22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಅಳದಂಗಡಿ:ಶ್ರೀ ಭಗವಾನ್ ಸಾಯಿಬಾಬಾ ಮೆಟಲ್ಸ್ ಮತ್ತು ಪೂಜಾ ಸಾಮಾಗ್ರಿಗಳ ಅಂಗಡಿ ಶುಭಾರಂಭ

ಅಳದಂಗಡಿ: ಶ್ರೀ ಭಗವಾನ್ ಸಾಯಿಬಾಬಾ ಮೆಟಲ್ಸ್ ಮತ್ತು ಪೂಜಾ ಸಾಮಗ್ರಿಗಳ ಅಂಗಡಿ ಉದ್ಘಾಟನೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ನೇರವೇರಿಸಿ ಶುಭಕೋರಿದರು.

ಕಾರ್ಯಕ್ರಮದಲ್ಲಿ ಅಳದಂಗಡಿ ಗ್ರಾ.ಪಂ ಅಧ್ಯಕ್ಷೆ ಸೌಮ್ಯ ಹರಿಪ್ರಸಾದ್, ವಿಭಾಗ ಸಹ ಸಂಚಾಲಕರು ಬಜರಂಗದಳ ಮಂಗಳೂರು ಪುನೀತ್ ಅತ್ತಾವರ, ಆಟೋ ಚಾಲಕರು ಮಾಲಕರ ಸಂಘದ ಅಧ್ಯಕ್ಷ ಹರೀಶ್ಚಂದ್ರ, ಅಳದಂಗಡಿ ಶ್ರೀದೇವಿ ಕಾಂಪ್ಲೆಕ್ಸ್ ಮಾಲಕ ಎನ್.ಎ ಗೋಪಾಲ್, ಯುವ ಬಿಲ್ಲವ ವೇದಿಕೆ ಶಿರ್ಲಾಲು ಇದರ ಅಧ್ಯಕ್ಷ ಹರೀಶ್ ಕಲ್ಲಾಜೆ, ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರದ ಸಂಚಾಲಕ ದೇವದಾಸ್ ಸಾಲಿಯಾನ್, ತಾಲೂಕು ಸಂಚಾಲಕರು ಹಿಂದೂ ಜಾಗರಣ ವೇದಿಕೆ ಗುರುಪ್ರಸಾದ್ ನಾರಾವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅಂಗಡಿಯಲ್ಲಿ ಎಲ್ಲಾ ತರಹದ ಪೂಜಾ ಸಾಮಗ್ರಿಗಳು, ದೈವದೇವರ ಮುಖ ಮೂರ್ತಿಗಳು ಅತಿ ಕಡಿಮೆ ಬೆಲೆಯಲ್ಲಿ ದೊರೆಯುತ್ತದೆ ಎಂದು ಸಂಸ್ಥೆಯ ಮಾಲಕ ದೀಪಕ್ ಜಿ ತಿಳಿಸಿದರು.

ವಿಶೇಷವಾಗಿ ಸಂಸ್ಥೆಗೆ ಆಗಮಿಸಿದ ಅತಿಥಿ ಅಭ್ಯಾಗತರಿಗೆ ಸಸಿ ನೀಡುವ ಮೂಲಕ ಪರಿಸರ ಜಾಗೃತಿಯನ್ನು ಮೂಡಿಸಲಾಯಿತು.

ಶ್ರೀ ಭಗವಾನ್ ಸಾಯಿಬಾಬಾ ಮೆಟಲ್ಸ್ ಮತ್ತು ಪೂಜಾ ಸಾಮಾಗ್ರಿಗಳ ಅಂಗಡಿಯ ಮಾಲಕ ದೀಪಕ್ ಜಿ ಸ್ವಾಗತಿಸಿ ಸತ್ಕರಿಸಿದರು.

Related posts

ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಅಧ್ಯಕ್ಷರಾಗಿ ಚೈತ್ರಾ ಎಂ.ಜಿ., ಉಪಾಧ್ಯಕ್ಷರಾಗಿ ಪ್ರೇಮಾ ಸಿ.

Suddi Udaya

ಪದ್ಮುಂಜ: ಆಟೋ ರಿಕ್ಷಾ ಪಲ್ಟಿ, ಗಂಭೀರ ಗಾಯಗೊಂಡ ಚಾಲಕ ಮೃತ್ಯು

Suddi Udaya

ಬೆಳ್ತಂಗಡಿಯಲ್ಲಿ ಸರಣಿ ಅಪಘಾತ: ಎರಡು ಬಸ್ಸು ಸೇರಿದಂತೆ 7 ವಾಹನಗಳಿಗೆ ಡಿಕ್ಕಿ ಹೊಡೆದ ಲಾರಿ: ಯುವತಿ ಗಂಭೀರ

Suddi Udaya

ಮುಂಡಾಜೆ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ನಬಾರ್ಡ್‌ ಅಧಿಕಾರಿಗಳ ಜೊತೆ ವಿವಿಧ ರಾಜ್ಯಗಳ ಸಹಕಾರಿ ಸಂಘಗಳ ಅಧಿಕಾರಿಗಳ ಭೇಟಿ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪ್ರದಾನ

Suddi Udaya

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ಮಹಾಸಭೆ

Suddi Udaya
error: Content is protected !!