25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚೋಳಮಂಡಲಮ್ ಇನ್ವೆಸ್ಟ್ ಮೆಂಟ್ ಮತ್ತು ಫೈನಾನ್ಸ್ ಕಂಪನಿ‌ ಬೆಳ್ತಂಗಡಿಯಲ್ಲಿ ಕಾರ್ಯಾರಂಭ

ಬೆಳ್ತಂಗಡಿ: ಚೋಳಮಂಡಲಮ್ ಇನ್ವೆಸ್ಟ್ ಮೆಂಟ್ ಮತ್ತು ಫೈನಾನ್ಸ್ ಕಂಪನಿ‌ಯ ನೂತನ ಶಾಖೆ ಶ್ರೀರಾಮ ಕಾಂಪ್ಲೆಕ್ಸ್ ಬೆಳ್ತಂಗಡಿಯಲ್ಲಿ ಶುಭಾರಂಭಗೊಂಡಿದೆ.

ನೂತ‌ನ ಸಂಸ್ಥೆಯ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ ದೀಪ ಬೆಳಗಿಸುವುದರ ಮೂಲಕ‌ ನೇರವೇರಿಸಿ ಬೆಳ್ತಂಗಡಿ ಬೆಳೆಯುತ್ತಿರುವ ನಗರ ಪ್ರದೇಶವಾದ್ದರಿಂದ ಅತ್ಯಂತ ಮೌಲ್ಯಯುತವಾದ ಸಂಸ್ಥೆಯು ಇಲ್ಲಿಗೆ ಬರುತ್ತಿದೆ. ಯಾವುದೇ ಒಂದು ಸಂಸ್ಥೆ ಬೆಳೆಯಬೇಕಾದರೆ ಸಂಸ್ಥೆಯು ಗ್ರಾಹಕರಿಗೆ ಉತ್ತಮ‌ ಸೇವೆ ನೀಡಬೇಕು. ಆ ಮುಖೇನಾ ಸಂಸ್ಥೆ ಪ್ರಗತಿ ಪಥದಲ್ಲಿ ಸಾಗಲು ಸಾಧ್ಯವಿದೆ ಎನ್ನುತ್ತಾ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್, ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲಕ ಪ್ರಮೋದ್ ಆರ್ ನಾಯಕ್, ಶ್ರೀರಾಮ ಕಾಂಪ್ಲೆಕ್ಸ್ ಮಾಲಕ ಮುಖೇಶ್ ನಾಯಕ್, ಇಕೋಫ್ರೆಶ್ ಎಂಟರ್ಪ್ರೈಸಸ್ ಮಾಲಕ ರಾಕೇಶ್ ಹೆಗ್ಡೆ ಬಳಂಜ, ಭಾರತ್ ಆಟೋ ಕಾರ್ಸ್ ಮ್ಯಾನೇಜರ್ ಪ್ರದೀಪ್ ಶೆಟ್ಟಿ, ಪವರ್ ಆನ್ ಬ್ಯಾಟರಿ ಮಾಲಕ ಶೀತಲ್ ಜೈನ್, ಬೆಳ್ತಂಗಡಿ ಎಸ್.ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ.ಆಪರೇಟಿವ್ ಸೊಸೈಟಿ ಮ್ಯಾನೇಜರ್ ಪ್ರಶಾಂತ್ ಹೆಚ್ ಆಚಾರ್ಯ, ರಾಮ್ ಪ್ರಸಾದ್ ಎನ್.ಎಸ್, ಚೋಳಮಂಡಲಮ್ ಇನ್ವೆಸ್ಟ್ ಮೆಂಟ್ ಮತ್ತು ಫೈನಾನ್ಸ್ ಕಂಪನಿ‌ಯ ಅಧಿಕಾರಿಗಳಾದ ರಂಗನಾಥ ಸ್ವಾಮಿ,ಶರಣ್ ಕೆ,ಬಾಲು ಆರ್, ಸೋಹನ್ ಶೆಟ್ಟಿ, ಯೋಗೀಶ್ ಅಮಿನ್, ಅರುಣ್ ಕುಮಾರ್, ಬೆಳ್ತಂಗಡಿ ಬ್ರಾಂಚ್ ಮ್ಯಾನೇಜರ್ ಸುದೀಶ್, ಉಜಿರೆ ಅತಿಯಾಸ್ ಕಂಪೆನಿಯ ಗಣೇಶ್ ಬಂಗೇರ,ಗೋಲ್ಡ್ ಸ್ಮಿತ್ ಬ್ಯಾಂಕಿನ ಮ್ಯಾನೇಜರ್, ಕರ್ನಾಟಕ ಏಜೆನ್ಸಿ, ಕಾಂಚನಾ ಆಟೋಮೋಟಿವ್, ಪಿ.ಎಸ್.ಎನ್ ಮೋಟಾರ್ಸ್ ಮತ್ತು ಸಿಬ್ಬಂದಿಗಳು ಹಾಗೂ ಇತರರು ಆಗಮಿಸಿ ಶುಭಹಾರೈಸಿದರು.

ಆಗಮಿಸಿದ ಅಥಿತಿ ಗಣ್ಯರನ್ನು ಸಂಸ್ಥೆಯ ಸಿಬ್ಬಂದಿ ಅಶ್ವಿನ್ ಸ್ವಾಗತಿಸಿದರು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮಾಯಾ ಒಕ್ಕೂಟದ ಮೈಕ್ರೋ ಬಚತ್ ಪಾಲಿಸಿಯಿಂದ ಮಂಜೂರಾದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಉಜಿರೆ: ಅತ್ತಾಜೆ ಅರಫಾ ಜಾಮಿಅಃ ಮಸ್ಜಿದ್ ನಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

Suddi Udaya

ಬೆಳ್ತಂಗಡಿ ತೆರಿಗೆ ಸಲಹೆಗಾರ ಸಂದೇಶ ರಾವ್ ರವರ ಕಛೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಸೇವೆಯಾಟ ಪ್ರಾರಂಭದ ಸಭಾ ಕಾರ್ಯಕ್ರಮ

Suddi Udaya

ನಿಮ್ಮ ಮನೋಭಾವ ಒಳ್ಳೆಯದಾಗಿದ್ದರೆ ಕೌಶಲ್ಯಗಳ ಸದುಪಯೋಗ ಮಾಡಲು ಆಗುತ್ತದೆ: ಡಾ. ಸತೀಶ್ಚಂದ್ರ ಎಸ್.

Suddi Udaya

ಕೊರಂ ಕೊರತೆ : ಮೇಲಂತಬೆಟ್ಟು ಗ್ರಾಮ ಸಭೆ ಮುಂದೂಡಿಕೆ

Suddi Udaya
error: Content is protected !!