ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ: ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ 2023-24 ನೇ ಸಾಲಿನ ವಿದ್ಯಾರ್ಥಿ ಸಂಘ ಉದ್ಘಾಟನೆ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಮಾರಂಭ ಕಾರ್ಯಕ್ರಮವು ಜು. 15ರಂದು ಸಿವಿಸಿ ಹಾಲ್ ನಲ್ಲಿ ಜರಗಿತು.

ಕಾರ್ಯಕ್ರಮ ಉದ್ಘಾಟನೆಯನ್ನು ಬೆಂಗಳೂರಿನ ಉದ್ಯಮಿ ಹಳೆ ವಿದ್ಯಾರ್ಥಿ ಮ್ಯಾನೇಜಿಂಗ್ ಡೈರೆಕ್ಟರ್ ಜಿಐ ಆಟೋ ಪ್ರೈವೇಟ್ ಲಿಮಿಟೆಡ್ ನ ಜಗದೀಶ್ ಮುಗುಳಿ ನೆರವೇರಿಸಿದರು. ಸರಕಾರಿ ಪದವಿ ಪೂರ್ವ ಕಾಲೇಜ್ ಪ್ರಾಂಶುಪಾಲ ಸುಕುಮಾರ ಜೈನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಸುವರ್ಣ ಮಹೋತ್ಸವದ ಸಮಿತಿ ಅಧ್ಯಕ್ಷ ಧನಂಜಯ್ ರಾವ್. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಜಯಾನಂದ ಗೌಡ, ಸುವರ್ಣ ಸಮಿತಿ ಕಾರ್ಯಧ್ಯಕ್ಷ ರೊನಾಲ್ಡ್ ಲೋಬೊ, ಸಿವಿಸಿ ಹಾಲಿನ ಮಾಲಕ ಜೇಮ್ಸ್ ಡಿಸೋಜ, ವಿದ್ಯಾರ್ಥಿ ನಾಯಕ ಮಿಲನ್, ನಾಯಕಿ ಚಿತ್ತಾರ ಮತ್ತು ಉಪನ್ಯಾಸಕರೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಉಪನ್ಯಾಸಕ ಆನಂದ ಗೌಡ ಸ್ವಾಗತಿಸಿದರು.

Leave a Comment

error: Content is protected !!