25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೋಟರಿ ಮಂಗಳೂರು ಪೂರ್ವದ ಅಧ್ಯಕ್ಷರಾಗಿ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು ಆಯ್ಕೆ

ಮಂಗಳೂರು : ರೋಟರಿ ಮಂಗಳೂರು ಪೂರ್ವ ಇದರ 2023-24 ರ ಸಾಲಿನ‌ ನೂತನ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಇತ್ತೀಚೆಗೆ ನಗರದ ಮೋತಿಮಹಲ್ ಹೋಟೆಲಿನ ಸಭಾ ಭವನದಲ್ಲಿ ಜರುಗಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ರೋಟರಿ ಜಿಲ್ಲೆ 3181 ರ 2025-26ರ ಸಾಲಿನ ನಿಯೋಜಿತ ಜಿಲ್ಲಾ ಗವರ್ನರ್ ರಾಮಕೃಷ್ಣರವರು ಪದಗ್ರಹಣ ನೆರವೇರಿಸಿದರು.

ಮುಂಡಾಡಿಗುತ್ತು ಜಯರಾಮ‌ ಶೆಟ್ಟಿ ಅಧ್ಯಕ್ಷರಾಗಿಯೂ, ಮಾಜಿ ಸಹಾಯ ಗವರ್ನರ್ ಸದಾಶಿವ ಶೆಟ್ಟಿಯವರು ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದರು. ನಿರ್ಗಮನ ಅಧ್ಯಕ್ಷ ಸಿ.ಎ ಹರೀಶ್ ಶೆಟ್ಟಿಯವರು ಸ್ವಾಗತಿಸಿ ಕಳೆದ ವರ್ಷ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು. ನಿರ್ಗಮನ ಕಾರ್ಯದರ್ಶಿ ಜೋಯಲ್ ಸಲ್ದಾನ ಗತ ವರ್ಷದ ವರದಿ ಮಂಡಿಸಿದರು.

ಜಿಲ್ಲಾ ಸಹ ತರಬೇತುದಾರ ಶೇಖರ ಶೆಟ್ಟಿ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಡಾ. ವಸಂತ ಶೆಟ್ಟಿ ನೂತನ ಸದಸ್ಯರನ್ನು ಪರಿಚಯಿಸಿದರು.‌ ಕ್ಲಬ್ ವತಿಯಿಂದ ಅತ್ತಾವರ ಸರಕಾರಿ ಶಾಲಾ ಮಕ್ಕಳಿಗೆ ಸಮವಸ್ತ್ರ ಕೊಡುಗೆ ನೀಡಲಾಯಿತು.


ವೇದಿಕೆಯಲ್ಲಿ ಸಹಾಯಕ ಗವರ್ನರ್ ವಿನೋದ ಕುಡ್ವ, ವಲಯ ಸೇನಾನಿ ಪ್ರಕಾಶ್, ‌ವಿನ್ಸೆಂಟ್ ನಜರೆತ್ ಮತ್ತು ಗೋಪಾಲ ಶೆಟ್ಟಿ ಉಪಸ್ಥಿತರಿದ್ದು ಸೂಕ್ತ ಮಾರ್ಗದರ್ಶನ ನೀಡಿದರು. ಕ್ಲಬ್ ನ ನೂತನ ಕಾರ್ಯದರ್ಶಿ ಸದಾಶಿವ ಶೆಟ್ಟಿ ಧನ್ಯವಾದ ಸಲ್ಲಿಸಿದರು.

Related posts

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ : ನಡ ಸ. ಪ. ಪೂ ಕಾಲೇಜಿನ ವಿದ್ಯಾರ್ಥಿನಿ ಕು. ಸವಿತಾ ದ್ವಿತೀಯ ಸ್ಥಾನ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರಾಮಹೋತ್ಸವ: ಧಾರ್ಮಿಕ ಸಭೆ

Suddi Udaya

ಗೇರುಕಟ್ಟೆ ಉಪಪ್ರಾಂಶುಪಾಲರಾಗಿ ನಿವೃತ್ತಿಗೊಂಡ ಈಶ್ವರಿ ಕೆ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಲ್ಮಂಜ : ಸ್ತ್ರೀ ಶಕ್ತಿ ಸರ್ವ ಸದಸ್ಯರ ಸಭೆ

Suddi Udaya

ಹೈದರಾಬಾದಿನಲ್ಲಿ ನಡೆದ ವಿದ್ಯಾ ಭಾರತೀಯ ಕ್ಷೇತ್ರಿಯ ಮಟ್ಟದ ಎತ್ತರ ಜಿಗಿತ ಸ್ಪರ್ಧೆ: ಸುಶಾಂತ್ ಎಸ್ ಪೂಜಾರಿ ಕುದ್ಯಾಡಿ ಪ್ರಥಮ‌ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!