25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನೆರಿಯ ವಲಯದ ಭಜನಾ ಪರಿಷತ್ ಸಭೆ

ತೋಟತ್ತಾಡಿ: ನೆರಿಯ ವಲಯದ ಭಜನಾ ಪರಿಷತ್ ಸಭೆಯನ್ನು, ವಲಯ ಕಛೇರಿ ತೋಟತ್ತಾಡಿಯಲ್ಲಿ ನಡೆಸಲಾಯಿತು.

ಈ ಸಭೆಯಲ್ಲಿ ಪ್ರಾಸ್ತವಿಕವಾಗಿ ಮಾತನಾಡಿದ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಚಂದ್ರಶೇಖರ ಸಾಲಿಯಾನ್ ರವರು ಕಾರ್ಯಕ್ರಮದ ಉದ್ದೇಶ, ಮೂಲಭೂತ ಸೌಕರ್ಯಗಳ ಬಗ್ಗೆ, 3 ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆ ಸೇರುವ ಬಗ್ಗೆ, ನಮ್ಮ ಸಂಪ್ರದಾಯದಲ್ಲಿ ಭಜನೆಗೆ ಇರುವ ಮಹತ್ವದ ಬಗ್ಗೆ ಸವಿವಾರವಾಗಿ ಮಾಹಿತಿಯನ್ನು ನೀಡಿದರು.

ಭಜನಾ ಪರಿಷತ್ ತಾಲೂಕು ಅಧ್ಯಕ್ಷರಾದ ವೆಂಕಟೇಶ್ ಭಟ್ ರವರು ಪೂಜ್ಯಖಾವಂದರಿಗೆ ಭಜನಾ ಮಂಡಳಿಗಳ ಮೇಲೆ ಇರುವ ಅಭಿಮಾನದ ಬಗ್ಗೆ, ವಲಯದಲ್ಲಿ ಮುಂದಿನ ದಿನಗಳಲ್ಲಿ ಭಜನಾ ಮಂಡಳಿಗಳು ಒಗ್ಗಟ್ಟಿನಲ್ಲಿ ಇದ್ದು ಉತ್ತಮವಾಗಿ ಸಂಘಟನೆಯನ್ನು ಮಾಡಿ ನಮ್ಮ ಬೆಳ್ತಂಗಡಿ ತಾಲೂಕಿನಲ್ಲಿ ಭಜನಾಪರಿಷತ್ ಪ್ರಥಮ ಸ್ಥಾನದಲ್ಲಿ ಬರುವ ಹಾಗೆ ಮಾಡುವಲ್ಲಿ ನಾವೆಲ್ಲರೂ ಪ್ರಯತ್ನ ಪಡೋಣ ಎಂದು ಶುಭವನ್ನು ಹಾರೈಸಿದರು.

ಸಭೆಯಲ್ಲಿ ವಲಯ ಭಜನಾ ಪರಿಷತ್ ಸಂಚಾಲಕರಾದ ಪಿ.ಕೆ ರಾಜನ್, ವಲಯಧ್ಯಕ್ಷರಾದ ಸತೀಶ್, ವಲಯ ಮೇಲ್ವಿಚಾರಕರಾದ ರಾಜೇಶ್, ವಲಯದ ಎಲ್ಲಾ ಭಜನಾ ಪರಿಷತ್ ನ ಪದಾಧಿಕಾರಿಗಳು ಮತ್ತು ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು .

Related posts

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ತುಳು ಭಾಷಣ ಸ್ಪರ್ಧೆ: ಬೆಳಾಲು ಪ್ರೌಢಶಾಲೆಯ ಕು. ಕೀರ್ತನಾ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಕುಂಟಿನಿ ಬೂತ್ ಸಮಿತಿ ಎಸ್.ಡಿ.ಪಿ.ಐ ವತಿಯಿಂದ ಪಕ್ಷದ ಸಂಸ್ಥಾಪನ ದಿನಾಚರಣೆ

Suddi Udaya

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಮುಂಡಾಜೆ ಪ.ಪೂ. ಕಾಲೇಜು ವಿದ್ಯಾರ್ಥಿ ಕೆ.ಎನ್. ಧನುಷ್ ಆಯ್ಕೆ

Suddi Udaya

ಎಸ್ ಕೆ ಎಸ್ ಎಸ್‌ ಎಫ್ ಮದ್ದಡ್ಕ ಶಾಖೆಯ ವತಿಯಿಂದ ಕುವೆಟ್ಟು ಶಾಲಾ ವಿದ್ಯಾರ್ಥಿಗಳಿಗೆ ಟೈ ಮತ್ತು ಬೆಲ್ಟ್ ವಿತರಣೆ

Suddi Udaya

ಬೆಳ್ತಂಗಡಿ ಜೆಸಿ ಸಪ್ತಾಹದಲ್ಲಿ ಡ್ರೀಮ್ ಡೀಲ್ ಗ್ರೂಪ್ ಎಂಡಿ ಮಹಮ್ಮದ್ ಸುಹೈಲ್‌ರವರಿಗೆ ಸನ್ಮಾನ

Suddi Udaya
error: Content is protected !!