April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೋಟರಿ ಮಂಗಳೂರು ಪೂರ್ವದ ಅಧ್ಯಕ್ಷರಾಗಿ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು ಆಯ್ಕೆ

ಮಂಗಳೂರು : ರೋಟರಿ ಮಂಗಳೂರು ಪೂರ್ವ ಇದರ 2023-24 ರ ಸಾಲಿನ‌ ನೂತನ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಇತ್ತೀಚೆಗೆ ನಗರದ ಮೋತಿಮಹಲ್ ಹೋಟೆಲಿನ ಸಭಾ ಭವನದಲ್ಲಿ ಜರುಗಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ರೋಟರಿ ಜಿಲ್ಲೆ 3181 ರ 2025-26ರ ಸಾಲಿನ ನಿಯೋಜಿತ ಜಿಲ್ಲಾ ಗವರ್ನರ್ ರಾಮಕೃಷ್ಣರವರು ಪದಗ್ರಹಣ ನೆರವೇರಿಸಿದರು.

ಮುಂಡಾಡಿಗುತ್ತು ಜಯರಾಮ‌ ಶೆಟ್ಟಿ ಅಧ್ಯಕ್ಷರಾಗಿಯೂ, ಮಾಜಿ ಸಹಾಯ ಗವರ್ನರ್ ಸದಾಶಿವ ಶೆಟ್ಟಿಯವರು ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದರು. ನಿರ್ಗಮನ ಅಧ್ಯಕ್ಷ ಸಿ.ಎ ಹರೀಶ್ ಶೆಟ್ಟಿಯವರು ಸ್ವಾಗತಿಸಿ ಕಳೆದ ವರ್ಷ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು. ನಿರ್ಗಮನ ಕಾರ್ಯದರ್ಶಿ ಜೋಯಲ್ ಸಲ್ದಾನ ಗತ ವರ್ಷದ ವರದಿ ಮಂಡಿಸಿದರು.

ಜಿಲ್ಲಾ ಸಹ ತರಬೇತುದಾರ ಶೇಖರ ಶೆಟ್ಟಿ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಡಾ. ವಸಂತ ಶೆಟ್ಟಿ ನೂತನ ಸದಸ್ಯರನ್ನು ಪರಿಚಯಿಸಿದರು.‌ ಕ್ಲಬ್ ವತಿಯಿಂದ ಅತ್ತಾವರ ಸರಕಾರಿ ಶಾಲಾ ಮಕ್ಕಳಿಗೆ ಸಮವಸ್ತ್ರ ಕೊಡುಗೆ ನೀಡಲಾಯಿತು.


ವೇದಿಕೆಯಲ್ಲಿ ಸಹಾಯಕ ಗವರ್ನರ್ ವಿನೋದ ಕುಡ್ವ, ವಲಯ ಸೇನಾನಿ ಪ್ರಕಾಶ್, ‌ವಿನ್ಸೆಂಟ್ ನಜರೆತ್ ಮತ್ತು ಗೋಪಾಲ ಶೆಟ್ಟಿ ಉಪಸ್ಥಿತರಿದ್ದು ಸೂಕ್ತ ಮಾರ್ಗದರ್ಶನ ನೀಡಿದರು. ಕ್ಲಬ್ ನ ನೂತನ ಕಾರ್ಯದರ್ಶಿ ಸದಾಶಿವ ಶೆಟ್ಟಿ ಧನ್ಯವಾದ ಸಲ್ಲಿಸಿದರು.

Related posts

ಬೆಳ್ತಂಗಡಿ ವಿವಿಧ ಮಹಿಳಾ ಮಂಡಲಗಳ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ, ಮಹಿಳಾ ವಾಹನ ಜಾಥಾ ಕಾರ್ಯಕ್ರಮ

Suddi Udaya

ಇಂದಬೆಟ್ಟು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಆನಂದ ಅಡಿಲು ರವರ ಮನೆಗೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ನೈಜ್ಯ ಆರೋಪಿಗಳ ಪತ್ತೆಯಾಗಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಸುಲ್ಕೇರಿ ಗ್ರಾ.ಪಂ. ಸಹಭಾಗಿತ್ವದಲ್ಲಿ ಚೈತನ್ಯ ಹಾಳೆ ತಟ್ಟೆ ಉತ್ಪಾದನೆಯ ಉದ್ಘಾಟನೆ

Suddi Udaya

ಶಾಸಕ ಹರೀಶ್ ಪೂಂಜರ ವಿರುದ್ಧ ಪ್ರಕರಣ: ಎರಡೂ ಕೇಸುಗಳ ಬಗ್ಗೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

Suddi Udaya

ಅರಸಿನಮಕ್ಕಿ: “ಶ್ರೀನಿಧಿ ಜನಸೇವಾ ಕೇಂದ್ರ”ದಲ್ಲಿ ಬ್ಯಾಂಕ್ ಆಫ್ ಬರೋಡಾದ ವ್ಯವಹಾರ ಸೌಲಭ್ಯ ಉದ್ಘಾಟನೆ

Suddi Udaya
error: Content is protected !!