ ಗೌಡ ಉಪಸ್ಥಿತರಿದ್ದರು.

Related posts

ಜಿಲ್ಲಾ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರನ್ನು ಭೇಟಿ ಮಾಡಿದ ಬೆಳ್ತಂಗಡಿ ವಕೀಲರ ಸಂಘ

Suddi Udaya

ಮುಂಡಾಜೆ: ಗುಡ್ಡಕ್ಕೆ ಬೆಂಕಿ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಪೋಷಕರಿಂದ ಶ್ರಮದಾನ 

Suddi Udaya

ಎಕ್ಸೆಲ್ ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಕಾಜೂರು ಉರೂಸ್; ಪ್ರತಿದಿನ‌‌ ವಿಭಿನ್ನ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನ

Suddi Udaya

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

Suddi Udaya
error: Content is protected !!