July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೋಟರಿ ಮಂಗಳೂರು ಪೂರ್ವದ ಅಧ್ಯಕ್ಷರಾಗಿ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು ಆಯ್ಕೆ

ಮಂಗಳೂರು : ರೋಟರಿ ಮಂಗಳೂರು ಪೂರ್ವ ಇದರ 2023-24 ರ ಸಾಲಿನ‌ ನೂತನ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಇತ್ತೀಚೆಗೆ ನಗರದ ಮೋತಿಮಹಲ್ ಹೋಟೆಲಿನ ಸಭಾ ಭವನದಲ್ಲಿ ಜರುಗಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ರೋಟರಿ ಜಿಲ್ಲೆ 3181 ರ 2025-26ರ ಸಾಲಿನ ನಿಯೋಜಿತ ಜಿಲ್ಲಾ ಗವರ್ನರ್ ರಾಮಕೃಷ್ಣರವರು ಪದಗ್ರಹಣ ನೆರವೇರಿಸಿದರು.

ಮುಂಡಾಡಿಗುತ್ತು ಜಯರಾಮ‌ ಶೆಟ್ಟಿ ಅಧ್ಯಕ್ಷರಾಗಿಯೂ, ಮಾಜಿ ಸಹಾಯ ಗವರ್ನರ್ ಸದಾಶಿವ ಶೆಟ್ಟಿಯವರು ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದರು. ನಿರ್ಗಮನ ಅಧ್ಯಕ್ಷ ಸಿ.ಎ ಹರೀಶ್ ಶೆಟ್ಟಿಯವರು ಸ್ವಾಗತಿಸಿ ಕಳೆದ ವರ್ಷ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು. ನಿರ್ಗಮನ ಕಾರ್ಯದರ್ಶಿ ಜೋಯಲ್ ಸಲ್ದಾನ ಗತ ವರ್ಷದ ವರದಿ ಮಂಡಿಸಿದರು.

ಜಿಲ್ಲಾ ಸಹ ತರಬೇತುದಾರ ಶೇಖರ ಶೆಟ್ಟಿ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಡಾ. ವಸಂತ ಶೆಟ್ಟಿ ನೂತನ ಸದಸ್ಯರನ್ನು ಪರಿಚಯಿಸಿದರು.‌ ಕ್ಲಬ್ ವತಿಯಿಂದ ಅತ್ತಾವರ ಸರಕಾರಿ ಶಾಲಾ ಮಕ್ಕಳಿಗೆ ಸಮವಸ್ತ್ರ ಕೊಡುಗೆ ನೀಡಲಾಯಿತು.


ವೇದಿಕೆಯಲ್ಲಿ ಸಹಾಯಕ ಗವರ್ನರ್ ವಿನೋದ ಕುಡ್ವ, ವಲಯ ಸೇನಾನಿ ಪ್ರಕಾಶ್, ‌ವಿನ್ಸೆಂಟ್ ನಜರೆತ್ ಮತ್ತು ಗೋಪಾಲ ಶೆಟ್ಟಿ ಉಪಸ್ಥಿತರಿದ್ದು ಸೂಕ್ತ ಮಾರ್ಗದರ್ಶನ ನೀಡಿದರು. ಕ್ಲಬ್ ನ ನೂತನ ಕಾರ್ಯದರ್ಶಿ ಸದಾಶಿವ ಶೆಟ್ಟಿ ಧನ್ಯವಾದ ಸಲ್ಲಿಸಿದರು.

Related posts

ನೇತಾಜಿ ಸುಭಾಶ್ ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಮುಗುಳಿ ಶಾಲೆಗೆ ಆವರಣ ಗೋಡೆ ನಿರ್ಮಿಸುವ ಮತ್ತು ಭದ್ರತಾ ಸಿಬ್ಬಂದಿ ನೇಮಕ ಮಾಡುವಂತೆ ಜಿಲ್ಲಾ ಕೆ.ಡಿ.ಪಿ ಸದಸ್ಯ ಸಂತೋಷ್ ಕುಮಾರ್ ರಿಂದ ಜಿಲ್ಲಾಧಿಕಾರಿಗೆ ಮನವಿ

Suddi Udaya

ಶಕ್ತಿ ಯೋಜನೆಯ ಯಶಸ್ವಿಗಾಗಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ

Suddi Udaya

ಪೆರಾಡಿ : ಪಾಡಿ ನಿವಾಸಿ ವಸಂತ್ ಪೂಜಾರಿ ನಿಧನ

Suddi Udaya

ರಾಜ್ಯದಲ್ಲಿ ಸಿವಿಲ್ ಸರ್ವಿಸ್ ಬೋರ್ಡ್ ರಚನೆಯ ಕುರಿತು ಸದನದಲ್ಲಿ ಪ್ರಶ್ನಿಸಿದ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya

ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಜಯಪ್ರಸಾದ್ ಶೆಟ್ಟಿಗಾರ್ ಆಯ್ಕೆ

Suddi Udaya

ಮಿತ್ತಬಾಗಿಲು: ಎರ್ಮಾಳ್ ಪಲ್ಕೆಯಲ್ಲಿ ಮಗುಚಿಬಿದ್ದ ಹಾಲಿನ ಟ್ಯಾಂಕರ್

Suddi Udaya
error: Content is protected !!