38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧ. ಮಂ. ಕಾಲೇಜಿನಲ್ಲಿ ತುಳು ಜಾನಪದ ಮಹಾಕವಿ ಮಾಚಾರ್ ಗೋಪಾಲ ನಾಯ್ಕ ಸಂಸ್ಮರಣೆ ಮತ್ತು ತುಳುವ ಮೌಖಿಕ ಪರಂಪರೆ ವಿಷಯದ ಕುರಿತು ವಿಶೇಷ ಉಪನ್ಯಾಸ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ವಿಭಾಗವು ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಬೆಳ್ತಂಗಡಿ ತಾಲೂಕು ಘಟಕದ ಸಹಯೋಗದಲ್ಲಿ ತುಳು ಜಾನಪದ ಮಹಾಕವಿ ಮಾಚಾರ್ ಗೋಪಾಲ ನಾಯ್ಕ ಸಂಸ್ಮರಣೆ ಮತ್ತು ತುಳುವ ಮೌಖಿಕ ಪರಂಪರೆ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಜು.8, 2023 ರಂದು ಕಾಲೇಜಿನಲ್ಲಿ ಆಯೋಜಿಸಿತು.
ಸಂಪನ್ಮೂಲ ವ್ಯಕ್ತಿಯಾಗಿ ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ. ಕೆ. ಚಿನ್ನಪ್ಪ ಗೌಡ ಅವರು ಭಾಗವಹಿಸಿ ಗೋಪಾಲ ನಾಯ್ಕ ಅವರು ಪ್ರತಿಭಾವಂತ ಕವಿಯಾಗಿಯಾಗಿದ್ದರು. ತುಳುವ ಮೌಖಿಕ ಪರಂಪರೆಯ ಸಮರ್ಥ ಕೊಂಡಿಯಾಗಿ ಅಪಾರ ಕೊಡುಗೆ ನೀಡಿದ್ದಾರೆ. ಅವರೊಬ್ಬ ಅಂತಾರಾಷ್ಟ್ರೀಯ ಕವಿಯಾಗಿ ಹೊರಹೊಮ್ಮಿದ್ದಾರೆ. ತುಳುನಾಡಿನ ಜಾನಪದ ಅಷ್ಟೊಂದು ಶ್ರೀಮಂತವಾದುದು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ ವಹಿಸಿದ್ದರು. ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ. ಪಿ. ಶ್ರೀನಾಥ, ಗೋಪಾಲ ನಾಯ್ಕ ಅವರ ಪುತ್ರ ಸಿದ್ಧವನ ಗುರುಕುಲದ ಪ್ರಧಾನ ಪಾಲಕ ಕೇಶವ ನಾಯ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ಡಿ. ಯದುಪತಿ ಗೌಡ ಅವರು ಸ್ವಾಗತಿಸಿದರು. ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ಬೋಜಮ್ಮ ಕೆ. ಎನ್. ಅವರು ವಂದಿಸಿದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಕನ್ನಡ ಸಹ ಪ್ರಾಧ್ಯಾಪಕ ದಿವ ಕೊಕ್ಕಡ ಕಾರ್ಯಕ್ರಮ ಸಂಯೋಜಿಸಿದ್ದರು.

Related posts

ದ್ವಿತೀಯ ಪಿಯುಸಿ ಪರೀಕ್ಷೆ: ಹೆಚ್ಚುವರಿ ಬಸ್ ಇಲ್ಲದೆ ವಿದ್ಯಾರ್ಥಿಗಳ ಪರದಾಟ

Suddi Udaya

ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಕ್ಷೇತ್ರ ಭೇಟಿ

Suddi Udaya

ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರರಾದ ಕೊಕ್ಕಡದ ಶ್ರೀಧರ ಗೌಡ ಕೆಂಗುಡೇಲುರವರಿಗೆ “ವಿಕ ಹಿರೋಸ್” ಪ್ರಶಸ್ತಿ

Suddi Udaya

ಮುಂಡಾಜೆ ಕುಂಟಾಲಪಲ್ಕೆ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಕಾರ್ಯತ್ತಡ್ಕ ಸ.ಪ್ರೌ. ಶಾಲೆಯಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya
error: Content is protected !!