25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿನಿಧನ

ಪುಂಜಾಲಕಟ್ಟೆ ಯುವಕ ಸೈನೇಡ್ ಸೇವಿಸಿ ಆತ್ಮಹತ್ಯೆ

ಪುಂಜಾಲಕಟ್ಟೆ: ಯುವಕನೋರ್ವ ಸೈನೇಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆಯಲ್ಲಿ ಜು.13 ರಂದು ಸಂಭವಿಸಿದೆ.

ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ನಿವಾಸಿ ಗಣೇಶ ಆಚಾರ್ಯ ರವರ ಪುತ್ರ ರೂಪೇಶ್ ಆಚಾರ್ಯ(31ವ.)ರವರು ಮೃತಪಟ್ಟ ವ್ಯಕ್ತಿ.


ಸ್ವರ್ಣ ಕುಸುರಿ ಕೆಲಸಗಾರರಾಗಿದ್ದ ರೂಪೇಶ್ ಅವರು ಸ್ಥಳೀಯ ಸಂಸ್ಥೆಯಲ್ಲಿ ನೌಕರರಾಗಿದ್ದು, ಇತ್ತೀಚೆಗೆ ಕೆಲಸ ಬಿಟ್ಟಿದ್ದರು. ಮದ್ಯವ್ಯಸನಿಯಾಗಿದ್ದ ಅವರು ಗುರುವಾರ ಮಧ್ಯಾಹ್ನ ತನ್ನ ಕೊಠಡಿಯಲ್ಲಿ ಸೈನೇಡ್ ಸೇವಿಸಿದ್ದರು. ಇದನ್ನು ಗಮನಿಸಿದ ಮನೆ ಮಂದಿ ಕೂಡಲೇ ಅಂಬ್ಯುಲೆನ್ಸ್ ಮೂಲಕ ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಿದರಾದರೂ ಅಲ್ಲಿ ಅವರು ಮೃತಪಟ್ಟಿದ್ದರು.

ಗಣೇಶ್ ಅವರ ಮೂವರು ಮಕ್ಕಳಲ್ಲಿ ಹಿರಿಯವನಾಗಿದ್ದ ರೂಪೇಶ್ ವಿವಾಹಿತನಾಗಿದ್ದು, ಪತ್ನಿ, ಪುಟ್ಟ ಮಗುವನ್ನು ಅಗಲಿದ್ದಾರೆ.

Related posts

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಸೋಮಶೇಖರ ರವರಿಗೆ ಚಿಕಿತ್ಸಾ ನೆರವು

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ವೇಣೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಖಂಡಿಗ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ ಸ್ಪರ್ಧೆಗಳು

Suddi Udaya

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ

Suddi Udaya

ಉಜಿರೆ ಯುವ ವಾಹಿನಿ ಸಂಚಲನಾ ಸಮಿತಿ ಮತ್ತು ಶ್ರೀ ಗುರುನಾರಾಯಣ ಸೇವಾ ಸಂಘದ ಆಶ್ರಯದಲ್ಲಿ ಗುರುಪೂಜೆ

Suddi Udaya
error: Content is protected !!