September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧ. ಮಂ. ಕಾಲೇಜಿನಲ್ಲಿ ತುಳು ಜಾನಪದ ಮಹಾಕವಿ ಮಾಚಾರ್ ಗೋಪಾಲ ನಾಯ್ಕ ಸಂಸ್ಮರಣೆ ಮತ್ತು ತುಳುವ ಮೌಖಿಕ ಪರಂಪರೆ ವಿಷಯದ ಕುರಿತು ವಿಶೇಷ ಉಪನ್ಯಾಸ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ವಿಭಾಗವು ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಬೆಳ್ತಂಗಡಿ ತಾಲೂಕು ಘಟಕದ ಸಹಯೋಗದಲ್ಲಿ ತುಳು ಜಾನಪದ ಮಹಾಕವಿ ಮಾಚಾರ್ ಗೋಪಾಲ ನಾಯ್ಕ ಸಂಸ್ಮರಣೆ ಮತ್ತು ತುಳುವ ಮೌಖಿಕ ಪರಂಪರೆ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಜು.8, 2023 ರಂದು ಕಾಲೇಜಿನಲ್ಲಿ ಆಯೋಜಿಸಿತು.
ಸಂಪನ್ಮೂಲ ವ್ಯಕ್ತಿಯಾಗಿ ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ. ಕೆ. ಚಿನ್ನಪ್ಪ ಗೌಡ ಅವರು ಭಾಗವಹಿಸಿ ಗೋಪಾಲ ನಾಯ್ಕ ಅವರು ಪ್ರತಿಭಾವಂತ ಕವಿಯಾಗಿಯಾಗಿದ್ದರು. ತುಳುವ ಮೌಖಿಕ ಪರಂಪರೆಯ ಸಮರ್ಥ ಕೊಂಡಿಯಾಗಿ ಅಪಾರ ಕೊಡುಗೆ ನೀಡಿದ್ದಾರೆ. ಅವರೊಬ್ಬ ಅಂತಾರಾಷ್ಟ್ರೀಯ ಕವಿಯಾಗಿ ಹೊರಹೊಮ್ಮಿದ್ದಾರೆ. ತುಳುನಾಡಿನ ಜಾನಪದ ಅಷ್ಟೊಂದು ಶ್ರೀಮಂತವಾದುದು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ ವಹಿಸಿದ್ದರು. ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ. ಪಿ. ಶ್ರೀನಾಥ, ಗೋಪಾಲ ನಾಯ್ಕ ಅವರ ಪುತ್ರ ಸಿದ್ಧವನ ಗುರುಕುಲದ ಪ್ರಧಾನ ಪಾಲಕ ಕೇಶವ ನಾಯ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ಡಿ. ಯದುಪತಿ ಗೌಡ ಅವರು ಸ್ವಾಗತಿಸಿದರು. ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ಬೋಜಮ್ಮ ಕೆ. ಎನ್. ಅವರು ವಂದಿಸಿದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಕನ್ನಡ ಸಹ ಪ್ರಾಧ್ಯಾಪಕ ದಿವ ಕೊಕ್ಕಡ ಕಾರ್ಯಕ್ರಮ ಸಂಯೋಜಿಸಿದ್ದರು.

Related posts

ನಕಲಿ ನೋಟು ಅಡ್ಡೆ ಮೇಲೆ ಪೊಲೀಸರ ದಾಳಿ : ಪ್ರಿಂಟಿಂಗ್‌ ಮೆಷಿನ್‌ ಜಪ್ತಿ, 7 ಮಂದಿ ವಶಕ್ಕೆ

Suddi Udaya

ಗ್ರಾಮಸ್ಥರ ಮನೆಗಳ ಶುಚಿತ್ವಕ್ಕೆ ಕಂಟಕವಾದ ಸ್ಥಳೀಯ ಕೋಳಿಸಾಕಾಣಿಕೆ: ಅಗತ್ಯ ಕ್ರಮಕ್ಕೆ ಸ್ಥಳೀಯರ ಒತ್ತಾಯ

Suddi Udaya

ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

Suddi Udaya

ಕುದ್ಯಾಡಿ ಶಾಲಾ ಮಕ್ಕಳಿಗೆ ಬ್ಯಾಗ್, ಸಮವಸ್ತ್ರ, ಕೊಡೆ ವಿತರಣೆ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಹಲವಾರು ಜನೋಪಯೋಗಿ ಕಾರ್ಯಕ್ರಮ

Suddi Udaya
error: Content is protected !!