April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧ. ಮಂ. ಕಾಲೇಜಿನಲ್ಲಿ ತುಳು ಜಾನಪದ ಮಹಾಕವಿ ಮಾಚಾರ್ ಗೋಪಾಲ ನಾಯ್ಕ ಸಂಸ್ಮರಣೆ ಮತ್ತು ತುಳುವ ಮೌಖಿಕ ಪರಂಪರೆ ವಿಷಯದ ಕುರಿತು ವಿಶೇಷ ಉಪನ್ಯಾಸ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ವಿಭಾಗವು ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಬೆಳ್ತಂಗಡಿ ತಾಲೂಕು ಘಟಕದ ಸಹಯೋಗದಲ್ಲಿ ತುಳು ಜಾನಪದ ಮಹಾಕವಿ ಮಾಚಾರ್ ಗೋಪಾಲ ನಾಯ್ಕ ಸಂಸ್ಮರಣೆ ಮತ್ತು ತುಳುವ ಮೌಖಿಕ ಪರಂಪರೆ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಜು.8, 2023 ರಂದು ಕಾಲೇಜಿನಲ್ಲಿ ಆಯೋಜಿಸಿತು.
ಸಂಪನ್ಮೂಲ ವ್ಯಕ್ತಿಯಾಗಿ ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ. ಕೆ. ಚಿನ್ನಪ್ಪ ಗೌಡ ಅವರು ಭಾಗವಹಿಸಿ ಗೋಪಾಲ ನಾಯ್ಕ ಅವರು ಪ್ರತಿಭಾವಂತ ಕವಿಯಾಗಿಯಾಗಿದ್ದರು. ತುಳುವ ಮೌಖಿಕ ಪರಂಪರೆಯ ಸಮರ್ಥ ಕೊಂಡಿಯಾಗಿ ಅಪಾರ ಕೊಡುಗೆ ನೀಡಿದ್ದಾರೆ. ಅವರೊಬ್ಬ ಅಂತಾರಾಷ್ಟ್ರೀಯ ಕವಿಯಾಗಿ ಹೊರಹೊಮ್ಮಿದ್ದಾರೆ. ತುಳುನಾಡಿನ ಜಾನಪದ ಅಷ್ಟೊಂದು ಶ್ರೀಮಂತವಾದುದು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ ವಹಿಸಿದ್ದರು. ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ. ಪಿ. ಶ್ರೀನಾಥ, ಗೋಪಾಲ ನಾಯ್ಕ ಅವರ ಪುತ್ರ ಸಿದ್ಧವನ ಗುರುಕುಲದ ಪ್ರಧಾನ ಪಾಲಕ ಕೇಶವ ನಾಯ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ಡಿ. ಯದುಪತಿ ಗೌಡ ಅವರು ಸ್ವಾಗತಿಸಿದರು. ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ಬೋಜಮ್ಮ ಕೆ. ಎನ್. ಅವರು ವಂದಿಸಿದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಕನ್ನಡ ಸಹ ಪ್ರಾಧ್ಯಾಪಕ ದಿವ ಕೊಕ್ಕಡ ಕಾರ್ಯಕ್ರಮ ಸಂಯೋಜಿಸಿದ್ದರು.

Related posts

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ರೂ.2 ಲಕ್ಷ ದೇಣಿಗೆ

Suddi Udaya

ಬೆಳಾಲು: ಎರಡು ಗುಂಪುಗಳ ನಡುವೆ ಗಲಾಟೆ: ಪರಸ್ಪರ ಆರೋಪ ಹೊರಿಸಿ ಪೊಲೀಸರಿಗೆ ದೂರು

Suddi Udaya

ನಾರಾವಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮ್ಯಾನೇಜರ್ ಸುಧೀರ್ ಎಸ್.ಪಿ ಬೆಳ್ತಂಗಡಿ ಶಾಖೆಗೆ ವರ್ಗಾವಣೆ: ಗ್ರಾಹಕರು ಹಾಗೂ ಸಿಬ್ಬಂದಿಗಳಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ರೆಖ್ಯ ಬಿಜೆಪಿ ಕಾರ್ಯಕರ್ತರಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಬಂಗಾಡಿ ಬಿಎಸ್ಎನ್ಎಲ್ ನೆಟ್ವರ್ಕ್ಸ್ ಸಮಸ್ಯೆಯಿಂದ ಗ್ರಾಹಕರು ಕಂಗಾಲು: ಸಂಬಂಧ ಪಟ್ಟವರು ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಸಾಂತಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya
error: Content is protected !!