22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿನಿಧನ

ಪುಂಜಾಲಕಟ್ಟೆ ಯುವಕ ಸೈನೇಡ್ ಸೇವಿಸಿ ಆತ್ಮಹತ್ಯೆ

ಪುಂಜಾಲಕಟ್ಟೆ: ಯುವಕನೋರ್ವ ಸೈನೇಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆಯಲ್ಲಿ ಜು.13 ರಂದು ಸಂಭವಿಸಿದೆ.

ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ನಿವಾಸಿ ಗಣೇಶ ಆಚಾರ್ಯ ರವರ ಪುತ್ರ ರೂಪೇಶ್ ಆಚಾರ್ಯ(31ವ.)ರವರು ಮೃತಪಟ್ಟ ವ್ಯಕ್ತಿ.


ಸ್ವರ್ಣ ಕುಸುರಿ ಕೆಲಸಗಾರರಾಗಿದ್ದ ರೂಪೇಶ್ ಅವರು ಸ್ಥಳೀಯ ಸಂಸ್ಥೆಯಲ್ಲಿ ನೌಕರರಾಗಿದ್ದು, ಇತ್ತೀಚೆಗೆ ಕೆಲಸ ಬಿಟ್ಟಿದ್ದರು. ಮದ್ಯವ್ಯಸನಿಯಾಗಿದ್ದ ಅವರು ಗುರುವಾರ ಮಧ್ಯಾಹ್ನ ತನ್ನ ಕೊಠಡಿಯಲ್ಲಿ ಸೈನೇಡ್ ಸೇವಿಸಿದ್ದರು. ಇದನ್ನು ಗಮನಿಸಿದ ಮನೆ ಮಂದಿ ಕೂಡಲೇ ಅಂಬ್ಯುಲೆನ್ಸ್ ಮೂಲಕ ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಿದರಾದರೂ ಅಲ್ಲಿ ಅವರು ಮೃತಪಟ್ಟಿದ್ದರು.

ಗಣೇಶ್ ಅವರ ಮೂವರು ಮಕ್ಕಳಲ್ಲಿ ಹಿರಿಯವನಾಗಿದ್ದ ರೂಪೇಶ್ ವಿವಾಹಿತನಾಗಿದ್ದು, ಪತ್ನಿ, ಪುಟ್ಟ ಮಗುವನ್ನು ಅಗಲಿದ್ದಾರೆ.

Related posts

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

Suddi Udaya

ಕಲ್ಮಂಜ : ಶ್ರೀ ಬದಿನಡೆ ಕ್ಷೇತ್ರದಲ್ಲಿ ವೀರ ಯೋಧರ ರಕ್ಷಣೆಗಾಗಿ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ಉಜಿರೆಯಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ

Suddi Udaya

ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ಕೆನರಾ ಬ್ಯಾಂಕಿನ ಎಟಿಎಂ ಉದ್ಘಾಟನೆ

Suddi Udaya

ಬೆಳ್ತಂಗಡಿ ರಾಜ ಕೇಸರಿ ಟ್ರಸ್ಟ್ ವತಿಯಿಂದ 563 ನೇ ಸೇವಾ ಯೋಜನೆ ಅಂಗವಾಗಿ 3 ಸರಕಾರಿ ಶಾಲೆಗಳಿಗೆ ಬ್ಯಾಗ್ ಮತ್ತು ಪುಸ್ತಕ ವಿತರಣೆ

Suddi Udaya

ಚಾರ್ಮಾಡಿ ಘಾಟಿ ಅರಣ್ಯದಲ್ಲಿ ಬೆಂಕಿ

Suddi Udaya
error: Content is protected !!