24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

ಅರಸಿನಮಕ್ಕಿ : ಕೊಕ್ಕಡ ವಲಯದ ಭಜನಾ ಪರಿಷತ್ ಸಭೆಯನ್ನು, ಅರಸಿನಮಕ್ಕಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು.

ಸಭೆಯಲ್ಲಿ ಪ್ರಾಸ್ತವಿಕವಾಗಿ ಮಾತನಾಡಿದ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಚಂದ್ರಶೇಖರ ಸಾಲಿಯಾನ್ ರವರು ಕಾರ್ಯಕ್ರಮದ ಉದ್ದೇಶ, ಮೂಲಭೂತ ಸೌಕರ್ಯಗಳ ಬಗ್ಗೆ, 3 ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆ ಸೇರುವ ಬಗ್ಗೆ, ನಮ್ಮ ಸಂಪ್ರದಾಯದಲ್ಲಿ ಭಜನೆಗೆ ಇರುವ ಮಹತ್ವದ ಬಗ್ಗೆ ಸವಿವಾರವಾಗಿ ಮಾಹಿತಿಯನ್ನು ನೀಡಿದರು.

ನಂತರದಲ್ಲಿ ಭಜನಾಪರಿಷತ್ ಕೊಕ್ಕಡ ವಲಯದ ಸಂಯೋಜಕರು ಕೃಷ್ಣಪ್ಪ ರವರು ಪ್ರಥಮವಾಗಿ ಎಲ್ಲರಿಗೂ ವಂದಿಸಿ, ಪೂಜ್ಯಖಾವಂದರಿಗೆ ಭಜನಾ ಮಂಡಳಿಗಳ ಮೇಲೆ ಇರುವ ಅಭಿಮಾನದ ಬಗ್ಗೆ, ವಲಯದಲ್ಲಿ ಮುಂದಿನ ದಿನಗಳಲ್ಲಿ ಭಜನಾ ಮಂಡಳಿಗಳು ಒಗ್ಗಟ್ಟಿನಲ್ಲಿ ಇದ್ದು ಉತ್ತಮವಾಗಿ ಸಂಘಟನೆಯನ್ನು ಮಾಡಿ ನಮ್ಮ ಬೆಳ್ತಂಗಡಿ ತಾಲೂಕಿನಲ್ಲಿ ವಲಯದಲ್ಲಿ ಎಲ್ಲಾ ಭಜನಾ ಮಂಡಳಿಗಳು ಕ್ರಿಯಾಶೀಲಾ ಇರುವ ಹಾಗೆ ನಾವೆಲ್ಲರೂ ಪ್ರಯತ್ನ ಪಡೋಣ ಎಂದು ಶುಭವನ್ನು ಹಾರೈಸಿದರು.

ಸಭೆಯಲ್ಲಿ ವಲಯ ಮೇಲ್ವಿಚಾರಕರಾದ ಶ್ರೀಮತಿ ಭಾಗೀರಥಿ ವಲಯದ ಎಲ್ಲಾ ಭಜನಾ ಪರಿಷತ್ ನ ಪದಾಧಿಕಾರಿಗಳು ಮತ್ತು ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಯೂನಿರ್ವಸಿಟಿ ರಿಜಿಸ್ಟ್ರಾರ್ ಭೇಟಿ

Suddi Udaya

ಉಜಿರೆ: ಮಾಚಾರಿನಲ್ಲಿ ಎಸ್‌ವೈಎಸ್ 30 ನೇ ವಾರ್ಷಿಕ ಪ್ರಚಾರಾರ್ಥ ಕಾರ್ಯಕ್ರಮ

Suddi Udaya

ಕಳಿಯ ಗ್ರಾಮ ಪಂಚಾಯತ್ ಅರಿವು ಕೇಂದ್ರದ ಸಭೆ

Suddi Udaya

ನಾರಾವಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮ್ಯಾನೇಜರ್ ಸುಧೀರ್ ಎಸ್.ಪಿ ಬೆಳ್ತಂಗಡಿ ಶಾಖೆಗೆ ವರ್ಗಾವಣೆ: ಗ್ರಾಹಕರು ಹಾಗೂ ಸಿಬ್ಬಂದಿಗಳಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಧರ್ಮಸ್ಥಳ ಭಗವಾನ್ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ

Suddi Udaya

ಉಜಿರೆಯ ವ್ಯಾಯಾಮ್ ಮಲ್ಟಿ ಜಿಮ್ ನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!