September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ವೈದ್ಯರ ನಿರ್ಲಕ್ಷ್ಯಕ್ಕೆ ವೇಣೂರಿನ ಗರ್ಭಿಣಿ ಮಹಿಳೆ ಕೋಮಸ್ಥಿತಿಯಲ್ಲಿ

ವೇಣೂರು: ಮಂಗಳೂರಿನ ಪ್ರತಿಷ್ಠಿತವೆಂದು ಕರೆಸಿಕೊಳ್ಳುವ ಖಾಸಗಿ  ಆಸ್ಪತ್ರೆಗೆ ಹೆರಿಗೆಗೆಂದು ದಾಖಲಾದ  ಗರ್ಭಿಣಿ ಹೆಣ್ಣುಮಗಳೊಬ್ಬಳು ಆಸ್ಪತ್ರೆಯ ಬೇಜವಾಬ್ದಾರಿ ಮತ್ತು ವೈದ್ಯರ ನಿರ್ಲಕ್ಷಕ್ಕೆ ಬಲಿಯಾಗಿದ್ದಾರೆ. ಹೆರಿಗೆಗಾಗಿ ನಡೆದ ಶಸ್ತ್ರಚಿಕಿತ್ಸೆಯಿಂದಾದ ಎಡವಟ್ಟಿಗೆ ಗರ್ಭಕೋಶವನ್ನು ಕಳೆದುಕೊಂಡಿದ್ದಲ್ಲದೆ ಮೆದುಳು ನಿಷ್ಕ್ರಿಯಗೊಂಡು ಕೋಮಕ್ಕೆ ತೆರಳಿದ್ದಾರೆ.
ವೇಣೂರಿನ ಗೋಳಿಯಂಗಡಿಯ ನಿವಾಸಿ ಶಿಲ್ಪಾ ಎನ್ನುವ ಗರ್ಭಿಣಿ ಹೆಣ್ಣುಮಗಳೊಬ್ಬಳು ತನ್ನ ಎರಡನೇ ಮಗುವಿನ ಹೆರಿಗೆಗಾಗಿ ಜು.2 ರಂದು ಮಂಗಳೂರಿನ ಪ್ರತಿಷ್ಠಿತ  ಆಸ್ಪತ್ರೆಗೆ ದಾಖಲಾಗುತ್ತಾರೆ. ಹೆರಿಗೆಗೆ ಮೊದಲು ಕಳೆದ ಒಂಬತ್ತು ತಿಂಗಳು ಎಲ್ಲಾ ರೀತಿಯ ವೈದ್ಯಕೀಯ ಪರೀಕ್ಷೆಗಳನ್ನು ಅಲ್ಲೇ ನಡೆಸಿರುತ್ತಾರೆ. ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬದಲ್ಲಿ ಉಚಿತ ಚಿಕಿತ್ಸೆ ಸಿಗುತ್ತದೆಂಬ ಕಾರಣಕ್ಕೆ  ಆಸ್ಪತ್ರೆಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಆರೋಗ್ಯವಂತ ಮಹಿಳೆಗಾದ ಅನ್ಯಾಯಕ್ಕೆ ಯಾರು ಹೊಣೆ ?ಎಡವಟ್ಟಾದ ಚಿಕಿತ್ಸೆಯಿಂದ ಜೀವವನ್ನೇ ಕಳೆದುಕೊಂಡ ಮಹಿಳೆಯ  ಕುಟುಂಬಕ್ಕಾದ  ಅನ್ಯಾಯಕ್ಕೆ ಹೊಣೆಯಾರು?

Related posts

ಎಸ್‌ಎಸ್‌ಎಲ್‌ಸಿ ಪರೀಕ್ಷೆ–2: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಅನನ್ಯ ರಾಜ್ಯಕ್ಕೆ ಪ್ರಥಮ

Suddi Udaya

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ, ಕಾಶಿಪಟ್ಣ ಗ್ರಾಮ ಪಂಚಾಯತಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಜ.24: ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ನಾವೂರು ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಜನ್ಮ ದಿನಾಚರಣೆ ಹಾಗೂ ಉದ್ಯೋಗ ಖಾತರಿ ಯೋಜನೆ ಗ್ರಾಮ ಸಭೆ

Suddi Udaya

ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ಅಶೋಕ್ ಪೂಜಾರಿ, ಉಪಾಧ್ಯಕ್ಷರಾಗಿ ಮೋಹನಂದ ಪೂಜಾರಿ

Suddi Udaya
error: Content is protected !!