22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

ಅರಸಿನಮಕ್ಕಿ : ಕೊಕ್ಕಡ ವಲಯದ ಭಜನಾ ಪರಿಷತ್ ಸಭೆಯನ್ನು, ಅರಸಿನಮಕ್ಕಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು.

ಸಭೆಯಲ್ಲಿ ಪ್ರಾಸ್ತವಿಕವಾಗಿ ಮಾತನಾಡಿದ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಚಂದ್ರಶೇಖರ ಸಾಲಿಯಾನ್ ರವರು ಕಾರ್ಯಕ್ರಮದ ಉದ್ದೇಶ, ಮೂಲಭೂತ ಸೌಕರ್ಯಗಳ ಬಗ್ಗೆ, 3 ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆ ಸೇರುವ ಬಗ್ಗೆ, ನಮ್ಮ ಸಂಪ್ರದಾಯದಲ್ಲಿ ಭಜನೆಗೆ ಇರುವ ಮಹತ್ವದ ಬಗ್ಗೆ ಸವಿವಾರವಾಗಿ ಮಾಹಿತಿಯನ್ನು ನೀಡಿದರು.

ನಂತರದಲ್ಲಿ ಭಜನಾಪರಿಷತ್ ಕೊಕ್ಕಡ ವಲಯದ ಸಂಯೋಜಕರು ಕೃಷ್ಣಪ್ಪ ರವರು ಪ್ರಥಮವಾಗಿ ಎಲ್ಲರಿಗೂ ವಂದಿಸಿ, ಪೂಜ್ಯಖಾವಂದರಿಗೆ ಭಜನಾ ಮಂಡಳಿಗಳ ಮೇಲೆ ಇರುವ ಅಭಿಮಾನದ ಬಗ್ಗೆ, ವಲಯದಲ್ಲಿ ಮುಂದಿನ ದಿನಗಳಲ್ಲಿ ಭಜನಾ ಮಂಡಳಿಗಳು ಒಗ್ಗಟ್ಟಿನಲ್ಲಿ ಇದ್ದು ಉತ್ತಮವಾಗಿ ಸಂಘಟನೆಯನ್ನು ಮಾಡಿ ನಮ್ಮ ಬೆಳ್ತಂಗಡಿ ತಾಲೂಕಿನಲ್ಲಿ ವಲಯದಲ್ಲಿ ಎಲ್ಲಾ ಭಜನಾ ಮಂಡಳಿಗಳು ಕ್ರಿಯಾಶೀಲಾ ಇರುವ ಹಾಗೆ ನಾವೆಲ್ಲರೂ ಪ್ರಯತ್ನ ಪಡೋಣ ಎಂದು ಶುಭವನ್ನು ಹಾರೈಸಿದರು.

ಸಭೆಯಲ್ಲಿ ವಲಯ ಮೇಲ್ವಿಚಾರಕರಾದ ಶ್ರೀಮತಿ ಭಾಗೀರಥಿ ವಲಯದ ಎಲ್ಲಾ ಭಜನಾ ಪರಿಷತ್ ನ ಪದಾಧಿಕಾರಿಗಳು ಮತ್ತು ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಅರಸಿನಮಕ್ಕಿಯಲ್ಲಿ ಮಲ್ಲ ಚಾವಡಿ ಹಬ್ಬ , ಸನ್ಮಾನ ಸಮಾರಂಭ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಪ್ರತಿಭಾ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ರಸಪ್ರಶ್ನೆ ಸ್ಪರ್ಧೆ; ನಡ ಪ.ಪೂ. ಕಾಲೇಜು ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಸರಣಿ ಕಳ್ಳತನಗೈಯ್ಯುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ: ಕಾರ್ಕಳ ತಾಲೂಕು ನಿಟ್ಟೆ ಅಜ್ಜೊಟ್ಟು ನಿವಾಸಿ ಸುರೇಶ ಕೆ ಪೂಜಾರಿ ಬಂಧಿತ ಆರೋಪಿ

Suddi Udaya

ನಮ್ಮೂರ ಜಾತ್ರೆ ಕುಂಭಶ್ರೀ ವೈಭವ, ಶಾಲೆಯ ವಾರ್ಷಿಕೋತ್ಸವ: ಮಾತಾ-ಪಿತಾ-ಗುರುದೇವೋಭವ ಹೃದಯಸ್ಪರ್ಶಿ ಕಾರ್ಯಕ್ರಮ

Suddi Udaya
error: Content is protected !!