25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿವರದಿ

ಬೆನಕ ಆಸ್ಪತ್ರೆಯಲ್ಲಿ ನೂತನ ಆವಿಷ್ಕಾರದ ಕ್ಷ-ಕಿರಣ ಯಂತ್ರ ಉದ್ಘಾಟನೆ

ಉಜಿರೆ: ಎನ್.ಎ.ಬಿ.ಎಚ್. ಪುರಸ್ಕೃತ ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಹೊಸ ಆವಿಷ್ಕಾರದ ಬಿಪಿಎಲ್ ಕಂಪನಿಯ D.R.-1 Prime ಮಾದರಿಯ ಕ್ಷ-ಕಿರಣ(X-Ray) ಯಂತ್ರವನ್ನು ಜು.14 ರಂದು ದ.ಕ ಜಿಲ್ಲೆಯ ಪ್ರಖ್ಯಾತ ಹೃದ್ರೋಗ ತಜ್ಞರಾದ ಡಾ. ಪದ್ಮನಾಭ ಕಾಮತ್ ರವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ದ.ಕ ಜಿಲ್ಲೆಯ ಕೆಲವೇ ಕೆಲವು ಆಸ್ಪತ್ರೆಗಳಲ್ಲಿ ಮಾತ್ರ ಇಂಥ ಅತ್ಯುತ್ತಮವಾದ ನೂತನ ಆವಿಷ್ಕಾರದ ಯಂತ್ರವನ್ನು ನೋಡಬಹುದಾಗಿದೆ. ಈ ಕ್ಷ-ಕಿರಣ ಯಂತ್ರವು ಎಲುಬುಗಳ ಸೂಕ್ಷ್ಮತಿಸೂಕ್ಷ್ಮ ಬಿರುಕುಗಳನ್ನು ಕೂಡ ಗುರುತಿಸುವ ಸಾಮರ್ಥ್ಯ ಹೊಂದಿದ್ದು, ಅವಶ್ಯಕತೆ ಇರುವ ರೋಗಿಗಳ ಚಿಕಿತ್ಸೆಗೆ ತುಂಬಾ ಅನುಕೂಲವಾಗುತ್ತದೆಂದು ಡಾ.ಕಾಮತ್ ರವರು ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಉಜಿರೆಯಂತ ಹಳ್ಳಿಯ ಈ ಆಸ್ಪತ್ರೆಯಲ್ಲಿ ಇಂತಹ ನೂತನ ಆವಿಷ್ಕಾರದ ಯಂತ್ರವನ್ನು ಅಳವಡಿಸಿದ್ದಕ್ಕಾಗಿ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಗೋಪಾಲಕೃಷ್ಣ ರವರನ್ನು ಅಭಿನಂದಿಸಿದರು.
ಡಾ. ಭಾರತೀಯವರು ಹೂಗುಚ್ಛ ನೀಡಿ ಡಾ.ಕಾಮತ್ ರವರನ್ನು ಸ್ವಾಗತಿಸಿದರು. ಡಾ.ಗೋಪಾಲಕೃಷ್ಣರವರು ನೆನಪಿನ ಕಾಣಿಕೆಯನ್ನು ನೀಡುವ ಮೂಲಕ ಡಾ.ಕಾಮತ್ ರವರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಬೆನಕ ಆಸ್ಪತ್ರೆಯ ಎಲುಬು, ಕೀಲು ತಜ್ಞರಾದ ಡಾ.ರಜತ್ ಹೆಚ್.ಪಿ ಮತ್ತು ಸ್ತ್ತ್ರೀರೋಗ ತಜ್ಞರಾದ ಡಾ. ಅಂಕಿತ ಜಿ.ಭಟ್ ರವರು ಉಪಸ್ಥಿತರಿದ್ದರು. ಆಸ್ಪತ್ರೆಯ ಸಿಬ್ಬಂದಿ ವರ್ಗದವರು, ರೋಗಿಗಳು, ಅವರ ಸಂಬಂಧಿಕರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಇದೇ ಸಂದರ್ಭದಲ್ಲಿB.P.L ಕಂಪನಿಯ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಮಾ.27ರಿಂದ ಎ.1: ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಜಾತ್ರೋತ್ಸವ

Suddi Udaya

ಗುರುವಾಯನಕೆರೆ: ವಿದ್ವತ್ ಕ್ಲಾಸ್ ಕನೆಕ್ಟ್ ಉದ್ಘಾಟನೆ ಹಾಗೂ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ವಿ.ಹಿ.ಪ ಬಜರಂಗದಳ ಕಳೆಂಜ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya

“ಕಲಾ -ಸಂಭ್ರಮ 2024” ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಅಳದಂಗಡಿ ಸರಕಾರಿ ಪ್ರೌಢ ಶಾಲೆಗೆ ಪ್ರಶಸ್ತಿ

Suddi Udaya

ಕೊಕ್ಕಡ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಬೇಬಿ, ಉಪಾಧ್ಯಕ್ಷರಾಗಿ ಪ್ರಭಾಕರ್ ಮಲ್ಲಿಗೆ ಮಜಲು ಆಯ್ಕೆ

Suddi Udaya

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!