22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿವರದಿ

ದ.ಕ ಜಿಲ್ಲಾ ಕಸಾಪ ವತಿಯಿಂದ ನಾಲ್ವರು ಹಿರಿಯ ಸಾಹಿತಿಗಳ ಭೇಟಿ, ಯೋಗಕ್ಷೇಮ ವಿಚಾರಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ವತಿಯಿಂದ ನಾಲ್ವರು ಹಿರಿಯ ಸಾಹಿತಿಗಳನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿ ಪುರಸ್ಕರಿಸಲಾಯಿತು.

ದ.ಕ ಜಿಲ್ಲಾ ಕಸಾಪ ಅಧ್ಯಕ್ಷರಾದ ಡಾ.ಎಂಪಿ ಶ್ರೀನಾಥ ಅವರ ನೇತೃತ್ವದ ತಂಡ ಗುರುವಾರ ಮಂಗಳೂರು ಪರಿಸರದ ಹಿರಿಯ ಸಾಹಿತಿಗಳಾದ ಪ್ರೊ. ಕೆ. ಟಿ ಗಟ್ಟಿ, ಡಾ. ವಾಮನ ನಂದಾವರ, ಸದಾನಂದ ಸುವರ್ಣ, ಕೇಶವ ಕುಡ್ಲ ಅವರನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿತು. ಜಿಲ್ಲಾ ಕ.ಸಾ.ಪ ಸಂಘಟನಾ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ, ಜಿಲ್ಲಾ ಸಂಘಟನಾ ಸಹ ಕಾರ್ಯದರ್ಶಿ ಕಿರಣಪ್ರಸಾದ್ ರೈ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ವಿನಯ ಆಚಾರ್ಯ, ಮಂಗಳೂರು ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ. ಮಂಜುನಾಥ್‌ ರೇವಣ್ಕರ್,ಎಂಪಿ ಸಾಕೇತ್ ರಾವ್ ಮುಂತಾದವರು ಜಿಲ್ಲಾ ಕಸಾಪ ತಂಡದಲ್ಲಿದ್ದರು.


ಕಾದಂಬರಿಕಾರ ಕೆ.ಟಿ ಗಟ್ಟಿ ಅವರು, ಸಾಹಿತ್ಯದ ವಿಚಾರಗಳನ್ನು ಚರ್ಚಿಸಿದರು. ಸಾಹಿತ್ಯಲೋಕದ ಇತ್ತೀಚಿನ ಬೆಳವಣಿಗೆಗಳನ್ನು ಕೇಳಿ ತಿಳಿದುಕೊಂಡರು. ಹಿರಿಯ ಸಾಹಿತಿ ಕೇಶವ ಕುಡ್ಲ ಅವರ ಮನೆಗೆ ತೆರಳಿದ ಜಿಲ್ಲಾ ಕಸಾಪ ಅಧ್ಯಕ್ಷರ ತಂಡ ಯೋಗಕ್ಷೇಮ ವಿಚಾರಿಸಿದರು. ಕೆಶವ ಕುಡ್ಲ ಅವರು ತಮ್ಮ ಸಾಹಿತ್ಯದ ಅನುಭವಗಳನ್ನು ಹಂಚಿಕೊಂಡರು. ತಮ್ಮನ್ನು ಭೇಟಿ ಮಾಡಿದ ಬಗ್ಗೆ ಸಂತಸ ವ್ಯಕ್ತಪಡಿಸಿದರು.

ಡಾ. ವಾಮನ ನಂದಾವರ ಮತ್ತು ಪ್ರೊ. ಚಂದ್ರಕಲಾ ನಂದಾವರ ದಂಪತಿಗಳನ್ನೂ ಭೇಟಿ ಮಾಡಿ ಕುಶಲ ವಿಚಾರಿಸಲಾಯಿತು. ಹಿರಿಯ ರಂಗಕರ್ಮಿ, ಚಿತ್ರ ನಿರ್ದೇಶಕ ಸದಾನಂದ ಸುವರ್ಣ ಅವರು ಬದುಕಿನ ಸುಂದರ ಕ್ಷಣಗಳನ್ನು ಮೆಲುಕು ಹಾಕಿ ನಾಟಕದ ಆ ದಿನಗಳನ್ನು ನೆನಪಿಸಿಕೊಂಡರು .ಡಾ.ಎಂ.ಪಿ ಶ್ರೀನಾಥ ಅವರು ಹಾರ-ಶಾಲು ತೊಡಿಸಿ ಗೌರವ ಸಲ್ಲಿಸಿದರು.

Related posts

ತಣ್ಣೀರುಪಂತ: ಕುದ್ರಡ್ಕದಲ್ಲಿ ಮೂವರು ಮಕ್ಕಳಿಗೆ ಹಾವು ಕಡಿತ

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya

ಶಿರ್ಲಾಲು ಅನ್ನಪೂರ್ಣೇಶ್ವರಿ ಸ್ವಸಹಾಯ ಸಂಘದ ರಜತ ಮಹೋತ್ಸವ

Suddi Udaya

ಮಚ್ಚಿನ: ಕುತ್ತಿನ ಸರಕಾರಿ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕುವೆಟ್ಟು, ಉಜಿರೆ, ಇಳಂತಿಲ ಗ್ರಾಪಂ 3 ಸದಸ್ಯ ಸ್ಥಾನಕ್ಕೆ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ 3 ಅಭ್ಯರ್ಥಿಗಳ ಜಯ

Suddi Udaya

ಬಿಜೆಪಿ ಮಂಡಲದ ವತಿಯಿಂದ ಲಾಯಿಲ ಶಕ್ತಿಕೇಂದ್ರದ ಕಾರ್ಯಕರ್ತರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya
error: Content is protected !!