April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ವೈದ್ಯರ ನಿರ್ಲಕ್ಷ್ಯಕ್ಕೆ ವೇಣೂರಿನ ಗರ್ಭಿಣಿ ಮಹಿಳೆ ಕೋಮಸ್ಥಿತಿಯಲ್ಲಿ

ವೇಣೂರು: ಮಂಗಳೂರಿನ ಪ್ರತಿಷ್ಠಿತವೆಂದು ಕರೆಸಿಕೊಳ್ಳುವ ಖಾಸಗಿ  ಆಸ್ಪತ್ರೆಗೆ ಹೆರಿಗೆಗೆಂದು ದಾಖಲಾದ  ಗರ್ಭಿಣಿ ಹೆಣ್ಣುಮಗಳೊಬ್ಬಳು ಆಸ್ಪತ್ರೆಯ ಬೇಜವಾಬ್ದಾರಿ ಮತ್ತು ವೈದ್ಯರ ನಿರ್ಲಕ್ಷಕ್ಕೆ ಬಲಿಯಾಗಿದ್ದಾರೆ. ಹೆರಿಗೆಗಾಗಿ ನಡೆದ ಶಸ್ತ್ರಚಿಕಿತ್ಸೆಯಿಂದಾದ ಎಡವಟ್ಟಿಗೆ ಗರ್ಭಕೋಶವನ್ನು ಕಳೆದುಕೊಂಡಿದ್ದಲ್ಲದೆ ಮೆದುಳು ನಿಷ್ಕ್ರಿಯಗೊಂಡು ಕೋಮಕ್ಕೆ ತೆರಳಿದ್ದಾರೆ.
ವೇಣೂರಿನ ಗೋಳಿಯಂಗಡಿಯ ನಿವಾಸಿ ಶಿಲ್ಪಾ ಎನ್ನುವ ಗರ್ಭಿಣಿ ಹೆಣ್ಣುಮಗಳೊಬ್ಬಳು ತನ್ನ ಎರಡನೇ ಮಗುವಿನ ಹೆರಿಗೆಗಾಗಿ ಜು.2 ರಂದು ಮಂಗಳೂರಿನ ಪ್ರತಿಷ್ಠಿತ  ಆಸ್ಪತ್ರೆಗೆ ದಾಖಲಾಗುತ್ತಾರೆ. ಹೆರಿಗೆಗೆ ಮೊದಲು ಕಳೆದ ಒಂಬತ್ತು ತಿಂಗಳು ಎಲ್ಲಾ ರೀತಿಯ ವೈದ್ಯಕೀಯ ಪರೀಕ್ಷೆಗಳನ್ನು ಅಲ್ಲೇ ನಡೆಸಿರುತ್ತಾರೆ. ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬದಲ್ಲಿ ಉಚಿತ ಚಿಕಿತ್ಸೆ ಸಿಗುತ್ತದೆಂಬ ಕಾರಣಕ್ಕೆ  ಆಸ್ಪತ್ರೆಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಆರೋಗ್ಯವಂತ ಮಹಿಳೆಗಾದ ಅನ್ಯಾಯಕ್ಕೆ ಯಾರು ಹೊಣೆ ?ಎಡವಟ್ಟಾದ ಚಿಕಿತ್ಸೆಯಿಂದ ಜೀವವನ್ನೇ ಕಳೆದುಕೊಂಡ ಮಹಿಳೆಯ  ಕುಟುಂಬಕ್ಕಾದ  ಅನ್ಯಾಯಕ್ಕೆ ಹೊಣೆಯಾರು?

Related posts

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ವಿಧಿವಶ

Suddi Udaya

ವಿಶ್ವ ಜಾಂಬೂರಿಗೆ ಎಕ್ಸೆಲ್ ನ ವಿದ್ಯಾರ್ಥಿಗಳು ಆಯ್ಕೆ

Suddi Udaya

ರಾಷ್ಟ್ರಮಟ್ಟದ ನೃತ್ಯೋತ್ಸವ: ಧರಿತ್ರಿ ಭಿಡೆ ದ್ವಿತೀಯ

Suddi Udaya

ಮಡಂತ್ಯಾರು: ಬಿದ್ದ ಪರ್ಸ್ ಹಿಂದುರುಗಿಸಿ ಕೊಟ್ಟು ಮಾನವೀಯತೆ ಮೆರೆದ ಆಟೋ ಚಾಲಕ ಇರ್ಷಾದ್

Suddi Udaya

ಶಿಬಾಜೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಬಿಜೆಪಿ ಮಂಡಲ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಭೇಟಿ

Suddi Udaya

ಕೃಷಿಕ ಹಾಕೋಟೆ ಗಂಗಯ್ಯ ಗೌಡ ನಿಧನ

Suddi Udaya
error: Content is protected !!