22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ

ಬೆಳ್ತಂಗಡಿ: ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ 2023-24 ನೇ ಸಾಲಿನ ವಿದ್ಯಾರ್ಥಿ ಸಂಘ ಉದ್ಘಾಟನೆ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಮಾರಂಭ ಕಾರ್ಯಕ್ರಮವು ಜು. 15ರಂದು ಸಿವಿಸಿ ಹಾಲ್ ನಲ್ಲಿ ಜರಗಿತು.

ಕಾರ್ಯಕ್ರಮ ಉದ್ಘಾಟನೆಯನ್ನು ಬೆಂಗಳೂರಿನ ಉದ್ಯಮಿ ಹಳೆ ವಿದ್ಯಾರ್ಥಿ ಮ್ಯಾನೇಜಿಂಗ್ ಡೈರೆಕ್ಟರ್ ಜಿಐ ಆಟೋ ಪ್ರೈವೇಟ್ ಲಿಮಿಟೆಡ್ ನ ಜಗದೀಶ್ ಮುಗುಳಿ ನೆರವೇರಿಸಿದರು. ಸರಕಾರಿ ಪದವಿ ಪೂರ್ವ ಕಾಲೇಜ್ ಪ್ರಾಂಶುಪಾಲ ಸುಕುಮಾರ ಜೈನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಸುವರ್ಣ ಮಹೋತ್ಸವದ ಸಮಿತಿ ಅಧ್ಯಕ್ಷ ಧನಂಜಯ್ ರಾವ್. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಜಯಾನಂದ ಗೌಡ, ಸುವರ್ಣ ಸಮಿತಿ ಕಾರ್ಯಧ್ಯಕ್ಷ ರೊನಾಲ್ಡ್ ಲೋಬೊ, ಸಿವಿಸಿ ಹಾಲಿನ ಮಾಲಕ ಜೇಮ್ಸ್ ಡಿಸೋಜ, ವಿದ್ಯಾರ್ಥಿ ನಾಯಕ ಮಿಲನ್, ನಾಯಕಿ ಚಿತ್ತಾರ ಮತ್ತು ಉಪನ್ಯಾಸಕರೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಉಪನ್ಯಾಸಕ ಆನಂದ ಗೌಡ ಸ್ವಾಗತಿಸಿದರು.

Related posts

ಇಳಂತಿಲ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಗ್ಯಾರಂಟಿ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ ಯೋಜನೆಗಳ ಕುರಿತು ವಿಶೇಷ ಗ್ರಾಮಸಭೆ

Suddi Udaya

ನಾವೂರು ಗ್ರಾಮ ಪಂಚಾಯತ್ ನಲ್ಲಿ ರೈತರಿಗೆ ಒಂದು ದಿನದ ಕೃಷಿ ತರಬೇತಿ ಕಾರ್ಯಕ್ರಮ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಮಹಿಳಾ ಆರೋಗ್ಯ ತಪಾಸಣೆ ಶಿಬಿರ

Suddi Udaya

ಅ.22 ರಂದು ಬಳಂಜದಲ್ಲಿ ವೈಭವದ ಶಾರದಾ ಮಹೋತ್ಸವ: ಪೂರ್ವತಯಾರಿ ಬಗ್ಗೆ ಸಮಾಲೋಚನೆ ಸಭೆ

Suddi Udaya

ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ಶ್ರೀ ಸದಾಶಿವ ದೇವಾಸ್ಥಾನದಲ್ಲಿ ಜಾತ್ರೋತ್ಸವ

Suddi Udaya

ನೆರಿಯ : ಹಾಡಹಾಗಲೇ ಮನೆಗೆ ನುಗ್ಗಿ ರೂ.3.12 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!