ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ವಲಯ ಅರಣ್ಯದಲ್ಲಿ ಹಣ್ಣು ಹಂಪಲುಗಳ ಗಿಡ ನಾಟಿ ಕಾರ್ಯಕ್ರಮ

ಗುರುವಾಯನಕೆರೆ ಶೌರ್ಯ ವಿಪತ್ತು ನಿರ್ವಹಣಾ ಘಟಕ ಅಳದಂಗಡಿ ವಲಯ ಅರಣ್ಯದಲ್ಲಿ ಹಣ್ಣು ಹಂಪಲುಗಳ ಗಿಡ ನಾಟಿ ಕಾರ್ಯಕ್ರಮವು ಜು.14 ರಂದು ನಡೆಯಿತು.
ಸುಲ್ಕೇರಿಮೊಗ್ರು ಗ್ರಾಮದ ನೇಲ್ಯಲ್ಕೆ ಅರಣ್ಯ ಪ್ರದೇಶದಲ್ಲಿ ಎಸ್ ಕೆ ಡಿ ಆರ್ ಡಿ ಪಿ ಅಳದಂಗಡಿ ವಲಯ ಸುಲ್ಕೇರಿಮೊಗ್ರು ಗ್ರಾಮದ ಒಕ್ಕೂಟಗಳ ಪದಾಧಿಕಾರಿಗಳು ಹಾಗೂ ವಿಪತ್ತು ನಿರ್ವಹಣಾ ಸ್ವಯಂಸೇವಕರು ಜಂಟಿಯಾಗಿ ಹಣ್ಣು ಹಂಪಲುಗಳ ಗಿಡಗಳನ್ನು ನಾಟಿ ಮಾಡಿದರು.
ಹಲಸು, ಹೆಬ್ಬಲಸು, ಮಾವು, ನೆಲ್ಲಿ, ಪುನರ್ಪುಳಿ, ರೆಂಜೆ, ಅತ್ತಿ, ಹುಣಸೆ, ನೇರಳೆ ಮುಂತಾದ ಹಲವು ಜಾತಿಯ ಗಿಡಗಳ ನಾಟಿ ಮಾಡಲಾಯಿತು.


ಅಳದಂಗಡಿ ವಲಯ ಉಪ ಅರಣ್ಯಾಧಿಕಾರಿ ಸುರೇಶ್ ಗೌಡರವರು ಸ್ಥಳಕ್ಕೆ ಭೇಟಿ ನೀಡಿ ಮಾರ್ಗದರ್ಶನ ನೀಡಿದರು. ಗಿಡ ನೆಡುವಲ್ಲಿ ಅರಣ್ಯದ ಸಹಾಯಕ ಸಿಬ್ಬಂದಿ ಸಹಕರಿಸಿದರು.
ವಲಯ ಮೇಲ್ವಿಚಾರಕಿ ಶ್ರೀಮತಿ ಸುಮಂಗಲ, ಸ್ಥಳೀಯ ಸೇವಾ ಪ್ರತಿನಿಧಿ ಕುಮಾರಿ ಸುಲೋಚನಾ, ಒಕ್ಕೂಟ ಪದಾಧಿಕಾರಿಗಳು ಹಾಗೂ ಸಂಯೋಜಕರಾದ ಶ್ರೀಮತಿ ಹರಿಣಾಕ್ಷಿ, ಘಟಕ ಪ್ರತಿನಿಧಿ ಶ್ರೀಮತಿ ಶಕುಂತಲಾ, ಸಂಯೋಜಕ ಶ್ರೀಕಾಂತ್, ಸ್ವಯಂಸೇವಕರಾದ ಶ್ರೀ ನಾರಾಯಣ ಸಾಲಿಯಾನ್, ಪ್ರಕಾಶ್ ಕೊಲ್ಲಂಗೆ, ರವಿ ಪೂಜಾರಿ, ರವಿಚಂದ್ರ, ಸ್ವಯಂ ಸೇವಕಿಯರಾದ ಆಶಾ, ರೂಪಶ್ರೀ, ನಳಿನಿ, ಹೇಮಾವತಿ, ಸರಸ್ವತಿ, ಅಮಿತಾ, ಸುಜಾತ, ಹರ್ಷಲ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಲ್ಲಿ ಸಹಕರಿಸಿದರು.
500 ಗಿಡಗಳನ್ನು ನಾಟಿ ಮಾಡಿದರು.

Related posts

ಖ್ಯಾತ ಚಲನಚಿತ್ರ ನಿರ್ದೇಶಕ ವಿನು ಬಳಂಜ ಅವರ ತಾಯಿ ಮೀನಾಕ್ಷಿ ನಾಯ್ಗ ಅಟ್ಲಾಜೆ ನಿಧನ

Suddi Udaya

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ:ವೇಣೂರು ಸರ್ಕಾರಿ ಪದವಿ ಪೂರ್ವ(ಪ್ರೌಢಶಾಲಾ ವಿಭಾಗ ) ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಬೆಳ್ತಂಗಡಿ: ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ನಾಯಕರ ಆಯ್ಕೆ

Suddi Udaya

ತಾಲೂಕು ಮಟ್ಟದ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶ್ರೀರಕ್ಷ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ ಭಕ್ತಿ ಹೆಜ್ಜೆ ಬಳಗದಿಂದ “ಭಜಕೆರೆ ಆಟಿದ ಕಮ್ಮೆನ ಜನಪದ ಮಿನದನ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹ್ಯಾಂಡ್ ಬಾಲ್ ಪಂದ್ಯಾಟ: ಸಂತ ತೆರೇಸಾ ಸಂಸ್ಥೆಯ ವಿದ್ಯಾರ್ಥಿಗಳ ಅದ್ಭುತ ಸಾಧನೆ, ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!