24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿವರದಿ

ದ.ಕ ಜಿಲ್ಲಾ ಕಸಾಪ ವತಿಯಿಂದ ನಾಲ್ವರು ಹಿರಿಯ ಸಾಹಿತಿಗಳ ಭೇಟಿ, ಯೋಗಕ್ಷೇಮ ವಿಚಾರಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ವತಿಯಿಂದ ನಾಲ್ವರು ಹಿರಿಯ ಸಾಹಿತಿಗಳನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿ ಪುರಸ್ಕರಿಸಲಾಯಿತು.

ದ.ಕ ಜಿಲ್ಲಾ ಕಸಾಪ ಅಧ್ಯಕ್ಷರಾದ ಡಾ.ಎಂಪಿ ಶ್ರೀನಾಥ ಅವರ ನೇತೃತ್ವದ ತಂಡ ಗುರುವಾರ ಮಂಗಳೂರು ಪರಿಸರದ ಹಿರಿಯ ಸಾಹಿತಿಗಳಾದ ಪ್ರೊ. ಕೆ. ಟಿ ಗಟ್ಟಿ, ಡಾ. ವಾಮನ ನಂದಾವರ, ಸದಾನಂದ ಸುವರ್ಣ, ಕೇಶವ ಕುಡ್ಲ ಅವರನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿತು. ಜಿಲ್ಲಾ ಕ.ಸಾ.ಪ ಸಂಘಟನಾ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ, ಜಿಲ್ಲಾ ಸಂಘಟನಾ ಸಹ ಕಾರ್ಯದರ್ಶಿ ಕಿರಣಪ್ರಸಾದ್ ರೈ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ವಿನಯ ಆಚಾರ್ಯ, ಮಂಗಳೂರು ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ. ಮಂಜುನಾಥ್‌ ರೇವಣ್ಕರ್,ಎಂಪಿ ಸಾಕೇತ್ ರಾವ್ ಮುಂತಾದವರು ಜಿಲ್ಲಾ ಕಸಾಪ ತಂಡದಲ್ಲಿದ್ದರು.


ಕಾದಂಬರಿಕಾರ ಕೆ.ಟಿ ಗಟ್ಟಿ ಅವರು, ಸಾಹಿತ್ಯದ ವಿಚಾರಗಳನ್ನು ಚರ್ಚಿಸಿದರು. ಸಾಹಿತ್ಯಲೋಕದ ಇತ್ತೀಚಿನ ಬೆಳವಣಿಗೆಗಳನ್ನು ಕೇಳಿ ತಿಳಿದುಕೊಂಡರು. ಹಿರಿಯ ಸಾಹಿತಿ ಕೇಶವ ಕುಡ್ಲ ಅವರ ಮನೆಗೆ ತೆರಳಿದ ಜಿಲ್ಲಾ ಕಸಾಪ ಅಧ್ಯಕ್ಷರ ತಂಡ ಯೋಗಕ್ಷೇಮ ವಿಚಾರಿಸಿದರು. ಕೆಶವ ಕುಡ್ಲ ಅವರು ತಮ್ಮ ಸಾಹಿತ್ಯದ ಅನುಭವಗಳನ್ನು ಹಂಚಿಕೊಂಡರು. ತಮ್ಮನ್ನು ಭೇಟಿ ಮಾಡಿದ ಬಗ್ಗೆ ಸಂತಸ ವ್ಯಕ್ತಪಡಿಸಿದರು.

ಡಾ. ವಾಮನ ನಂದಾವರ ಮತ್ತು ಪ್ರೊ. ಚಂದ್ರಕಲಾ ನಂದಾವರ ದಂಪತಿಗಳನ್ನೂ ಭೇಟಿ ಮಾಡಿ ಕುಶಲ ವಿಚಾರಿಸಲಾಯಿತು. ಹಿರಿಯ ರಂಗಕರ್ಮಿ, ಚಿತ್ರ ನಿರ್ದೇಶಕ ಸದಾನಂದ ಸುವರ್ಣ ಅವರು ಬದುಕಿನ ಸುಂದರ ಕ್ಷಣಗಳನ್ನು ಮೆಲುಕು ಹಾಕಿ ನಾಟಕದ ಆ ದಿನಗಳನ್ನು ನೆನಪಿಸಿಕೊಂಡರು .ಡಾ.ಎಂ.ಪಿ ಶ್ರೀನಾಥ ಅವರು ಹಾರ-ಶಾಲು ತೊಡಿಸಿ ಗೌರವ ಸಲ್ಲಿಸಿದರು.

Related posts

ಶ್ರೀರಾಮ ಶಾಲೆ ಸುಲ್ಕೇರಿಯ ವಿದ್ಯಾರ್ಥಿನಿ ಕು.ನಿಷ್ಕಾ ಜೈನ್ ಕಥೆ ಹೇಳುವ ಸ್ಪರ್ಧೆಯಲ್ಲಿ ಪ್ರಥಮ

Suddi Udaya

ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya

ಬೆಳ್ತಂಗಡಿ ಮಾರಿಗುಡಿ ಬಳಿ ದುರ್ನಾತ ಬೀರುವ ಒಳ ಚರಂಡಿ

Suddi Udaya

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನ ಇಬ್ಬರು ಸೇರಿ ಜಿಲ್ಲೆಯ 11 ಮಂದಿ ಗಡಿಪಾರು

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಕಾರ್ಯತಂತ್ರ ಯೋಜನೆ ತರಬೇತಿ ಕಾರ್ಯಾಗಾರ

Suddi Udaya

ಬಿಜೆಪಿ ತೆಕ್ಕೆಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಬಿರುಸಿನ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ -9, ಕಾಂಗ್ರೇಸ್ -3 ಗೆಲುವು

Suddi Udaya
error: Content is protected !!