23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಪುದುವೆಟ್ಟು ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವನಮಹೋತ್ಸವ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಜು.13 ರಂದು ಆಚರಿಸಲಾಯಿತು.

ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಸ್ಥಳೀಯ ಪ್ರಗತಿಪರ ಕೃಷಿಕರು, ಬೊಳ್ಮ ನಾರ್ ಹಾಲು ಉತ್ಪಾದಕ ಸಹಕಾರಿ ಸಂಘದ ಅಧ್ಯಕ್ಷ ರಂಗನಾಥ್ ಏನ್ ಪಿ ಉಪಸ್ಥಿತರಿದ್ದು ಶಾಲೆಯಲ್ಲಿ ಸಾಂಕೇತಿಕವಾಗಿ ತೆಂಗಿನ ಸಸಿಯನ್ನು ನೀಡುವುದರ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಮಾತನಾಡಿದ ಅವರು ಪ್ರತಿಯೊಂದು ಮಗು ಮನೆಯಲ್ಲಿ ವರ್ಷದಲ್ಲಿ ಕನಿಷ್ಠ ಒಂದು ಗಿಡವನ್ನಾದರೂ ನೆಟ್ಟು ಪೋಷಣೆಯನ್ನು ಮಾಡಿದರೆ ಈ ವನಮಹೋತ್ಸವ ಕಾರ್ಯಕ್ರಮಕ್ಕೆ ಗೌರವವನ್ನು ಸೂಚಿಸಿದಂತೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಶೀನಪ್ಪಗೌಡರವರು ವನಮಹೋತ್ಸವದಲ್ಲಿ ಶಾಲೆಯಲ್ಲಿ ಇರುವಂತಹ ಗಿಡಮರಗಳನ್ನು, ಮನೆಯಲ್ಲಿ ನೆಟ್ಟು ಬೆಳೆಸಿದಂತ ಗಿಡ ಮರಗಳನ್ನು ಒಳ್ಳೆಯ ರೀತಿಯಲ್ಲಿ ಪಾಲನೆ ಪೋಷಣೆ ಮಾಡುವುದರ ಮೂಲಕ ವಿದ್ಯಾರ್ಥಿಗಳೆಲ್ಲರೂ ಕೂಡ ವನಮಹೋತ್ಸವವನ್ನು ಮನೆಯಲ್ಲಿ ಕೂಡ ಆಚರಿಸಬೇಕೆಂದು ತಿಳಿಸಿದರು.

ಶಾಲೆಯ ಶಿಕ್ಷಕಿಯಾದ ಶ್ರೀಮತಿ ಶೀಲಾ ಎನ್. ಮಾತನಾಡಿ ವನಮಹೋತ್ಸವ ದಿನಾಚರಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳಿಂದ ವನಮಹೋತ್ಸವದ ಕುರಿತಂತೆ ಭಾಷಣ ಹಾಗೂ ಗೀತೆಗಳನ್ನು ಹಾಡಿಸಲಾಯಿತು. ವಿದ್ಯಾರ್ಥಿಗಳ ಪ್ರಾರ್ಥನ ಗೀತೆಯೊಂದಿಗೆ ಆರಂಭಗೊಂಡ ಈ ಕಾರ್ಯಕ್ರಮದಲ್ಲಿ ನಿಶಾಂತ್ ಕುಮಾರ್ ಸ್ವಾಗತಿಸಿ, ಶ್ರೀಮತಿ ಪುಷ್ಪಲತಾ ಧನ್ಯವಾದ ಗೈದ ಕಾರ್ಯಕ್ರಮವನ್ನು ಶ್ರೀಮತಿ ಸುಜಾತ ಬಿ ರವರು ನಿರೂಪಿಸಿದರು. ಶಾಲೆಯ ಎಲ್ಲ ಶಿಕ್ಷಕರು ಉಪಸ್ಥಿತರಿದ್ದು ಸಹಕರಿಸಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ವನಮಹೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಣೆ

Suddi Udaya

ಮದ್ದಡ್ಕ: ಹೆದ್ದಾರಿಯ ಕೆಲಸ ಕಾಮಗಾರಿಯಲ್ಲಿ ಮಾರ್ಗವನ್ನು ಎತ್ತರವಾಗಿಸಿದ್ದರಿಂದ ಪರಿಸರದ ಜನರಿಗೆ ತೊoದರೆ: ಮಾರ್ಗವನ್ನು ತಗ್ಗಿಸಿ ಕಾಮಗಾರಿ ನಡೆಸುವoತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರಿಗೆ ಮನವಿ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ : 20 ಸರಕಾರಿ ಶಾಲೆಯ1500ಕ್ಕೂ ಹೆಚ್ವು ವಿದ್ಯಾರ್ಥಿಗಳು ಭಾಗಿ, ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಮತ್ತು ಊರವರಿಂದ ಶ್ರಮದಾನ

Suddi Udaya
error: Content is protected !!