25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿವರದಿ

ದ.ಕ ಜಿಲ್ಲಾ ಕಸಾಪ ವತಿಯಿಂದ ನಾಲ್ವರು ಹಿರಿಯ ಸಾಹಿತಿಗಳ ಭೇಟಿ, ಯೋಗಕ್ಷೇಮ ವಿಚಾರಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ವತಿಯಿಂದ ನಾಲ್ವರು ಹಿರಿಯ ಸಾಹಿತಿಗಳನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿ ಪುರಸ್ಕರಿಸಲಾಯಿತು.

ದ.ಕ ಜಿಲ್ಲಾ ಕಸಾಪ ಅಧ್ಯಕ್ಷರಾದ ಡಾ.ಎಂಪಿ ಶ್ರೀನಾಥ ಅವರ ನೇತೃತ್ವದ ತಂಡ ಗುರುವಾರ ಮಂಗಳೂರು ಪರಿಸರದ ಹಿರಿಯ ಸಾಹಿತಿಗಳಾದ ಪ್ರೊ. ಕೆ. ಟಿ ಗಟ್ಟಿ, ಡಾ. ವಾಮನ ನಂದಾವರ, ಸದಾನಂದ ಸುವರ್ಣ, ಕೇಶವ ಕುಡ್ಲ ಅವರನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿತು. ಜಿಲ್ಲಾ ಕ.ಸಾ.ಪ ಸಂಘಟನಾ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ, ಜಿಲ್ಲಾ ಸಂಘಟನಾ ಸಹ ಕಾರ್ಯದರ್ಶಿ ಕಿರಣಪ್ರಸಾದ್ ರೈ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ವಿನಯ ಆಚಾರ್ಯ, ಮಂಗಳೂರು ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ. ಮಂಜುನಾಥ್‌ ರೇವಣ್ಕರ್,ಎಂಪಿ ಸಾಕೇತ್ ರಾವ್ ಮುಂತಾದವರು ಜಿಲ್ಲಾ ಕಸಾಪ ತಂಡದಲ್ಲಿದ್ದರು.


ಕಾದಂಬರಿಕಾರ ಕೆ.ಟಿ ಗಟ್ಟಿ ಅವರು, ಸಾಹಿತ್ಯದ ವಿಚಾರಗಳನ್ನು ಚರ್ಚಿಸಿದರು. ಸಾಹಿತ್ಯಲೋಕದ ಇತ್ತೀಚಿನ ಬೆಳವಣಿಗೆಗಳನ್ನು ಕೇಳಿ ತಿಳಿದುಕೊಂಡರು. ಹಿರಿಯ ಸಾಹಿತಿ ಕೇಶವ ಕುಡ್ಲ ಅವರ ಮನೆಗೆ ತೆರಳಿದ ಜಿಲ್ಲಾ ಕಸಾಪ ಅಧ್ಯಕ್ಷರ ತಂಡ ಯೋಗಕ್ಷೇಮ ವಿಚಾರಿಸಿದರು. ಕೆಶವ ಕುಡ್ಲ ಅವರು ತಮ್ಮ ಸಾಹಿತ್ಯದ ಅನುಭವಗಳನ್ನು ಹಂಚಿಕೊಂಡರು. ತಮ್ಮನ್ನು ಭೇಟಿ ಮಾಡಿದ ಬಗ್ಗೆ ಸಂತಸ ವ್ಯಕ್ತಪಡಿಸಿದರು.

ಡಾ. ವಾಮನ ನಂದಾವರ ಮತ್ತು ಪ್ರೊ. ಚಂದ್ರಕಲಾ ನಂದಾವರ ದಂಪತಿಗಳನ್ನೂ ಭೇಟಿ ಮಾಡಿ ಕುಶಲ ವಿಚಾರಿಸಲಾಯಿತು. ಹಿರಿಯ ರಂಗಕರ್ಮಿ, ಚಿತ್ರ ನಿರ್ದೇಶಕ ಸದಾನಂದ ಸುವರ್ಣ ಅವರು ಬದುಕಿನ ಸುಂದರ ಕ್ಷಣಗಳನ್ನು ಮೆಲುಕು ಹಾಕಿ ನಾಟಕದ ಆ ದಿನಗಳನ್ನು ನೆನಪಿಸಿಕೊಂಡರು .ಡಾ.ಎಂ.ಪಿ ಶ್ರೀನಾಥ ಅವರು ಹಾರ-ಶಾಲು ತೊಡಿಸಿ ಗೌರವ ಸಲ್ಲಿಸಿದರು.

Related posts

ಮೊಗ್ರು: ಶ್ರೀರಾಮ ಶಿಶು ಮಂದಿರದ ಪ್ರವೇಶೋತ್ಸವ ಮತ್ತು ಗಣಹೋಮ

Suddi Udaya

ಹತ್ಯಡ್ಕ: ಹೊಸ್ತೋಟ ನಿವಾಸಿ, ಯಕ್ಷಗಾನ ಕಲಾವಿದ ಅಂತರ ದಿನೇಶ್ ಭಟ್ ನಿಧನ

Suddi Udaya

ಅಂತರ್ ರಾಜ್ಯ ಖೋ ಖೋ ಪಂದ್ಯಾಟ: ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ನಯನಾಡು ಸ.ಪ್ರೌ. ಶಾಲೆ ವಿದ್ಯಾರ್ಥಿಗಳು

Suddi Udaya

ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮೇಲಂತಬೆಟ್ಟು: ದ.ಕ ಜಿಲ್ಲಾ ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನ

Suddi Udaya

ಸಹಕಾರಿ ಸಪ್ತಾಹದಲ್ಲಿ ಸವಣಾಲು ಹಾ.ಉ. ಸ. ಸಂಘದ ಸದಸ್ಯ ಲೋಕೇಶ್ ಗೌಡ ರಿಗೆ “ಕ್ಷೀರ ರತ್ನ” ಪ್ರಶಸ್ತಿ

Suddi Udaya
error: Content is protected !!